ಚೆಕ್‌ಪೋಸ್ಟ್‌ಗಳಿಗೆ ವೀಕ್ಷಕರ ಭೇಟಿ ಕಡ್ಡಾಯ


Team Udayavani, Mar 30, 2019, 1:40 PM IST

gul-1

ಹಾಕಿ ಮತದಾರರಿಗೆ ಉಚಿತವಾಗಿ ಹಂಚಲು ಬರುವ ಉಡುಗೊರೆಗಳನ್ನು ವಶಕ್ಕೆ ಪಡೆಯುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಎಲ್ಲ ಚೆಕ್‌ಪೋಸ್ಟ್‌ಗಳಿಗೆ ಸಹಾಯಕ ಖರ್ಚು-ವೆಚ್ಚ ವೀಕ್ಷಕರು ಕಡ್ಡಾಯವಾಗಿ ಭೇಟಿ ನೀಡಬೇಕು ಎಂದು ಕಲಬುರಗಿ ಲೋಕಸಭಾ ಕ್ಷೇತ್ರದ ಖರ್ಚು-ವೆಚ್ಚ ವೀಕ್ಷಕ ರೋಹಿತ ಆನಂದ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದ ಖರ್ಚು-ವೆಚ್ಚಕ್ಕೆ ಸಂಬಂಧಿಸಿದಂತೆ ಸಹಾಯಕ ಖರ್ಚು-ವೆಚ್ಚ ವೀಕ್ಷಕರ ಹಾಗೂ ಇತರೆ ಅ ಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ಮುಕ್ತ ಮತ್ತು ಪಾರದರ್ಶಕ ಚುನಾವಣೆ ನಡೆಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ. ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಕಲಬುರಗಿ ಜಿಲ್ಲೆಯೂ ನೆರೆಯ ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಕ್ಕೆ ಹೊಂದಿಕೊಂಡಿರುವುದರಿಂದ ಅಂತಾರಾಜ್ಯ ಚೆಕ್‌ಪೋಸ್ಟ್‌ ಸಹ ಇಲ್ಲಿ ಸ್ಥಾಪಿಸಲಾಗಿದೆ. ಅಕ್ರಮ ಸಾಗಾಣಿಕೆ ತಡೆಯಲು ದಿನದ 24 ಗಂಟೆಗಳ ಕಾಲ ಎಸ್‌. ಎಸ್‌.ಟಿ. ತಂಡಗಳು ಕಾರ್ಯನಿರ್ವಹಿಸುತ್ತಿವೆ. ಎಸ್‌.ಎಸ್‌.ಟಿ ತಂಡಕ್ಕೆ ಪ್ಯಾರಾ ಮಿಲಿಟರಿ ಮತ್ತು ಸ್ಥಳೀಯ ಪೊಲೀಸ್‌ ಸಿಬ್ಬಂದಿ ಸೇವೆ ಸಹ ನೀಡಿರುವುದರಿಂದ ಯಾವುದೇ ಅಕ್ರಮಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು ಎಂದರು.

