ಹಳಕರ್ಟಿ ಖದೀರಿ ದರ್ಗಾ ಉರುಸ್‌ ರದ್ದು

ೂಲೀಸ್‌ ಸುಪರ್ದಿಯಲ್ಲಿ ದರ್ಗಾ: ತಹಶೀಲ್ದಾರ್‌ ಹಳ್ಳೆ

Team Udayavani, Sep 1, 2020, 5:55 PM IST

GB-TDY-1

ವಾಡಿ: ಹೊರ ರಾಜ್ಯಗಳ ಲಕ್ಷಾಂತರ ಭಕ್ತರನ್ನು ಹೊಂದಿರುವ ಹಳಕರ್ಟಿ ಖದೀರಿ ದರ್ಗಾ ಉರುಸ್‌ (ಜಾತ್ರೆ) ಕೋವಿಡ್‌-19 ಹಿನ್ನೆಲೆಯಲ್ಲಿ ಈ ವರ್ಷ ರದ್ದುಗೊಳಿಸಲಾಗಿದ್ದು, ಸೆ.1ರಿಂದ ಮೂರು ದಿನಗಳ ಕಾಲ ಇಡೀ ದರ್ಗಾ ಪೊಲೀಸ್‌ ಸುಪರ್ದಿಯಲ್ಲಿ ಇರಲಿದೆ ಎಂದು ತಹಶೀಲ್ದಾರ್‌ ಉಮಾಕಾಂತ ಹಳ್ಳೆ ಹೇಳಿದರು.

ಹಳಕರ್ಟಿ ದರ್ಗಾದಲ್ಲಿ ದರ್ಗಾ ಶರೀಫ್‌ ಅಬುತುರಾಬ ಶಹಾ ಖಾದ್ರಿ ಅವರೊಂದಿಗೆ ಸೋಮವಾರ ನಡೆದ ಸಭೆಯಲ್ಲಿ ಕೊರೊನಾ ನಿಯಂತ್ರಣದ ನಿಯಮಾವಳಿಗಳನ್ನು ಉರುಸ್‌ ಸಮಿತಿಗೆ ವಿವರಿಸಿ ಮಾತನಾಡಿದ ಅವರು, ಕೋವಿಡ್ ಹರಡುವಿಕೆ ತಡೆಗಟ್ಟಲು ಧಾರ್ಮಿಕ ಹಾಗೂ ಸಾರ್ವಜನಿಕ ಸಭೆ-ಸಮಾರಂಭಗಳಿಗೆ ಅವಕಾಶ ಇಲ್ಲ. ಪರಿಣಾಮ ಹಳಕರ್ಟಿ ದರ್ಗಾ ಉರುಸ್‌, ಸಂಧಲ್‌ ಮೆರವಣಿಗೆ, ಸರ್ವಧರ್ಮ ಸಮ್ಮೇಳನ, ಖವ್ವಾಲಿ ಗಾಯನ ಸೇರಿದಂತೆ ಯಾವುದೇ ಸಾಂಪ್ರದಾಯಿಕ ಕಾರ್ಯಕ್ರಮ ನಡೆಸುವಂತಿಲ್ಲ. ಮಂಗಳವಾರದಿಂದ ಮೂರು ದಿನಗಳ ಕಾಲ ಭಕ್ತರು ದರ್ಗಾ ಆವರಣಕ್ಕೆ ಬರುವಂತಿಲ್ಲ. ಹೊರ ರಾಜ್ಯಗಳಿಂದ ಬರುವ ಭಕ್ತರಿಗೆ ದರ್ಗಾ ಸಮಿತಿಯೇ ತಡೆಯಬೇಕು. ದರ್ಗಾ ಸಾಹೇಬರ ಕುಟುಂಬಸ್ಥರಿಗೆ ಮಾತ್ರ ಸಾಮಾಜಿಕ ಅಂತರ ಕಾಪಾಡಿಕೊಂಡು ಧಾರ್ಮಿಕ ಆಚರಣೆಗಳನ್ನು ಸರಳ ರೀತಿಯಲ್ಲಿ ಕೈಗೊಳ್ಳಲು ಅವಕಾಶ ನೀಡಲಾಗುವುದು ಎಂದರು.

