ನಿರ್ವಹಣೆಯಿಲ್ಲದೇ ಸೊರಗಿದ ಚಂದ್ರಂಪಳ್ಳಿ ಜಲಾಶಯ


Team Udayavani, Jul 25, 2022, 10:36 AM IST

5water

ಚಿಂಚೋಳಿ: ತಾಲೂಕಿನ ರೈತರ ಜೀವನಾಡಿಯಾ ಗಿರುವ ಚಂದ್ರಂಪಳ್ಳಿ ಜಲಾಶಯಕ್ಕೆ ಸೂಕ್ತ ನಿರ್ವಹಣೆ ಇಲ್ಲದೇ ಇರುವುದರಿಂದ ಮಣ್ಣಿನ ಒಡ್ಡಿನ ಮೇಲೆ ಸಣ್ಣಪುಟ್ಟ ಗಿಡಗಳು ಬೆಳೆದಿವೆ.

ತಾಲೂಕಿನ ವನ್ಯಜೀವಿಧಾಮ ಅರಣ್ಯಪ್ರದೇಶ ಗಳಿಂದ ಹರಿಯುವ ಸರನಾಲೆಗೆ ಚಂದ್ರಂಪಳ್ಳಿ ಗ್ರಾಮದ ಬಳಿ ಇರುವ ಗುಡ್ಡಗಾಡು ಪ್ರದೇಶದಲ್ಲಿ 1966ರಲ್ಲಿ ಅಣೆಕಟ್ಟು ಪ್ರಾರಂಭಿಸಿ, 1975ರಲ್ಲಿ ಪೂರ್ಣಗೊಳಿಸಲಾಗಿತ್ತು. ರೈತರಿಗೆ ನೀರಾವರಿ ಪ್ರಯೋಜನ ನೀಡುತ್ತಿರುವ ಈ ಜಲಾಶಯ ಇದೀಗ ಸೂಕ್ತ ನಿರ್ವಹಣೆ ಇಲ್ಲದೇ ಸೊರಗುತ್ತಿದೆ.

ಚಂದ್ರಂಪಳ್ಳಿ ಜಲಾಶಯ 926.54 ಮೀಟರ್‌ ಉದ್ದ, 28.65 ಮೀಟರ್‌ ಎತ್ತರ, 496 ಗರಿಷ್ಠ ನೀರಿನ ಮಟ್ಟ ಹೊಂದಿದೆ. 356.38 ಮೀಟರ್‌ ನೀರು ನಿಲ್ಲುವ ಗರಿಷ್ಠ ಎತ್ತರವಿದೆ. 17.6 ಕಿ.ಮೀ ನೀರು ನಿಲ್ಲುವ, 440 ಮೀಟರ್‌ ಜಲಾನಯನ ಅಚುrಕಟ್ಟು ಪ್ರದೇಶವಿದೆ. 5160 ಹೆಕ್ಟೇರ್‌ ನೀರಾವರಿ ಕ್ಷೇತ್ರ, ಆರು ಗೇಟುಗಳನ್ನು ಹೊಂದಿದೆ. ಚಂದ್ರಂಪಳ್ಳಿ ಮಣ್ಣಿನ ಒಡ್ಡಿನ ಮೇಲೆ ಬೇವಿನ ಗಿಡಗಳು, ಜಾಲಿ, ಕಕ್ಕಿಗಿಡ, ಮುತ್ತುಲ ಗಿಡಗಳು, ಎಕ್ಕೆ ಗಿಡಗಳು, ಅವರೆ ಗಿಡಗಳು, ಮುಳ್ಳಿನ ಕಂಟಿಗಳು ಬೆಳೆದಿವೆ. ಆದರೆ ಯೋಜನೆ ಅಧಿಕಾರಿಗಳು ಅವುಗಳನ್ನು ಕಡಿದು ಹಾಕಿಲ್ಲವೆಂದು ಗ್ರಾಮಸ್ಥರು ದೂರಿದ್ದಾರೆ.

ಜೂನ್‌-ಜುಲೈ ತಿಂಗಳಲ್ಲಿ ಮಳೆ ಆಗುತ್ತಿರುವು ದರಿಂದ ಜಲಾಶಯಕ್ಕೆ ನೀರು ದಿನೇ ದಿನೇ ಹರಿದು ಬರುತ್ತಿದೆ. ಗೇಟಿನ ಬಳಿ ವಿದ್ಯುತ್‌ ದೀಪಗಳಿಲ್ಲ, ಕಬ್ಬಿಣ ಸಲಾಕೆಗಳು ಮುರಿದು ಹೋಗಿವೆ. ರಸ್ತೆ ಸರಿಯಾಗಿಲ್ಲ, ಬೇರೆ ಕಡೆಗಳಿಂದ ಪ್ರವಾಸಿಗರು ಬರುತ್ತಿದ್ದಾರೆ. ಅನೇಕ ಕಡೆಗಳಲ್ಲಿ ಅಪಾಯಗಳಿದ್ದರೂ ಕಾವಲುಗಾರರನ್ನು ನೇಮಿಸಿಲ್ಲ.

