ಕಾರ್ಮಿಕರಿಗೆ ಖಾತ್ರಿ ವರದಾನ: ಡಾ| ಅವಿನಾಶ ಜಾಧವ್
Team Udayavani, Jun 3, 2020, 5:05 PM IST
ಸಾಂದರ್ಭಿಕ ಚಿತ್ರ
ಚಿಂಚೋಳಿ: ತಾಲೂಕಿನಲ್ಲಿ ಪ್ರಸಕ್ತ ಏಪ್ರಿಲ್-ಮೇ ತಿಂಗಳಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಹಲವಾರು ಕಾಮಗಾರಿಗಳು ನಡೆಯುತ್ತಿದ್ದು, ಶೇ.98.86 ಸಾಧನೆ ಮಾಡಿ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಶಾಸಕ ಡಾ|ಅವಿನಾಶ ಜಾಧವ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನಿಂದ ಬೇರೆ ರಾಜ್ಯಗಳಿಗೆ ಉದ್ಯೋಗಕ್ಕಾಗಿ ಗುಳೆ ಹೋದ ಕೂಲಿ ಕಾರ್ಮಿಕರಿಗೆ ತಮ್ಮ ಸ್ವಗ್ರಾಮದಲ್ಲಿ ಕೆಲಸ ಮಾಡಿ ಜೀವನ ಸಾಗಿಸುವುದಕ್ಕೆ ವರದಾನವಾಗಿದೆ. ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ 1,56,431 ಮಾನವ ದಿನಗಳನ್ನು ಸೃಷ್ಟಿಸಿ ಇದುವರೆಗೆ ಒಟ್ಟು 3.93 ಕೋಟಿ ರೂ. ಖರ್ಚು ಮಾಡಲಾಗಿದೆ. ವಲಸೆ ಹೋದ ಕಾರ್ಮಿಕರಿಗೆ ಹೊಸದಾಗಿ ಉದ್ಯೋಗ ಕಾರ್ಡ್ಗಳನ್ನು 4500 ನೀಡಿ ದಾಖಲೆ ಮಾಡಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯ ರಾಜ್ಯ ಆಯುಕ್ತರು ಮತ್ತು ಕಲಬುರಗಿ ಜಿಪಂ ಸಿಇಒ ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದರು.
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಒಟ್ಟು 90,425 ಹೆಕ್ಟೇರ್ ಬಿತ್ತನೆ ಗುರಿ ಇದೆ. ರೈತರಿಗೆ ಬಿತ್ತನೆ ಬೀಜ ಪೂರೈಸಲಾಗುತ್ತಿದೆ ಬಿತ್ತನೆ ಬೀಜಗಳ ಕೊರತೆಯಿಲ್ಲ ಎಂದರು. ತಾಲೂಕಿನಲ್ಲಿ ಹೊಸದಾಗಿ ರಸ್ತೆ ಡಾಂಬರೀಕರಣ, ಕುಡಿಯುವ ನೀರು ಪೂರೈಕೆ ಯೋಜನೆ ಅಭಿವೃದ್ಧಿಪಡಿಸಲಾಗಿದೆ. ರೈತರಿಗೋಸ್ಕರ ತೊಗರಿ ಖರೀದಿ ಕೇಂದ್ರ ಹೆಚ್ಚು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.
ತಾಲೂಕಿನಲ್ಲಿ ಯಾರು ಭಿಕ್ಷಾಟನೆ ಮಾಡಿ ಬದುಕುವಂತಹ ಪರಿಸ್ಥಿತಿ ಇಲ್ಲ ಕುಂಚಾವರಂ ಗಡಿಭಾಗದ ಲಿಂಗಾನಗರ ತಾಂಡಾದಲ್ಲಿ ಶಾಲಾ ಬಾಲಕನೊಬ್ಬನು ಕುಟುಂಬ ನಿರ್ವಹಣೆಗಾಗಿ ಭಿಕ್ಷಾಟನೆಯಲ್ಲಿ ತೊಡಗಿದ್ದಾನೆ ಎಂಬುದು ಸತ್ಯಕ್ಕೆ ದೂರವಾಗಿದೆ. ಬಡ ಕುಟುಂಬಕ್ಕೆ ತಾಲೂಕಾಡಳಿತ ವತಿಯಿಂದ ಬೇಕಾಗಿವ ಎಲ್ಲ ಸೌಲಭ್ಯ ಕೊಡಿಸಲಾಗಿದೆ. ಬಿಇಒ ತಾಂಡಾಕ್ಕೆ ಭೇಟಿ ನೀಡಿ ಶಾಲಾ ಬಾಲಕ ಭಿಕ್ಷಾಟನೆಯಲ್ಲಿ ಮಾಡುತ್ತಿಲ್ಲವೆಂದು ವರದಿ ನೀಡಿದ್ದಾರೆ ಎಂದರು. ತಾಪಂ ಅಧಿಕಾರಿ ಅನಿಲಕುಮಾರ ರಾಠೊಡ, ಸಂಜೀವಕುಮಾರ ಚವ್ಹಾಣ, ರಾಮಚಂದ್ರ ಜಾಧವ್, ಸಂತೋಷ ಗಡಂತಿ, ಶ್ರೀಮಂತ ಕಟ್ಟಿಮನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