ತರ್ಕಸ್‌ಪೇಟೆಗೆ ಬಾರದ ಅಭ್ಯರ್ಥಿಗಳು


Team Udayavani, May 1, 2018, 1:08 PM IST

gul-3.jpg

ವಾಡಿ: ಎಲ್ಲೆಡೆ ಹಳ್ಳಿ ಕಟ್ಟೆಗಳಿಗೆ ಚುನಾವಣೆ ಜ್ವರ ತಗುಲಿದ್ದು, ಗ್ರಾಮಸ್ಥರು ಮತ ಪ್ರಚಾರದ ಗುಂಗಿನಲ್ಲಿದ್ದಾರೆ. ಆದರೆ, ಈ
ಗ್ರಾಮದಲ್ಲಿ ರಾಜಕೀಯ ಚಟುವಟಿಕೆಗಳೇ ಸ್ಥಬ್ದವಾಗಿವೆ. ಕಾಂಗ್ರೆಸ್‌ ಹಾಗೂ ಬಿಜೆಪಿ ಸೇರಿದಂತೆ ಯಾವ ಪಕ್ಷದ ಅಭ್ಯರ್ಥಿಗಳೂ ಈ ಗ್ರಾಮಕ್ಕೆ ಕಾಲಿಟ್ಟಿಲ್ಲ. ರಾಜಕೀಯ ಘೋಷಣೆಗಳಿಲ್ಲ. ಗೋಡೆಗಳಿಗೆ ಬರಹಗಳಿಲ್ಲ. ಮತಯಾಚಿಸುವರರ ದಂಡಿಲ್ಲ. ಒಟ್ಟಾರೆ ಚುನಾವಣೆಯ ಯಾವ ಲಕ್ಷಣವೂ ಈ ಗ್ರಾಮದಲ್ಲಿ ಕಂಡು ಬರುತ್ತಿಲ್ಲ.

ನಮ್ಮೂರಿಗೆ ಬಂದು ಮತ ಕೇಳಲು ಯಾರಿಗೆ ಧೈರ್ಯವಿದೆ ನೋಡ್ತೀವಿ ಎಂದು ಗ್ರಾಮಸ್ಥರು ಗುಡುಗಿದ್ದರಿಂದ ಪ್ರಚಾರಕ್ಕೆ ಬರಲು ಅಭ್ಯರ್ಥಿಗಳು ಹೆದರುತ್ತಿದ್ದಾರೆ. ಕಾಂಗ್ರೆಸ್‌ನಿಂದ ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ಬಿಜೆಪಿಯಿಂದ ವಾಲ್ಮೀಕಿ ನಾಯಕ ಕಣದಲ್ಲಿರುವ ಚಿತ್ತಾಪುರ ಮೀಸಲು ಮತಕ್ಷೇತ್ರದ ನಾಲವಾರ ಹೋಬಳಿ ವ್ಯಾಪ್ತಿಯಲ್ಲಿ ಬರುವ ತರ್ಕಸ್‌ ಪೇಟೆ ಗ್ರಾಮಕ್ಕೆ ಬರಲು ರಾಜಕಾರಣಿಗಳು ಹಿಂದೇಟು ಹಾಕುತ್ತಿದ್ದಾರೆ. 

ಗ್ರಾಮಸ್ಥರು ಮತದಾನ ಬಹಿಷ್ಕಾರ ಬೆದರಿಕೆಗೆ ಹೆದರಿರುವ ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರುಗಳೆಲ್ಲ ಗ್ರಾಮದಲ್ಲಿ ಮತಪ್ರಚಾರ ಕೈಬಿಟ್ಟಿದ್ದಾರೆ. ಪಕ್ಷೇತರರಾಗಿ ಸ್ಪರ್ಧಿಸಿದ ಏಳು ಜನ ಅಭ್ಯರ್ಥಿಗಳು ಸಹ ಇತ್ತ ಸುಳಿದಿಲ್ಲ. ಕ್ಷೇತ್ರದ ಎಲ್ಲ ಗ್ರಾಮಗಳಿಗೂ ಭೇಟಿ ನೀಡಿ ಮತದಾರರನ್ನು ಭೇಟಿ ಮಾಡುತ್ತಿರುವ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕ್‌ ಖರ್ಗೆ ಹಾಗೂ ಬಿಜೆಪಿಯ ವಾಲ್ಮೀಕಿ ನಾಯಕ ತರ್ಕಸ್‌ಪೇಟೆಯತ್ತ ಮುಖ ಮಾಡದಿರುವುದು ಚರ್ಚೆಗೆ ಗ್ರಾಸವಾಗಿದೆ.