ಚಂದ್ರಂಪಳ್ಳಿ ಜಲಾಶಯ ಮೇಲ್ಭಾಗದಲ್ಲಿ ಸಾಕಷ್ಟು ಗಿಡಗಂಟಿ ಕಡಿದು ಹಾಕಲು ಸರ್ಕಾರದಿಂದ ಅನುದಾನ ಬಂದಿಲ್ಲ. ಅನುದಾನ ಮಂಜೂರಿಗೆ ಮೇಲಾ ಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. –ಚೇತನ ಕಳಸ್ಕರ, ಎಇಇ

ಚಂದ್ರಂಪಳ್ಳಿ ಜಲಾಶಯ ಸರಕಾರದ ನಿರ್ಲಕ್ಷತನಕ್ಕೆ ಒಳಗಾಗಿದೆ ಯಾವುದೇ ಮೂಲಸೌಕರ್ಯಗಳು ಇಲ್ಲ ಇಲ್ಲಿಗೆ ಬರುವ ಪ್ರವಾಸಿಗರಿಗೆ ಕುಡಿಯುವ ನೀರು, ಶೌಚಾಲಯ ಇನ್ನಿತರ ಸೌಲಭ್ಯ ಸರಕಾರ ಒದಗಿಸಬೇಕು. ಲಕ್ಮಿಕಾಂತ ಮೊಗಡಂಪಳ್ಳಿ,ಗ್ರಾಮಸ್ಥರು

ಚಂದ್ರಂಪಳ್ಳಿ ಜಲಾಶಯ ಜಿಲ್ಲೆಯಲ್ಲಿಯೇ ಐತಿಹಾಸಿಕ ಪ್ರವಾಸಿ ತಾಣ ಆಗಿದೆ. ಆದರೆ ಜಲಾಶಯ ಸುತ್ತಮುತ್ತಲಿನ ಪ್ರದೇಶದಲ್ಲಿ ಗಿಡಗಂಟಿಗಳು ಹುಲುಸಾಗಿ ಬೆಳೆದಿವೆ. ಇದರಿಂದಾಗಿ ಹುಳ ಹುಪ್ಪಡಿಗಳು ಭಯ ಕಾಡುತ್ತಿದೆ. ಕೂಡಲೇ ಗಿಡಗಂಟಿಗಳು ಶುಚಿಗೊಳಿಸಬೇಕಾಗಿದೆ. ಅಶೋಕ ಭಜಂತ್ರಿ, ಗ್ರಾಪಂ ಅಧ್ಯಕ್ಷರು ಐನೋಳಿ.

ಚಂದ್ರಂಪಳ್ಳಿ ಜಲಾಶಯ ಸೂಕ್ತ ನಿರ್ವಹಣೆಯಿಲ್ಲದೇ ಮಣ್ಣಿನ ಒಡ್ಡಿನ ಮೇಲೆ ಗಿಡಗಂಟಿಗಳು ಬೆಳೆಯುತ್ತಿವೆ. ಅಲ್ಲದೇ ಪ್ರವಾಸಿ ತಾಣ ಆಗಿರುವುದರಿಂದ ಅನೇಕ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಿದ್ದಾರೆ. ಈ ಗಿಡಮರಗಳಿಂದ ಜಲಾಶಯಕ್ಕೆ ತೊಂದರೆಯಾಗಲಿದೆ. ಆದ್ದರಿಂದ ಗಿಡಗಂಟಿ ಕಡಿದು, ಸೂಕ್ತ ಗಮನಹರಿಸಬೇಕು. ಅಲ್ಲದೇ ವಿದ್ಯುತ್‌ ದೀಪಗಳನ್ನು ಅಳವಡಿಸಿದರೆ ಅನುಕೂಲವಾಗುತ್ತದೆ. ರವಿಶಂಕರ ರೆಡ್ಡಿ ಮುತ್ತಂಗಿ, ತಾಲೂಕು ಜೆಡಿಎಸ್ಅಧ್ಯಕ್ಷ

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.