ಪಾಲಿಕೆ ಸ್ಥಾಯಿ ಸಮಿತಿಗೆ ಅಧ್ಯಕ್ಷರ ಆಯ್ಕೆ
Team Udayavani, Jan 12, 2019, 5:23 AM IST
ಕಲಬುರಗಿ: ಮಹಾನಗರ ಪಾಲಿಕೆ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆ ನಗರದ ಇಂದಿರಾ ಸ್ಮಾರಕ ಭವನದಲ್ಲಿ ನಡೆಯಿತು. ಪಾಲಿಕೆಯ ಕರ, ಹಣಕಾಸು ಮತ್ತು ಮೇಲ್ಮನವಿ ಸ್ಥಾಯಿ ಸಮಿತಿಯ ಅಧ್ಯಕ್ಷ ರಮೇಶ ಟಿ. ಕಮಕನೂರ, ಸಾರ್ವಜನಿಕ ಆರೋಗ್ಯ ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಮಹ್ಮದ್ ಅಜಮಲ್ ಗೋಳಾ, ಪಾಲಿಕೆ ನಗರ ಯೋಜನೆ ಹಾಗೂ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರಾಜಕುಮಾರ ಎಚ್. ಕಪನೂರ ಅವರನ್ನು ಆಯ್ಕೆ ಮಾಡಲಾಯಿತು.
ಇದೇ ವೇಳೆ ಪಾಲಿಕೆಯಿಂದ ಕುಡಾ ಸದಸ್ಯರಾಗಿ ರಹೀಂಮುಲ್ಲಾ, ಪಾಲಿಕೆ ಆಡಳಿತ ಪಕ್ಷದ ನಾಯಕರಾಗಿ ಸಲೀಂ ಭಾಯ್ ಅವರನ್ನು ಆಯ್ಕೆ ಮಾಡಲಾಯಿತು. ಸ್ಥಾಯಿ ಸಮಿತಿ ಅಧ್ಯಕ್ಷರು, ಕುಡಾ ಸದಸ್ಯರು ಹಾಗೂ ಆಡಳಿತ ಪಕ್ಷದ ನಾಯಕರಾಗಿ ಆಯ್ಕೆಯಾದವರಿಗೆ ಪಾಲಿಕೆ ಮೇಯರ್ ಮಲ್ಲಮ್ಮ ಸಿದ್ದರಾಮಪ್ಪ ವಳಕೇರಿ, ಉಪಮೇಯರ್ ಆಲಿಯಾ ಸಿರೀನ್ ಹೂಗುಚ್ಛ ನೀಡಿ ಸನ್ಮಾನಿಸಿದರು.
ಮಜರ್ ಆಲಂ ಖಾನ್, ಗಣೇಶ ವಳಕೇರಿ, ವಾಹೇದ್ ಅಲಿ ಫಾತೇಖಾನ್, ಹುಲಿಗೆಪ್ಪ ಕನಕಗಿರಿ, ಮಹೇಶ ಹೋಸೂರಕರ್, ಜಾವೀದ್ ಎನ್ಆರ್ಐ, ಅಸ್ಫಕ್ ಅಹ್ಮದ್ ಚುಲಬುಲ್, ರಾಜಶ್ರೀ ಜಾಧವ, ಈರಣ್ಣ ಹೊನ್ನಳ್ಳಿ, ಶಂಕರಸಿಂಗ್, ಈರಣ್ಣ ಝಳಕಿ, ಶಫಿ ಹುಂಡೇಕಾರ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