ಆಗ ಹಳಕರ್ಟಿ ಖ್ವಾದ್ರಿ ದರ್ಗಾದ ಪೀಠಾಧಿಪತಿ ಅಬುರುತಾಬ ಶಹಾ ಖ್ವಾದ್ರಿ ಮಾತನಾಡಿ, ಸರಕಾರದ ಕೋವಿಡ್ ಹೋರಾಟದಲ್ಲಿ ಹಳಕರ್ಟಿ ದರ್ಗಾ ಸಮಿತಿಯೂ ಜತೆಗಿದೆ. ಒಂದು ತಿಂಗಳು ಕಾಲ ಇಡೀ ದರ್ಗಾ ವಲಸೆ ಕಾರ್ಮಿಕರ ಕ್ವಾರಂಟೈನ್‌ ಕೇಂದ್ರ ಮಾಡಲು ಅವಕಾಶ ನೀಡಿದ್ದೇವೆ. ಕೋವಿಡ್ ಸಂಕಷ್ಟದಲ್ಲಿ ಬಡ ಕುಟುಂಬಗಳಿಗೆ ಪಡಿತರ, ಮಾಸ್ಕ್, ಸ್ಯಾನಿಟೈಸರ್‌ ವಿತರಿಸಿದ್ದೇವೆ. ಈಗ ಉರುಸ್‌ ಕೂಡ ರದ್ದುಪಡಿಸುವ ನಿರ್ಣಯ ಕೈಗೊಂಡಿದ್ದೇವೆ.

ಹೈದರಾಬಾದ್‌ನಿಂದ ವಿಶೇಷ ರೈಲಿನಲ್ಲಿ ಬರುತ್ತಿದ್ದ ಸಂಧಲ್‌ ಈ ವರ್ಷ ಬರುವುದಿಲ್ಲ. ಹೈದರಾಬಾದ್‌ ಮತ್ತು ಮಹಾರಾಷ್ಟ್ರದಿಂದ ಆಗಮಿಸುತ್ತಿದ್ದ ಲಕ್ಷಾಂತರ ಜನ ಭಕ್ತರಿಗೂ ಉರುಸ್‌ ರದ್ದಾದ ಬಗ್ಗೆ ಮಾಹಿತಿ ರವಾನಿಸಿದ್ದೇವೆ. ಸರ್ವಧರ್ಮ ಸಮ್ಮೇಳನವೂ ಕೈಬಿಟ್ಟಿದ್ದೇವೆ. ಉರುಸ್‌ ನಿಮಿತ್ತ ಮುದ್ರಣಗೊಂಡಿದ್ದ ಕರಪತ್ರಗಳು ಮತ್ತು ಪೋಸ್ಟರ್‌ಗಳು ನಿಷ್ಕ್ರಿàಯಗೊಳಿಸಿದ್ದೇವೆ. ಕಾನೂನು ಚೌಕಟ್ಟಿನಲ್ಲಿ ಸರಳವಾಗಿ ನಾವು ಕುಟುಂಬಸ್ಥರೇ ಪೂಜೆ ನೆರವೇರಿಸಿ ಸಂಪ್ರದಾಯ ಪೂರ್ಣಗೊಳಿಸುತ್ತೇವೆ ಎಂದು ಭರವಸೆ ನೀಡಿದರು.

ಸಿಪಿಐ ಕೃಷ್ಣಪ್ಪ ಕಲ್ಲದೇವರು, ಪಿಎಸ್‌ಐ ವಿಜಯಕುಮಾರ ಭಾವಗಿ, ಎಎಸ್‌ಐ ಚೆನ್ನಮಲ್ಲಪ್ಪ ಪಾಟೀಲ, ವಿಶೇಷ ಪೇದೆ ದೊಡ್ಡಪ್ಪ ಪೂಜಾರಿ ಸೇರಿದಂತೆ ದರ್ಗಾ ಸಮಿತಿಯಮುಖಂಡರು ಇದ್ದರು.

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.