ಚೌಡಯ್ಯ ವಿಶ್ವದ ಮೊದಲ ನ್ಯಾಯಾಧೀಶ


Team Udayavani, Jan 23, 2018, 11:32 AM IST

gul-4.jpg

ಕಲಬುರಗಿ: ಅಂಬಿಗರ ಚೌಡಯ್ಯನವರು ವಿಶ್ವದ ಮೊದಲ ನ್ಯಾಯಾಧೀಶ. ಅವರು 12ನೇ ಶತಮಾನದಲ್ಲಿಯೇ ಕೆಟ್ಟ ಆಲೋಚನೆ ಮಾಡುವವರ ಹಾಗೂ ಸುಳ್ಳು, ಮೋಸ ಮಾಡಿ ಡಾಂಬಿಕತೆ ಮರೆಯುವವರಿಗೆ ಪಾದರಕ್ಷೆ ತೆಗೆದುಕೊಂಡು
ಹೊಡೆಯುವ ಶಿಕ್ಷೆ ನೀಡಬೇಕು ಎಂದು ವಚನಗಳ ಮೂಲಕ ಹೇಳಿದ್ದರು ಎಂದು ಬಿಜೆಪಿ ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ರಾಜಗೋಪಾಲರೆಡ್ಡಿ ಮುದಿರಾಜ ಹೇಳಿದರು.

ನಗರದ ಎನ್‌ಇಕೆಆರ್‌ಟಿಸಿ ವಿಭಾಗೀಯ ಕಚೇರಿ ಸಭಾಂಗಣದಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
ಕೋಲಿ ಸಮಾಜ ನೌಕರರ ಸಂಘ ಹಮ್ಮಿಕೊಂಡಿದ್ದ ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮೌಡ್ಯ, ಅಪಚಾರ, ಡಾಂಬಿಕತನ, ದ್ರೋಹ ಮಾಡುವ ಮನಸ್ಸುಗಳನ್ನು ತಮ್ಮ ವಚನಗಳ ಮೂಲಕ ಪರಿವರ್ತಿಸುವ ಮಾಡುವ ನಿಟ್ಟಿನಲ್ಲಿ ಭಕ್ತಿಯ ಗೆರೆ ದಾಟುವ ಲೊಟ್ಟಿ ಮೂಗಳ ಕಂಡರೆ ಎಡಗಾಲು ಪಾದರಕ್ಷೆ ತಗೊಂಡು ಲಟಲಟನೆ ಹೊಡೆದು ಬಿಡಬೇಕು ಎನ್ನುವ ದಿಟ್ಟತನದ ತೀರ್ಪು ನೀಡಿದ್ದಾರೆ. ಇದನ್ನು ನಾವು ಅರ್ಥ ಮಾಡಿಕೊಂಡು ಹೆಜ್ಜೆ ಇಡಬೇಕಿದೆ ಎಂದು ಹೇಳಿದರು.

ಸಾರಿಗೆ ನೌಕರರು ಕೂಡ ಅಂಬಿಗರ ಚೌಡಯ್ಯನಂತೆ ನಂಬಿಕೆಯಿಂದ ಪ್ರಯಾಣಿಕರನ್ನು ಒಂದು ಊರಿನಿಂದ ಇನ್ನೊಂದು ಊರಿಗೆ ತಂದು ಬಿಡುತ್ತಾರೆ. ಇಂತಹ ಕಾಯಕ ಮಾಡುವ ನೀವು. ಜಾತಿಗಳ ಒಳಗೋಡೆ ದಾಟಿಕೊಂಡು ಎಲ್ಲ ಸಮುದಾಯಗಳೊಂದಿಗೆ ಸಹಬಾಳ್ವೆಯಿಂದ ಜೀವನ ರೂಢಿಸಿಕೊಳ್ಳಬೇಕು ಎಂದು ಹೇಳಿದರು.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್‌ ಮುಖಂಡ ಮಹಾಂತೇಶ ಪಾಟೀಲ ಮಾತನಾಡಿ, ಕೋಲಿ ಸಮಾಜದ ಬಾಂಧವರು ಇವತ್ತು ಕವಲು ದಾರಿಯಲ್ಲಿದ್ದಾರೆ. ಒಂದೆಡೆ ರಾಜಕೀಯ ಇನ್ನೊಂದೆಡೆ ಸಮಾಜದ ಒಗ್ಗಟ್ಟು ಮತ್ತು ಬೆಳವಣಿಗೆ. ಆದರೆ, ಕೆಲವರು ನಮ್ಮನ್ನು ಸರಿಯಾದ ಸಮಯದಲ್ಲಿ ಬಳಕೆ ಮಾಡಿಕೊಂಡು ನಮಗೆ ಸಿಗಬೇಕಾಗಿರುವ ಹಕ್ಕುಗಳಿಂದ ವಂಚಿತರನ್ನಾಗಿ ಮಾಡುತ್ತಿದ್ದಾರೆ. ಇಂತಹ ಒಳ ತಂತ್ರಗಳನ್ನು ನಾವೆಲ್ಲರೂ ಅರ್ಥ ಮಾಡಿಕೊಂಡು ನಮ್ಮ ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕ ಹಕ್ಕಿಗಾಗಿ ಹೋರಾಟ ಮಾಡಬೇಕಾಗಿದೆ.

