ಬಂಡವಾಳ ಹೂಡಿಕೆಯೊಂದಿಗೆ ಕೌಶಲ ಹೆಚ್ಚಿಸಿಕೊಳ್ಳಲು ಕರೆ

ವಿಶ್ವ ಛಾಯಾಗ್ರಾಹಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಧಕರ ಸನ್ಮಾನ

Team Udayavani, Aug 20, 2019, 11:11 AM IST

gb-tdy-1

ಕಲಬುರಗಿ: ವಿಶ್ವ ಛಾಯಾಗ್ರಾಹಕರ ದಿನಾಚರಣೆ ಅಂಗವಾಗಿ ಸಾಧಕ ಛಾಯಾಗ್ರಾಹಕರನ್ನು ಸನ್ಮಾನಿಸಲಾಯಿತು.

ಕಲಬುರಗಿ: ಬದಲಾದ ಪರಿಸ್ಥಿತಿಯಲ್ಲಿ ಪೋಟೋಗ್ರಾಫಿ ಹೆಚ್ಚಿನ ಬಂಡವಾಳ ಹೂಡಿಕೆ ಉದ್ಯೋಗವಾಗಿ ಪರಿಣಮಿಸಿದೆ. ಹೀಗಾಗಿ ಕ್ಯಾಮೆರಾ ಇನ್ನಿತರ ಉನ್ನತ ತಂತ್ರಜ್ಞಾನದ ಸಲಕರಣೆಗಳ ಮೇಲೆ ಹೂಡಿಕೆ ಮಾಡುವ ಜತೆಗೆ ಛಾಯಾಗ್ರಹಣ ಕೌಶಲಗಳನ್ನು ಹೆಚ್ಚಿಸಿಕೊಳ್ಳುವುದು ಅತ್ಯಂತ ಅಗತ್ಯ ಎಂದು ಛಾಯಾಗ್ರಾಹಕರ ತರಬೇತುದಾರ ಹೊಸಪೇಟೆಯ ಖಾಜಾಪೀರ್‌ ಹೇಳಿದರು.

ನಗರದ ಸೂಪರ್‌ ಮಾರ್ಕೆಟ್‌ನಲ್ಲಿರುವ ಚೇಂಬರ್‌ ಆಫ್ ಕಾಮರ್ಸ್‌ ಸಭಾಂಗಣದಲ್ಲಿ ಜಿಲ್ಲಾ ಛಾಯಾಗ್ರಾಹಕರ ಸಂಘ ಹಮ್ಮಿಕೊಂಡಿದ್ದ ವಿಶ್ವ ಛಾಯಾಗ್ರಾಹಕರ ದಿನಾಚರಣೆ ಹಾಗೂ ಫೋಟೋ ಗ್ರಾಫಿಯಲ್ಲಿ ಆವಿಷ್ಕಾರಗೊಂಡ ಹೊಸ ತಂತ್ರಜ್ಞಾನ ಕುರಿತ ಸಂವಾದದಲ್ಲಿ ಅವರು ಮಾತನಾಡಿದರು.

ತಂತ್ರಜ್ಞಾನ ಯುಗದಲ್ಲಿ ಅಪ್‌ಡೇಟ್ ಆಗಿ ತಂತ್ರಜ್ಞಾನಗಳ ಲಾಭ ಪಡೆದುಕೊಳ್ಳಬೇಕು. ಕಡಿಮೆ ಬೆಲೆ ಕ್ಯಾಮೆರಾಗಳಲ್ಲೂ ಅತ್ಯುತ್ತಮ ಚಿತ್ರ ತೆಗೆಯಬಹುದು. ಚಿತ್ರ ಸೆರೆ ಹಿಡಿದ ನಂತರ ತಂತ್ರಜ್ಞಾನದ ಸ್ಪರ್ಶ ನೀಡಿದರೇ ಮಾದರಿ ಚಿತ್ರಗಳನ್ನು ಪಡೆಯಬಹುದು. ಅದಕ್ಕಾಗಿ ಆಸಕ್ತಿ ಬೆಳೆಸಿಕೊಂಡು ಕಲೆ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ಹ್ಯಾಕರ್ಗಳು ಬಿಡುವ ವೈರಸ್‌ಗಳಿಂದಾಗಿ ಬೆಲೆ ಬಾಳುವ ಫೋಟೋಗಳು ಹಾಳಾಗಿ ಹೋಗುತ್ತಿವೆ. ಹೀಗಾಗಿ ಎಚ್ಚರಿಕೆ ವಹಿಸಬೇಕು. 200 ದೇಶಗಳಲ್ಲಿ ಫೋಟೋಗ್ರಾಫ‌ರ್‌ಗಳು ರ್ಯಾನ್‌ಸಮ್‌ವೇರ್‌ ಎಂಬ ವೈರಸ್‌ ಕಾಟದಿಂದ ತತ್ತರಿಸಿ ಹೋಗಿದ್ದಾರೆ. ಇದೊಂದು ಸೈಬರ್‌ ಕ್ರೈಂ ಆಗಿದ್ದು, ಹೀಗಾಗಿ ಜಾಗೃತಿ ಮೂಡಿಸಲು ಶ್ರಮಿಸಲಾಗುತ್ತಿದೆ. ಸೈಬರ್‌ ಕ್ರೈಂ ಜಾಗೃತಿ ಸಮಿತಿ ಸಹ ರಚಿಸಲಾಗುತ್ತಿದೆ ಎಂದು ಹೇಳಿದರು.ಪತ್ರಕರ್ತ ಬಾಬುರಾವ ಯಡ್ರಾಮಿ ಕಾರ್ಯಕ್ರಮ ಉದ್ಘಾಟಿಸಿದರು.

