ಆಳಂದ ಪ್ರಕರಣ: ಒಂದೇ ಎಫ್ಐಆರ್ನಲ್ಲಿ ಮೂರು ಸಾವಿರ ಆರೋಪಿಗಳ ಹೆಸರು ಉಲ್ಲೇಖ
Team Udayavani, Mar 4, 2022, 11:15 AM IST
ಆಳಂದ: ಒಂದು ಗುಂಪಿನ ವಾದದಂತೆ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿನ ರಾಘವಚೈತನ್ಯ ಲಿಂಗದ ಪೂಜೆ ಮತ್ತು ಶುದ್ಧೀಕರಣ ವಿವಾದಕ್ಕೆ ಸಂಬಂಧಿಸಿದಂತೆ ಮಾ.1ರಂದು ಪಟ್ಟ ಣದಲ್ಲಿ ನಡೆದ ಗಲಭೆ ಪ್ರಕರಣದ ವಿಡಿಯೋ ಚಿತ್ರೀಕಣ ಆಧರಿಸಿ ಆರೋಪಿಗಳ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.
ಈಗಾಗಲೇ ಅಲ್ಪಸಂಖ್ಯಾತರ ಮೇಲೆ ದಾಖಲಾದ ಐದು ಪ್ರಕರಣಗಳ ಪೈಕಿ ಎಫ್ಐಆರ್ವೊಂದರಲ್ಲಿ 2500ರಿಂದ 3000 ಜನರಿದ್ದು, ಈ ಪೈಕಿ ಬುಧವಾರ 167 ಜನರನ್ನು ಬಂಧಿಸಲಾಗಿದೆ.
ಗುರುವಾರ ಮತ್ತೆ ಮೂವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸುವ ಪ್ರಕ್ರಿಯೆ ನಡೆಸಲಾಗುತ್ತಿದೆ. ಮಾ.1ರಂದು ಶಿವ ಲಿಂಗದ ಪೂಜೆಗೆ ತೆರಳುವ ವೇಳೆ ಕೇಂದ್ರ ಸಚಿವ ಭಗವಂತ ಖೂಬಾ ಸೇರಿ ಬಿಜೆಪಿಯ ಹಲವು ಶಾಸಕರು, ಮುಖಂಡರು ಮತ್ತು ಇನ್ನಿತರ ಕಾರ್ಯಕರ್ತರಿಂದ 144 ಕಲಂ ನಿಷೇಧಾಜ್ಞೆ ಉಲ್ಲಂಘನೆ ಆರೋಪ ಕುರಿತು ಅಧಿಕಾರಿಗಳು ಕೈಗೊಂಡ ನಿರ್ಧಾರದ ಬಗ್ಗೆ ತಿಳಿದುಬಂದಿಲ್ಲ.
ಪೋಲಿಸರ ಮೇಲೆ ದಾಳಿ ಮಾಡಿ, ಕಲ್ಲುಗಳಿಂದ ಹೊಡೆದು ಜೀವಕ್ಕೆ ಹಾನಿಯುಂಟು ಮಾಡುವ ಸಂಚು ರೂಪಿಸಿದ್ದು ಕಂಡುಬಂದ ಹಿನ್ನೆಲೆಯಲ್ಲಿ ಕೆಲ ಮುಸ್ಲಿಂ ಮುಖಂಡರು, ಮಹಿಳೆಯರು, ಯುವಕರನ್ನು ಒಳಗೊಂಡು ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಆರೋಪಿಗಳ ಬಂಧನಕ್ಕೆ ವ್ಯಾಪಕ ಜಾಲಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