ಖರ್ಚು-ವೆಚ್ಚಕ್ಕೆ ಸಂಬಂಧಿಸಿದಂತೆ ಯಾವುದೇ ದೂರುಗಳಿದ್ದಲ್ಲಿ ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ದೂ.ಸಂ.08472-1950ಗೆ ಕರೆ ಮಾಡಿ ಸಲ್ಲಿಸಬಹುದಾಗಿದೆ ಎಂದರು. ಖರ್ಚು-ವೆಚ್ಚಗಳ ನೋಡಲ್‌ ಅಧಿಕಾರಿ ರಾಮಣ್ಣ ಅಥಣಿ, ಆದಾಯ ತೆರಿಗೆ ಇಲಾಖೆ ನೋಡಲ್‌ ಅಧಿಕಾರಿ ವಾಸುದೇವನ್‌, ಪೊಲೀಸ್‌ ನೋಡಲ್‌ ಅಧಿಕಾರಿ ಹೆಚ್ಚುವರಿ ಎಸ್‌ಪಿ ಪ್ರಸನ್ನ ದೇಸಾಯಿ, ಕಲಬುರಗಿ ಲೋಕಸಭಾ ಮತಕ್ಷೇತ್ರದ ಖರ್ಚು-ವೆಚ್ಚಗಳ ಸಹಾಯಕ ವೀಕ್ಷಕ ವಿಕಾಸ ಸಜ್ಜನ, ಸಹಾಯಕ ಖರ್ಚು-ವೆಚ್ಚ ವೀಕ್ಷಕರಾದ ಶಿವರಾಜ ಪಾಟೀಲ, ಬಸವರಾಜ ಚಟನಳ್ಳಿ, ಸಿದ್ಧಮ್ಮ, ಭಾರತಿ ಜ್ಯೋತಿ, ಬಾಬು, ರಾಜಕುಮಾರ, ಪಾಪಣ್ಣ ಇಟಗಿಕರ್‌, ಪ್ರಕಾಶ ಜಾಧವ, ಅಬಕಾರಿ ನೋಡಲ್‌ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳಿದ್ದರು.

ಸಾಮಾನ್ಯ-ಪೊಲೀಸ್‌ ವೀಕ್ಷಕರ ನೇಮಕ
ಕಲಬುರಗಿ: ಲೋಕಸಭೆ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಅನುಕೂಲವಾಗುವಂತೆ ಭಾರತ ಚುನಾವಣೆ ಆಯೋಗವು 05-ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರಕ್ಕೆ ತಲಾ ಒಬ್ಬರು ಸಾಮಾನ್ಯ ವೀಕ್ಷಕ ಹಾಗೂ ಪೊಲೀಸ್‌ ವೀಕ್ಷಕರನ್ನು ನೇಮಕ ಮಾಡಿದೆ. ಸಾರ್ವಜನಿಕರು ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ದೂರು ಹಾಗೂ ಅಹವಾಲುಗಳಿದ್ದರೆ ನೇರವಾಗಿ ಸಾಮಾನ್ಯ ಹಾಗೂ ಪೊಲೀಸ್‌ ವೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್‌. ವೆಂಕಟೇಶಕುಮಾರ ತಿಳಿಸಿದ್ದಾರೆ.

ಸಾಮಾನ್ಯ ವೀಕ್ಷಕ: ಕಲಬುರಗಿ ಲೋಕಸಭಾ ಕ್ಷೇತ್ರಕ್ಕೆ ವೆಸ್ಟ್‌ಬೆಂಗಾಲ ರಾಜ್ಯದ ಐ.ಎ.ಎಸ್‌. ಅ ಧಿಕಾರಿ ಪರ್ವೇಜ್‌ ಅಹ್ಮದ್‌ ಸಿದ್ಧಿಕ್ಕಿ (ಮೊ.ಸಂಖ್ಯೆ: 9933770000) ಅವರನ್ನು ಸಾಮಾನ್ಯ ವೀಕ್ಷಕರನ್ನಾಗಿ ನೇಮಿಸಿದೆ. ಪೊಲೀಸ್‌ ವೀಕ್ಷಕ: ಕಲಬುರಗಿ ಲೋಕಸಭೆ ಕ್ಷೇತ್ರಕ್ಕೆ ಹರಿಯಾಣ ರಾಜ್ಯದ ಐ.ಪಿ.ಎಸ್‌. ಅಧಿಕಾರಿ ಡಾ| ರಾಜಶ್ರೀ ಸಿಂಗ್‌ ಅವರನ್ನು (ಮೊ.ಸಂಖ್ಯೆ: 9582200101 ) ಪೊಲೀಸ್‌ ವೀಕ್ಷಕರನ್ನಾಗಿ ನೇಮಿಸಿದೆ.

