ಚಿಂಚೋಳಿ: ಅಸ್ಸಾಂ ಮಹಿಳೆಯ ಕೊಲೆ ಕೇಸ್; ಬಿಹಾರ ಮೂಲದ ಆರೋಪಿ ಬಂಧನ
ಅನೈತಿಕ ಸಂಬಂಧ ಬೆಳೆಸಿದ್ದ ಆರೋಪಿ
Team Udayavani, Jul 28, 2022, 4:34 PM IST
ಚಿಂಚೋಳಿ: ತಾಲೂಕಿನಲ್ಲಿ ಅಸ್ಸಾಂ ಮೂಲದ ಮಹಿಳೆಯ ಕೊಲೆ ಪ್ರಕರಣವನ್ನು ಚಿಂಚೋಳಿ ಠಾಣೆ ಪೊಲೀಸರು ಭೇದಿಸಿದ್ದಾರೆ.
ಜಸ್ಮಿಕಾ ಕಾತುನ್ ನಜ್ಮೊದ್ದೀನ್ (30) ಕೊಲೆಯಾದ ಮಹಿಳೆಯಾಗಿದ್ದು,ಆಕೆಯೊಂದಿಗೆ ಅನೈತಿಕ ಸಂಬಂಧ ಬೆಳೆಸಿದ್ದ ಬಿಹಾರ ಮೂಲದ ಮಹಮದ್ ಜುಲ್ಫಿಕರ್ ಆಲಂ ಅಲಿಯಾಸ್ ಅಸ್ಲಾಂ ಮಹಮದ್ ಅಲಿಮೋದ್ದಿನ್ (29) ಕೊಲೆ ಮಾಡಿ ಪರಾರಿಯಾಗಿದ್ದ. ಆತನನ್ನು ಚಿಂಚೋಳಿ ಪೊಲೀಸರು ಪತ್ತೆ ಹಚ್ಚಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಹೆಚ್ಚುವರಿ ಎಸ್ಪಿ ಪ್ರಸನ್ನ ದೇಸಾಯಿ ತಿಳಿಸಿದರು.
2021ರ ಏಪ್ರಿಲ್ 4ರಂದು ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಬಳಿಯ ದಿ. ಮೆಟ್ರಿಕ್ಸ್ ವಿದ್ಯುತ್ ತಯಾರಿಕಾ ಘಟಕದ ಬಳಿ ಮಹಿಳೆಯನ್ನು ಒಣಿಯಿಂದಲೇ ಕುತ್ತಿಗೆಗೆ ಸುತ್ತಿ, ಬಾಯಿಯಲ್ಲಿ ಬಟ್ಟೆ ತುರುಕಿ ಕೊಲೆ ಮಾಡಿ ಪರಾರಿಯಾಗಿದ್ದ. ತನಿಖೆ ಕೈಗೆತ್ತಿಕೊಂಡ ಸರ್ಕಲ್ ಇನ್ಸ್ಪೆಕ್ಟರ್ ಮಹಾಂತೇಶ ಪಾಟೀಲ ಅವರು ವೈಜ್ಞಾನಿಕ ವಿಧಾನ ಅನುಸರಿಸಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಡಿವೈಎಸ್ಪಿ ಕೆ. ಬಸವರಾಜ, ಮಹಾಂತೇಶ ಪಾಟೀಲ, ಶಫಿಯೋದ್ದಿನ್, ಈಶ್ವರ್, ಶಿವಾನಂದ, ಅಂಬಾರಾಯ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
MUST WATCH
ಹೊಸ ಸೇರ್ಪಡೆ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್