ಸಾಹಿತ್ಯದಿಂದ ಗುಣ ಸಂಪತ್ತು ಹೆಚ್ಚಲಿ


Team Udayavani, Dec 10, 2018, 12:56 PM IST

gul-1.jpg

ಕಲಬುರಗಿ: ನಾವು ಎಷ್ಟೇ ಅಭಿವೃದ್ಧಿ ಹೊಂದಿದ್ದರೂ ಮನೆ ಸಂಸ್ಕೃತಿಯನ್ನು ನಮ್ಮ ಮಕ್ಕಳಿಗೆ ಕಲಿಸುವಲ್ಲಿ ಹಿಂದೆ ಬಿದ್ದಿದ್ದೇವೆ ಎನ್ನುವುದು ವ್ಯಾಪಕವಾಗಿ ಕಂಡುಬರುತ್ತಿದೆ. ಆದ್ದರಿಂದ ಗುಣ (ವ್ಯಕ್ತಿತ್ವ) ಹೇಗೆ ಹೆಚ್ಚಿಸಬೇಕೆಂಬ ದೊಡ್ಡ ಜವಾಬ್ದಾರಿ ಎದುರಾಗಿರುವುದನ್ನು ನಿಭಾಯಿಸುವ ಕಾರ್ಯ ಸಾಹಿತ್ಯದಿಂದ ಪ್ರಮುಖವಾಗಿ ಆಗಬೇಕಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ಕೇಂದ್ರ ಸಮಿತಿ ಮಾಜಿ ಗೌರವ ಕಾರ್ಯದರ್ಶಿ ಜರಗನಹಳ್ಳಿ ಶಿವಶಂಕರ ಹೇಳಿದರು.

ಎರಡು ದಿನಗಳ ಕಾಲ ಇಲ್ಲಿನ ಕನ್ನಡ ಭವನದಲ್ಲಿ ನಡೆದ ಜಿಲ್ಲಾ 17ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಭಾಷಣ ಮಾಡಿದ ಅವರು, ಬದುಕಿನಲ್ಲಿ ಎಲ್ಲವನ್ನು ಪಡೆದಿದ್ದರೂ ನಾವು ಏನೇನೋ ಕಳೆದುಕೊಂಡಂತೆ ಇದ್ದೇವೆ. ಆದ್ದರಿಂದ ಏನೇನೂ ಬರೆಯುವುದಕ್ಕಿಂತ ಸಮಾಜದ ಸ್ವಾಸ್ಥ್ಯಾ ಹೆಚ್ಚಿಸುವ ಸಾಹಿತ್ಯ ಹೊರ ಬರುವುದು ಹೆಚ್ಚು ಸಮಂಜಸ ಎನಿಸುತ್ತಿದೆ ಎಂದರು.

ಸಾಹಿತಿಗಳು ನಾಡಿಗೆ ನೀಡಿದ ಸಾಹಿತ್ಯ ಆತ್ಮಾವಲೋಕನ ಮಾಡಿಕೊಳ್ಳುವುದರ ಜತೆಗೆ ಇಂದಿನ ವರ್ತಮಾನಕ್ಕೆ ಹೇಗೆ ಬಳಕೆ ಮಾಡಬೇಕು ಎನ್ನುವ ಕಾರ್ಯವಾಗಬೇಕು ಎಂದರು.

ನಮ್ಮ ಮಹತ್ವ ನಾವು ಅರಿಯಬೇಕು. ನಡೆ-ನುಡಿಯಲ್ಲಿ ಒಂದಾಗಬೇಕು. ಹೇಗೆ ಹೂವು-ಹಣ್ಣು ತುಂಬಿದ ಮರ ಬಾಗುತ್ತದೆಯೋ ಅದೇ ರೀತಿ ನಾವು ಜ್ಞಾನ, ಹೃದಯ ಶ್ರೀಮಂತಿಕೆಯಿದ್ದರೆ ತಲೆ ಬಾಗಿ ಮುನ್ನಡೆಯುತ್ತೇವೆ. ಒಂದು ವೇಳೆ ಜಂಬ ಹೊಂದಿದ್ದರೆ ಒಣ ಮರದಂತೆ ಸೆಟೆದು ನಿಲ್ಲಬೇಕಾಗುತ್ತದೆ. ಪ್ರಮುಖವಾಗಿ ರಾಜಕಾರಣಿಗಳಿಂದು ಮಹಾತ್ಮಾಗಾಂಧೀಜಿ ಅವರ ಸತ್ಯಾನ್ವೇಷಣೆ ಮಾಡುವುದು ಅಗತ್ಯವಾಗಿದೆ ಎಂದು ಹೇಳಿದರು.

ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಮಾತನಾಡಿ, ಈ ಭಾಗ ಕನ್ನಡ ಸಾಹಿತ್ಯ ಲೋಕಕ್ಕೆ ದೊಡ್ಡ ಕೊಡುಗೆ ನೀಡಿದೆ ಎಂದರು. ಸಮ್ಮೇಳನಾಧ್ಯಕ್ಷೆ ಡಾ| ನಾಗಾಬಾಯಿ ಬುಳ್ಳಾ ಸಮಾರೋಪ ಭಾಷಣ ಮಾಡಿ, ಕಲಬುರಗಿಯಲ್ಲಿ ಅಖೀಲ ಭಾರತ ಸಾಹಿತ್ಯ ಸಮ್ಮೇಳನ ನಡೆಯಬೇಕಾಗಿದೆ ಎಂದು ಒತ್ತಾಯಿಸಿದರಲ್ಲದೇ ಸಾಹಿತ್ಯ ಸಂಶೋಧನೆಗೆ ಕೀಳರಿಮೆ ಬೇಡ. ಈ ಭಾಗದ ಸಾಹಿತ್ಯ,ಯುವ ಪ್ರತಿಭೆ ಗುರುತಿಸುವ ಹಾಗೂ ಪ್ರೋತ್ಸಾಹಿಸುವ ಕಾರ್ಯ ಸರ್ಕಾರದಿಂದ ಆಗಬೇಕಿದೆ ಎಂದರು.

ಕಸಾಪ ಕೇಂದ್ರ ಸಮಿತಿ ಗೌರವ ಕಾರ್ಯದರ್ಶಿ ಮ.ಚ ಚೆನ್ನಗೌಡ ಮಾತನಾಡಿದರು. ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಕಸಾಪ ಅಧ್ಯಕ್ಷ ವೀರಭದ್ರ ಸಿಂಪಿ, ಗೌರವ ಕಾರ್ಯದರ್ಶಿ ಮಡಿವಾಳಪ್ಪ ನಾಗರಹಳ್ಳಿ, ಗೌರವ ಕೋಶಾಧ್ಯಕ್ಷ ದೌಲತ್‌ರಾಯ ಮಾಲಿಪಾಟೀಲ ಹಾಗೂ ಮುಂತಾದವರಿದ್ದರು.

ಟ್ರಾಫಿಕ್‌ ಜಾಮ್‌ ಬೆಂಗಳೂರಿನಲ್ಲಿ ರಸ್ತೆ ಮೇಲೆ ಟ್ರಾಫಿಕ್‌ ಜಾಮ್‌ ನೋಡಿದ್ದೇವೆ ಹಾಗೂ ನೋಡುತ್ತಾ ಇರುತ್ತೇವೆ. ಆದರೆ ಇಲ್ಲಿನ ಸಾಹಿತ್ಯ ಸಮ್ಮೇಳನ ಬಹಿರಂಗ ಅಧಿವೇಶನ ಹಾಗೂ ಸಮಾರೋಪದ ವೇದಿಕೆ ಮೇಲೆ ಟ್ರಾಫಿಕ್‌ (ಜನಜಂಗುಳಿ) ಜಾಮ್‌ ನೋಡಿದೆ.  
ಜರಗನಹಳ್ಳಿ ಶಿವಶಂಕರ, ಹಿರಿಯ ಸಾಹಿತಿ

ಟಾಪ್ ನ್ಯೂಸ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.