ಜಿಲ್ಲಾ ಛಾಯಾಚಿತ್ರಗ್ರಾಹಕರ ಸಂಘದ ಕಾರ್ಯದರ್ಶಿ ಗುಂಡೇರಾವ ಭೂಸನೂರ ಅಧ್ಯಕ್ಷತೆ ವಹಿಸಿದ್ದರು. ಕಲಾವಿದ ಅಯಾಜುದ್ದೀನ್‌ ಪಟೇಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ಮತ್ತು ನಂದಕುಮಾರ ನಿರೂಪಿಸಿದರು.

ನಂತರ ನಡೆದ ತಾಂತ್ರಿಕ ಗೋಷ್ಠಿಯಲ್ಲಿ ಖಾಜಾಪೀರ್‌ ವಿಶೇಷ ಉಪನ್ಯಾಸ ನೀಡಿದರು. ಬಾಬುರಾವ ಸ್ವಾಮಿ, ಸಂಜಯ ಸೇರಿದಂತೆ ನಗರ ಮತ್ತು ಜಿಲ್ಲೆಯ ಛಾಯಾಗ್ರಾಹಕರು ಪಾಲ್ಗೊಂಡಿದ್ದರು.

ಫೋಟೋಗ್ರಾಫಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಹಿರಿಯ ಛಾಯಾಚಿತ್ರಗಾರರಾದ ಮಹ್ಮದಅಲಿ ಮಹ್ಮದ್‌ ಇಸ್ಮಾಯಿಲ್ ಫ‌ೂಲ್ವಾಲೆ (ಸೂಪರ್‌ ಸ್ಟುಡಿಯೊ), ರುದ್ರಪ್ಪ ಎಸ್‌.ಪಾಟೀಲ್ (ಶಿವರಾಜ ಸ್ಟುಡಿಯೊ), ಫೋಟೋ ಕಲಾವಿದ ಜಗನ್ನಾಥ ವಿ.ಡಿಗ್ಗಿ, ಶ್ರೀಮಂತ ಶೀಲವಂತ (ತುಳಸಿ ಸ್ಟುಡಿಯೊ), ವಿಜಯಕುಮರ ಎಸ್‌. ಪುರಾಣಿಕಮಠ (ಸೂರಜ್‌ ಫೋಟೋ ಪ್ಲಾಷ್‌ ಕಲರ್‌ ಲ್ಯಾಬ್‌) ಹಾಗೂ ಚಂದನ ಕಲರ್‌ ಲ್ಯಾಬ್‌ನ ಎಂ.ಎನ್‌.ಎಸ್‌.ಶಾಸ್ತ್ರೀ ಮತ್ತು ರತ್ನಾಕರ್‌ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.

ಸಂಘದ ಉಪಾಧ್ಯಕ್ಷ ರಾಜೇಶ ಮಹಿಂದ್ರಕರ್‌, ಖಜಾಂಚಿ ನಂದಕುಮರ ಜಾಕ್ನಳ್ಳಿ,ಅಡಳಿತ ಮಂಡಳಿ ಸದಸ್ಯರಾದ ರಾಜೇಂದ್ರಸ್ವಾಮಿ ಬಾಬುರಾವ ಅಂತೂರಮಠ, ನರೇಶ ಮಹಿಂದ್ರಕರ್‌, ರಾಜಶೇಖರ ಹತ್ತೂರೆ, ಚಂದ್ರಶೇಖರ ಮಡಿವಾಳ,ಮಲ್ಲಿಕಾರ್ಜುನ ಲಿಗಾಡೆ, ಅನಿಲ್ ಮಹಿಂದ್ರಕರ್‌, ಲಾರಾ ದೇಸಾಯಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.