ವಿಡಿಯೋ ಕಣ್ಗಾವಲು ತಂಡ ರಚನೆ
ಕಲಬುರಗಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿನ ವಿವಿಧ ವಿಧಾನಸಭೆ ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ನಡೆಸುವ ಚುನಾವಣಾ ಸಭೆ-ಸಮಾರಂಭ, ಮೆರವಣಿಗೆ ಮತ್ತು ಸೂಕ್ಷ್ಮ ಘಟನಾವಳಿಗಳನ್ನು ಚಿತ್ರೀಕರಿಸಲು ಚುನಾವಣಾ ವೀಡಿಯೋ ಕಣ್ಗಾವಲು ತಂಡ (ವಿಡಿಯೋ ಸರ್ವಲನ್ಸ್‌ ಟೀಮ್‌) ರಚಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್‌. ವೆಂಕಟೇಶಕುಮಾರ ತಿಳಿಸಿದ್ದಾರೆ.

ಪ್ರತಿಯೊಂದು ವಿಧಾನಸಭೆ ಕ್ಷೇತ್ರಕ್ಕೆ ಎರಡು ಅಥವಾ ಮೂರು ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ವಿಡಿಯೋ ಗ್ರಾಫರ್‌ಗಳು ಈ ತಂಡದಲ್ಲಿ ಇರಲಿದ್ದಾರೆ. ಜಿಲ್ಲೆಯ ಒಂಭತ್ತು ವಿಧಾನಸಭಾ ಕ್ಷೇತ್ರಗಳಿಗೆ ನೇಮಕ ಮಾಡಲಾದ ತಂಡದ ಅಧಿಕಾರಿಗಳ ವಿವರ ಕೆಳಗಿನಂತಿದೆ: 34-ಅಫಜಲಪುರ ವಿಧಾನಸಭಾ ಕ್ಷೇತ್ರ: ಅಫಜಲಪುರ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಡಿ. ಕಾಸೀಮ್‌ ಮೊ. ಸಂಖ್ಯೆ 8277931510, ಅಫಜಲಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಅಧೀಕ್ಷಕ ರಾಜು ದೇಶಪಾಂಡೆ ಮೊ. ಸಂಖ್ಯೆ 8971492068 ಹಾಗೂ ಅಫಜಲಪುರ ಐಟಿಐ ಕಾಲೇಜಿನ ಪ್ರಾಚಾರ್ಯ ಬಸವರಾಜ ಮೊ. ಸಂಖ್ಯೆ 9449513639.

35-ಜೇವರ್ಗಿ ವಿಧಾನಸಭಾ ಕ್ಷೇತ್ರ: ಜೇವರ್ಗಿ ಕ್ಷೇತ್ರ ಶಿಕ್ಷಣಾ ಧಿಕಾರಿ ಶಾಂತಪ್ಪ ಎಸ್‌. ಮೊ. ಸಂಖ್ಯೆ 9480695214, ಜೇವರ್ಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಇ.ಸಿ.ಒ.ರಾದ ಜಿ.ಬಿ. ಹಿರೇಮಠ ಮೊ. ಸಂಖ್ಯೆ 8073199919 ಹಾಗೂ ಜೇವರ್ಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಬಿ.ಆರ್‌.ಸಿ. ಲಿಂಗರಾಜ ಮೂಲಿಮನಿ ಮೊ. ಸಂಖ್ಯೆ 9480695225.

40-ಚಿತ್ತಾಪುರ ವಿಧಾನಸಭಾ ಕ್ಷೇತ್ರ: ಚಿತ್ತಾಪುರ ಸಹಾಯಕ ತೋಟಗಾರಿಕೆ ಅಧಿಕಾರಿ ಜಗದೀಶ ಗಾಜರೆ ಮೊ. ಸಂಖ್ಯೆ 9845224716 ಹಾಗೂ ಚಿತ್ತಾಪುರ ಎ.ಪಿ.ಎಂ.ಸಿ. ಕಾರ್ಯದರ್ಶಿ ಚನ್ನಬಸಯ್ಯ ಹಿರೇಮಠ ಮೊ. ಸಂಖ್ಯೆ 9480409788. 41-ಸೇಡಂ ವಿಧಾನಸಭಾ ಕ್ಷೇತ್ರ: ಎ.ಪಿ.ಎಂ.ಸಿ.ಕಾರ್ಯದರ್ಶಿ ಸಂತೋಷ ಬುಡಗೆ ಮೊ. ಸಂಖ್ಯೆ 9916258254 ಹಾಗೂ ಸೇಡಂ ಸಮಾಜ ಕಲ್ಯಾಣ ಅಧಿಕಾರಿ ಶಶಿಕಾಂತ ನಂದಿಕೂರ ಮೊ. ಸಂಖ್ಯೆ 9164707575.