ತಮ್ಮ ಗ್ರಾಮಕ್ಕೆ ಮಂಜೂರಾಗಿದ್ದ ಗ್ರಾಪಂ ಕೇಂದ್ರ ಸ್ಥಾನಮಾನವು ಪಕ್ಕದ ಮತ್ತೂಂದು ಗ್ರಾಮಕ್ಕೆ ವರ್ಗಾಯಿಸಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಕಾಂಗ್ರೆಸ್‌ನ ಸಚಿವ ಪ್ರಿಯಾಂಕ್‌ ಖರ್ಗೆ ಅವರೇ ಅವಕಾಶ ತಪ್ಪಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ನಮ್ಮ ನೆರವಿಗೆ ಬಿಜೆಪಿಯವರು ಸೇರಿದಂತೆ ಯಾರೂ ಬರಲಿಲ್ಲ ಎನ್ನುವುದೇ ಗ್ರಾಮಸ್ಥರ ಆಕ್ರೋಶ ಭುಗಿಲೇಳಲು
ಕಾರಣವಾಗಿದೆ. ಆದ್ದರಿಂದ ಚುನಾವಣೆ ಬಹಿಷ್ಕಾರ ನಿರ್ಧಾರ ಪ್ರಕಟಿಸಿದ್ದಾರೆ. 

ಕೊಲ್ಲೂರ ಗ್ರಾಪಂ ವಿಂಗಡಿಸಿ ರಾಂಪುರಹಳ್ಳಿ, ತರ್ಕಸ್‌ಪೇಟೆ ಹಾಗೂ ಮಾರಡಗಿ ಗ್ರಾಮಗಳ ಮಧ್ಯೆ ಹೊಸ ಗ್ರಾಪಂ ಘೋಷಣೆಯಾಗಿತ್ತು. ಗ್ರಾಪಂ ಕೇಂದ್ರ ಸ್ಥಾನಮಾನಕ್ಕಾಗಿ ತರ್ಕಸ್‌ಪೇಟೆ ಮತ್ತು ರಾಂಪುರಹಳ್ಳಿ ಗ್ರಾಮಸ್ಥರ ಮಧ್ಯೆ ಹಗ್ಗಜಗ್ಗಾಟ ನಡೆದು ಪ್ರಕರಣ ನ್ಯಾಯಾಲಯದ ಮೆಟ್ಟಿಲು ಏರಿತ್ತು.

ರಾಂಪುರಹಳ್ಳಿಗೆ ಗ್ರಾಪಂ ಸ್ಥಾನಮಾನ ದಕ್ಕಿದ್ದರಿಂದ ಅಸಮಾಧಾನಗೊಂಡ ತರ್ಕಸ್‌ಪೇಟೆ ಗ್ರಾಮಸ್ಥರು, ಹೋರಾಟದ ಮುಂದುವರಿದ ಭಾಗವಾಗಿ ಚುನಾವಣೆ ಬಹಿಷ್ಕಾರ ನಿರ್ಧಾರ ಮಾಡಿರುವುದು ಅಧಿಕಾರಿಗಳಿಗೆ ಹಾಗೂ ರಾಜಕೀಯ ಪಕ್ಷಗಳ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.

ಚುನಾವಣಾ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಮನಪರಿವರ್ತನೆಗೆ ಪ್ರಯತ್ನ ನಡೆಸಿದ್ದಾರಾದರೂ ಪ್ರಯೋಜನವಾಗಿಲ್ಲ. ಗ್ರಾಮಕ್ಕೆ ಗ್ರಾಪಂ ಸ್ಥಾನಮಾನ ನೀಡುವ ಭರವಸೆ ನೀಡುವುದಾದರೆ ಮಾತ್ರ ಮತದಾನದಲ್ಲಿ ಪಾಲ್ಗೊಳ್ಳುತ್ತೇವೆ ಎಂದು ಗ್ರಾಮದ ಹಿರಿಯ ಮುಖಂಡರು ಪ್ರತಿಕ್ರಿಯಿಸಿರುವುದು ಕಾಂಗ್ರೆಸ್‌-ಬಿಜೆಪಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. 

ನಮ್ಮೂರಿಗೆ ಗ್ರಾಪಂ ಸ್ಥಾನಮಾನ ಸಿಗಲು ಎಲ್ಲ ಅರ್ಹತೆಗಳಿದ್ದರೂ ಶಾಸಕರು ಅವಕಾಶ ತಪ್ಪಿಸಿದ್ದಾರೆ. ಅನ್ಯಾಯ ಪ್ರತಿಭಟಿಸಿ ಹೋರಾಟಕ್ಕಿಳಿದರೂ ಬಿಜೆಪಿಯವರಾಗಲಿ ಅಥವಾ ಬೇರೆ ಯಾವೂದೇ ಪಕ್ಷದವರಾಗಲಿ ನಮ್ಮೊಂದಿಗೆ ನಿಂತಿಲ್ಲ. ರಾಜಕಾರಣಿಗಳ ಮೇಲೆ ಇಡೀ ಗ್ರಾಮಸ್ಥರಿಗೆ ಅಸಮಾಧನವಿದೆ. ಹೀಗಾಗಿ ಚುನಾವಣೆ ಬಹಿಷ್ಕಾರ ನಿರ್ಧಾರಕ್ಕೆ ಬಂದಿದ್ದೇವೆ. ನ್ಯಾಯ ಒದಗಿಸುವುದಾಗಿ ಲಿಖೀತ ಭರವಸೆ ನೀಡಿದರೆ ಮಾತ್ರ ನಿರ್ಧಾರ ಹಿಂಪಡೆಯುತ್ತೇವೆ. 
 ದಾನಪ್ಪಗೌಡ ನೀಲಗಲ್‌, ಹಿರಿಯ ಮುಖಂಡ ತರ್ಕಸ್‌ಪೇಟೆ

„ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.