ಅದಕ್ಕಾಗಿ ಒಗ್ಗಟ್ಟಿನಿಂದ ಹೆಜ್ಜೆ ಇಡಬೇಕಾದ ಅನಿವಾರ್ಯತೆಯನ್ನು ನಮ್ಮ ಯುವಕರು ಅರ್ಥ ಮಾಡಿಕೊಳ್ಳಬೇಕು ಎಂದ ಅವರು, ಇತೀಚೆಗೆ ಜಿಲ್ಲೆಯಲ್ಲಿ ಕೋಲಿ ಸಮಾಜದ ಬಂಧುಗಳ ಮೇಲೆ ಹಲ್ಲೆ, ಕೊಲೆ ಮತ್ತು ದೌರ್ಜನ್ಯಗಳು ನಡೆಯುತ್ತಿವೆ. ಅದನ್ನು ತಡೆಯವ ನಿಟ್ಟಿನಲ್ಲಿ ಸರಕಾರ ಹಾಗೂ ಅಧಿಕಾರಿಗಳು ಪ್ರಯತ್ನ ಮಾಡಬೇಕು ಎಂದು
ಹೇಳಿದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಅಲ್ಲಂಪ್ರಭು ಪಾಟೀಲ ಮಾತನಾಡಿ, ಕೋಲಿ ಸಮಾಜದ ಯುವಕರು ಈಗ ತುಂಬಾ  ಚಟುವಟಿಕೆಯಿಂದ ಇದ್ದಾರೆ. ಸಾರಿಗೆ ಸಂಸ್ಥೆಯಲ್ಲಿ ಬಹಳಷ್ಟು ಜನರಿದ್ದಾರೆ. ಅವರಲ್ಲಿ ಒಗ್ಗಟ್ಟು ಇದೆ ಎಂದು ಹೇಳಿದರು.

ಎನ್‌ಇಕೆಆರ್‌ಟಿಸಿ ಅಧ್ಯಕ್ಷ ಇಲಿಯಾಸ್‌ ಬಾಗವಾನ್‌ ಸೇಠ್ಠ್… ಕಾರ್ಯಕ್ರಮ ಉದ್ಘಾಟಿಸಿದರು. ಸಂಸ್ಥೆ ವಿಭಾಗ 2ರ ಅಧಿಕಾರಿ ಎ.ಎಚ್‌. ನಾಗೇಶ, ಕಾಂಗ್ರೆಸ್‌ ಹಿರಿಯ ಮುಖಂಡ ಶಿವಶರಣಪ್ಪ ಕೋಬಾಳ, ಜಿಪಂ ಮಾಜಿ ಸದಸ್ಯೆ ಶೋಭಾ ಬಾಣಿ, ಶಂಕರ ಕಟ್ಟಿಸಂಗಾವಿ, ವಿಜಯಕುಮಾರ ಹದಗಲ್‌, ವಿವೇಕಾನಂದಗೌಡ ಪಾಟೀಲ, ಸಿದ್ದಪ್ಪ ಪಾಲ್ಕಿ,
ಚಂದ್ರಕಾಂತ ಗದಗಿ ಇದ್ದರು. ಭೀಮಾಶಂಕರ ಹಾಗರಗುಂಡಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಆಲೂರು ಸ್ವಾಗತಿಸಿದರು. ಕೆ.ಬಿ.ಅಂಬಿಗೇರ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಪಾಂಡುರಂಗ
ಅಪಚಂದ ಹಾಗೂ ಇತರರು ಇದ್ದರು. ಇದಕ್ಕೂ ಮುನ್ನ ಅಂಬಿಗರ ಚೌಡಯ್ಯನವರ ಭಾವಚಿತ್ರದ ಮೆರವಣಿಗೆ ನಡೆಯಿತು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.