42-ಚಿಂಚೋಳಿ ವಿಧಾನಸಭಾ ಕ್ಷೇತ್ರ: ಚಿಂಚೋಳಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅನೀಲಕುಮಾರ ಮೊ. ಸಂಖ್ಯೆ 8277931514 ಹಾಗೂ ಚಿಂಚೋಳಿ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಪದ್ಮಾ ಮೊ. ಸಂಖ್ಯೆ 7259984589.

43-ಗುಲಬರ್ಗಾ (ಗ್ರಾಮೀಣ) ವಿಧಾನಸಭಾ ಕ್ಷೇತ್ರ: ಕಲಬುರಗಿ ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ನಾಮದೇವ ರಾಠೊಡ ಮೊ. ಸಂಖ್ಯೆ 9448590003 ಹಾಗೂ ಕಮಲಾಪುರ ಡೈಟ್‌ ಪ್ರಾಚಾರ್ಯ ಶಶಿಕಾಂತ ಮೊ. ಸಂಖ್ಯೆ 9448999370.

44-ಗುಲಬರ್ಗಾ (ದಕ್ಷಿಣ) ವಿಧಾನಸಭಾ ಕ್ಷೇತ್ರ: ಕಲಬುರಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ರಾಣುಕಾದೇವಿ ಮೊ. ಸಂಖ್ಯೆ 9482073686 ಹಾಗೂ ಕಲಬುರಗಿ ಎ.ಪಿ.ಎಂ.ಸಿ. ಕಾರ್ಯದರ್ಶಿ ಗಜೇಂದ್ರ ಮೊ. ಸಂಖ್ಯೆ 9481764248. 45-ಗುಲಬರ್ಗಾ (ಉತ್ತರ) ವಿಧಾನಸಭಾ ಕ್ಷೇತ್ರ: ನಗರ ಯೋಜನಾ ಇಲಾಖೆಯ ಕಲಬುರಗಿ ಜಂಟಿ ನಿರ್ದೇಶಕ ಪ್ರಕಾಶ ಸಿ. ಹರಕುಡೆ ಮೊ. ಸಂಖ್ಯೆ 8073231312 ಹಾಗೂ ಕಲಬುರಗಿ ಎ.ಪಿ.ಎಂ.ಸಿ. ಸಹಾಯಕ ಕಾರ್ಯದರ್ಶಿ ಅನೀಲಕುಮಾರ ಹಾದಿಮನಿ ಮೊ. ಸಂಖ್ಯೆ 9901777781.

46-ಆಳಂದ ವಿಧಾನಸಭಾ ಕ್ಷೇತ್ರ: ಆಳಂದ ಕೈಗಾರಿಕಾ ವಿಸ್ತರಣಾಧಿಕಾರಿ ಜಾಫರ ಅನ್ಸಾರಿ ಮೊ. ಸಂಖ್ಯೆ 9880087863 ಹಾಗೂ ಆಳಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಉಪನ್ಯಾಸಕ ನಿಂಗಪ್ಪಾ ಪೂಜಾರಿ ಮೊ. ಸಂಖ್ಯೆ 9449718309.

