ತೊಗರಿ ಭಾವಾಂತರದಡಿ ಖರೀದಿಸಿ
Team Udayavani, Dec 14, 2018, 11:28 AM IST
ಕಲಬುರಗಿ: ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ದರದ ಸ್ಥಿರತೆ ಕಾಪಾಡುವ ಹಾಗೂ ರೈತರ ಜತೆಗೆ ವ್ಯಾಪಾರಿಗಳ ಹಿತ ಕಾಪಾಡುವ ಭಾವಾಂತರ ಯೋಜನೆ ಅಡಿ ಪ್ರಸಕ್ತವಾಗಿಯೇ ತೊಗರಿ ಖರೀದಿಸುವಂತೆ ಹಾಗೂ ಬಂದ್ ಆಗಿರುವ ದಾಲ್ಮಿಲ್ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳುವಂತೆ ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ (ಎಚ್ಕೆಸಿಸಿಐ) ಸಂಸ್ಥೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಗೆ ಮನವಿ ಸಲ್ಲಿಸಿದೆ.
ಈಗಾಗಲೇ ತೊಗರಿ ರಾಶಿಯಾಗಿ ಮಾರುಕಟ್ಟೆಗೆ ಪ್ರವೇಶಿಸುತ್ತಿದೆ. ಆದರೆ ಇಲ್ಲಿ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಯಲ್ಲಿ ಮಾರಾಟವಾಗುತ್ತಿದೆ. ಸರ್ಕಾರ ಬೆಂಬಲ ಬೆಲೆಯಲ್ಲಿ ಖರೀದಿಗೆ ಮುಂದಾದಲ್ಲಿ ರೈತರಿಗೆ ಸ್ವಲ್ಪ ಅನುಕೂಲವಾಗುತ್ತಿ¨. ಆದರೆ ವ್ಯಾಪಾರಿ (ಮಧ್ಯವರ್ತಿ)ಗಳಿಗೆ ಯಾವುದೇ ಅನುಕೂಲವಿಲ್ಲ. ಹೀಗಾಗಿ ಮಾರುಕಟ್ಟೆ ವ್ಯವಸ್ಥೆಗೆ
ಹೊಡೆತ ಬೀಳುತ್ತಿದೆ. ರೈತ ಹಾಗೂ ಮಧ್ಯವರ್ತಿ ಈ ಇಬ್ಬರ ಹಿತ ಕಾಪಾಡುವ ಭಾವಾಂತರ ಯೋಜನೆ ಕಾರ್ಯಾನುಷ್ಠಾನ ಗೊಳಿಸುವಂತೆ ಎಚ್ಕೆಸಿಸಿಐ ಅಧ್ಯಕ್ಷ ಅಮರನಾಥ ಪಾಟೀಲ ಹಾಗೂ ಗೌರವ ಕಾರ್ಯದರ್ಶಿ ಶಶಿಕಾಂತ ಪಾಟೀಲ ಸಿಎಂಗೆ ಬರೆಯಲಾದ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಪುನಶ್ಚೇತನಾ ವರದಿ ಧೂಳು: ಹಲವಾರು ಕಾರಣಗಳಿಂದ ಈ ಭಾಗದ ಪ್ರಮುಖ ಉದ್ಯಮವಾಗಿರುವ ದಾಲ್ ಮಿಲ್ಗಳು ಬಂದ್ಗಿರುವ ಹಾಗೂ ಪುನಶ್ಚೇತನಾ ಕುರಿತಾಗಿ ಜಿಲ್ಲಾ ಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಿ 11 ತಿಂಗಳುಗಳು ಗತಿಸಿದರೂ ಯಾವುದೇ ಬಗೆಯ ಆರ್ಥಿಕ ನೆರವಿನ ಪ್ಯಾಕೆಜ್ನ್ನು ಘೋಷಿಸಿರುವುದಿಲ್ಲ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಮುಖ್ಯಮಂತ್ರಿಗಳಿಗೂ ನಿಯೋಗದ ಮೂಲಕ ತೆರಳಿ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಡಲಾಗಿತ್ತು. ಆದರೆ ಇಂದಿನ ದಿನದವರೆಗೂ ಯಾವುದೇ ಚಕಾರವಿಲ್ಲ.
ಮುಖ್ಯವಾಗಿ ಪ್ರಸಕ್ತ ಚಾಲ್ತಿಯಲ್ಲಿರುವ ಬೆಳಗಾವಿ ಅಧಿವೇಶನದಲ್ಲೂ ಭಾವಾಂತರ ಯೋಜನೆ ಅಳವಡಿಸುವ ಇಲ್ಲವೆ ದಾಲ್ ಮಿಲ್ಗಳಿಗೆ ವಿಶೇಷ ನೆರವು ನೀಡುವ ಯಾವುದೇ ಸೂಚನೆಗಳು ಕಂಡು ಬರುತ್ತಿಲ್ಲ. ಬರೀ ಆಶ್ವಾಸನೆಗಳನ್ನು ನೀಡಲಾಗುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಪಾಟೀಲ್ದ್ವಯರು ಕಳವಳ ವ್ಯಕ್ತಪಡಿಸಿದ್ದಾರೆ.
ತೊಗರಿ ಭಾವಾಂತರ ಯೋಜನೆಯಡಿ ಸೇರ್ಪಡೆ ಹಾಗೂ ದಾಲ್ಮಿಲ್ಗಳ ಪುನಶ್ಚೇತನಾ ಸಂಬಂಧವಾಗಿ ಎಚ್ಕೆಸಿಸಿಐಗೆ ಈ ಹಿಂದೆ ಭೇಟಿ ನೀಡಿದ್ದ ಸಹಕಾರ ಸಚಿವ ಬಂಡೆಪ್ಪ ಖಾಶೆಂಪೂರ ಗಮನಕ್ಕೂ ತರಲಾಗಿದೆ. ಅಲ್ಲದೇ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ| ಟಿ.ಎನ್. ಪ್ರಕಾಶ ಕಮ್ಮರಡಿ ಅವರಿಗೂ ಮನವಿ ಸಲ್ಲಿಸಿದ ವೇಳೆ ಅವರು ಸಹಾಯ ಕಲ್ಪಿಸುವುದಾಗಿ ಭರವಸೆ ನೀಡಿದ್ದರು ಎಂದು ತಿಳಿಸಿದ್ದಾರೆ.
ಈಗ ಉತ್ತರ ಕರ್ನಾಟಕದ ರೈತರ ಎ.ಪಿ.ಎಂ.ಸಿ. ವರ್ತಕರ ಹಾಗೂ ದಾಲ್ ಮಿಲ್ಗಳ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ನೇರ ಖರೀದಿ ನೀತಿಯಿಂದಾಗಿ ರೈತರಿಗೆ, ಎಪಿಎಂಸಿ ವರ್ತಕರಿಗೆ, ಹಾಗೂ ದಾಲ್ಮಿಲ್ಗಳಿಗೆ ಆಗುತ್ತಿರುವ ಅನ್ಯಾಯವನ್ನು ಮನವರಿಕೆ ಮಾಡಿಕೊಟ್ಟು, ಭಾವಾಂತರ ಯೋಜನೆಯ ಅಳವಡಿಕೆ ಹೇಗೆ
ಸಹಕಾರಿಯಾಗಬಲ್ಲದು ಎಂದು ವಿವರಿಸಲು ಯೋಚಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