ಪಡಿತರ ಅಕ್ಕಿ ಖರೀದಿ: ವ್ಯಕ್ತಿ ಬಂಧನ
Team Udayavani, Dec 19, 2021, 11:46 AM IST
ವಾಡಿ: ನ್ಯಾಯಬೆಲೆ ಅಂಗಡಿಗಳ ಮೂಲಕ ಬಡ ಕುಟುಂಬಗಳಿಗೆ ವಿತರಿಸ ಲಾಗುತ್ತಿರುವ ಅನ್ನಭಾಗ್ಯದ ಉಚಿತ ಅಕ್ಕಿಯನ್ನು ಪಡಿತರದಾರರಿಂದಲೇ ಖರೀದಿಸಿ ಮಾರಾಟ ಮಾಡುತ್ತಿದ್ದ ವ್ಯಾಪಾರಿಯೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ.
ರಾವೂರ ಗ್ರಾಮದ ಕಿರಾಣಿ ವ್ಯಾಪಾರಿ ಸಿದ್ಧಯ್ಯಸ್ವಾಮಿ ನಂದಿಕೋಲ ಬಂಧಿತ ಆರೋಪಿತ.
ಗ್ರಾಮದ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಅಕ್ಕಿ ಪಡೆದುಕೊಂಡ ಪಡಿತರದಾರರಿಗೆ ಹಣದ ಆಮಿಷ ತೋರಿಸಿ ಕಡಿಮೆ ದರದಲ್ಲಿ ದಾಸ್ತಾನು ಖರೀದಿಸುವ ಮೂಲಕ ಹಣ ಮಾಡುತ್ತಿದ್ದ ಎನ್ನಲಾಗಿದೆ. ಹೀಗೆ ಅಂಗಡಿಯಲ್ಲಿ ಸಂಗ್ರಹಿಸಿದ್ದ ಸರ್ಕಾರದ ಅನ್ನಭಾಗ್ಯದ ಅಕ್ಕಿಯನ್ನು ಶನಿವಾರ ವಾಹನದಲ್ಲಿ ತುಂಬಿ ಶಹಾಬಾದ ಮಾರುಕಟ್ಟೆಗೆ ಸಾಗಿಸುತ್ತಿದ್ದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಾಡಿ ಠಾಣೆ ಪಿಎಸ್ಐ ವಿಜಯಕುಮಾರ ಭಾವಗಿ ಹಾಗೂ ಸಿಬ್ಬಂದಿ ಆರೋಪಿಯನ್ನು ಬಂಧಿಸುವ ಮೂಲಕ ಅಕ್ರಮ ದಂಧೆಗೆ ಬಳಸಿದ್ದ ವಾಹನ ಮತ್ತು ಅಕ್ಕಿ ದಾಸ್ತಾನು ಜಪ್ತಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