24ರ ವರೆಗೆ ಸರ್ಕಾರಿ ಕಚೇರಿ ವೇಳೆಯಲ್ಲಿ ಬದಲಾವಣೆಯಿಲ್ಲ
ಕಲಬುರಗಿ: ಗುಲಬರ್ಗಾ ಲೋಕಸಭಾ (ಮೀಸಲು) ಮತಕ್ಷೇತ್ರದ ಚುನಾವಣೆ ಕಾರ್ಯದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ, ಸಹಾಯಕ ಆಯುಕ್ತರ ಕಚೇರಿ, ತಾಲೂಕು ಕಚೇರಿ, ನಾಡ ಕಚೇರಿಗಳ ಸಿಬ್ಬಂದಿ ಹಾಗೂ ಇತರೆ ಎಲ್ಲ ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಅಧಿಕಾರಿ,ಸಿಬ್ಬಂದಿ ಮೊದಲಿನಂತೆ ಏ. 1 ರಿಂದ ಏ. 24ರ ವರೆಗೆ ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 5:30 ಗಂಟೆ ವರೆಗೆಕಾರ್ಯನಿರ್ವಹಿಸಬೇಕೆಂದು ಜಿಲ್ಲಾ ಧಿಕಾರಿ ಆರ್‌. ವೆಂಕಟೇಶಕುಮಾರ ತಿಳಿಸಿದ್ದಾರೆ.

ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಅಧಿಕಾರಿ, ನೌಕರರು ಚುನಾವಣಾ ಅಧಿಕಾರಿಗಳ ಆದೇಶದಂತೆ ಚುನಾವಣಾ ಕರ್ತವ್ಯಗಳನ್ನು ಚಾಚೂ ತಪ್ಪದೇ ನಿರ್ವಹಿಸಬೇಕು. ಅದೇ ರೀತಿ ಲೋಕಸಭಾ ಚುನಾವಣೆ ಚುನಾವಣೆ ನಂತರ ಅಂದರೆ ಏ. 25 ರಿಂದ ಮೇ 31ರ ವರೆಗೆ ಪ್ರತಿದಿನ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1:30 ಗಂಟೆ ವರೆಗೆ ಕಾರ್ಯನಿರ್ವಹಿಸಬೇಕೆಂದು ತಿಳಿಸಿದ್ದಾರೆ.

ಬೇಸಿಗೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಿರುವ ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳು ಹಾಗೂ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಅನ್ವಯವಾಗುವಂತೆ ರಾಜ್ಯ ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಸಮಯವನ್ನು ಏ. 1 ರಿಂದ ಮೇ 31 ರವರೆಗೆ ಪ್ರತಿದಿನ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1:30ರ ವರೆಗೆ ನಿಗದಿಪಡಿಸಿ ಈಗಾಗಲೇ ರಾಜ್ಯ ಸರ್ಕಾರವು ಆದೇಶ ಹೊರಡಿಸಿತ್ತು. ಲೋಕಸಭೆ ಚುನಾವಣಾ ಕಾರ್ಯದ ಹಿನ್ನೆಲೆಯಲ್ಲಿ ಈ ಬದಲಾವಣೆಯನ್ನು ಮಾಡಲಾಗಿದೆ
ಎಂದು ಅವರು ತಿಳಿಸಿದ್ದಾರೆ.

ದೂರಿಗಾಗಿ 1950ಕ್ಕೆ ಕರೆ ಮಾಡಿ: ಡಿಸಿ ಕಲಬುರಗಿ: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಮಾಹಿತಿ ಹಾಗೂ ದೂರುಗಳನ್ನು ದಾಖಲಿಸಲು ಶುಲ್ಕರಹಿತ ಸಹಾಯವಾಣಿ ಸಂಖ್ಯೆ 1950 ಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್‌. ವೆಂಕಟೇಶಕುಮಾರ ತಿಳಿಸಿದ್ದಾರೆ.1950 ಸಹಾಯವಾಣಿಗೆ ಕರೆ ಮಾಡುವುದರಿಂದ ಚುನಾವಣೆ ಸಮಗ್ರ ಮಾಹಿತಿ ಪಡೆಯಬಹುದಾಗಿದೆ. ಜಿಲ್ಲೆಯಲ್ಲಿ ಚುನಾವಣೆ ಅಕ್ರಮಗಳು, ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ಈ ಸಹಾಯವಾಣಿ ಸಂಖ್ಯೆಗೆ ಕರೆ ದೂರು ಸಹಿತ ದಾಖಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.