ಚಿಂಚೋಳಿ: ಹೆಸರು ನೋಂದಣಿಗೆ ಮಧ್ಯರಾತ್ರಿಯಿಂದಲೇ ಸರತಿ ಸಾಲಾಗಿ ನಿಂತ ರೈತರು
Team Udayavani, May 24, 2022, 1:25 PM IST
ಚಿಂಚೋಳಿ( ಕಲಬುರಗಿ): ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ರೈತ ಸಂಪರ್ಕ ಕೇಂದ್ರದ ಮುಂದೆ ರೈತರು ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಲು ವಿವಿಧ ಗ್ರಾಮಗಳಿಂದ ಮಂಗಳವಾರ ಮಧ್ಯರಾತ್ರಿಯಿಂದಲೇ ರೈತ ಸಂಪರ್ಕ ಕೇಂದ್ರಕ್ಕೆ ಆಗಮಿಸಿದರು.
ತಾಲ್ಲೂಕಿನ ಕುಂಚಾವರಮ ವೆಂಕಟಾಪೂರ ಶಾದಿಪೂರ್ ಸಂಗಾಪೂರ ತಾಂಡಾಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ರೈತರು ಮತ್ತು ರೈತರು ರೈತಸಂಪರ್ಕ ರೈತ ಸಂಪರ್ಕಕ್ಕೆ ಆಗಮಿಸಿದರು.
ಅದರೆ ರೈತ ಸಂಪರ್ಕ ಕೇಂದ್ರಗಳಲ್ಲಿ ವಿದ್ಯುತ್ ಸಂಪರ್ಕದ ಕೊರತೆಯಿಂದಾಗಿ ಮತ್ತು ಕಂಪ್ಯೂಟರ್ ಸ್ಥಗಿತಗೊಂಡಿದ್ದು ಕೃಷಿ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆಯಿಂದಾಗಿ ರೈತರಿಗೆ ಟೋಕನ್ ಕೊಡುವುದರಲ್ಲಿ ತೊಂದರೆ ಪಡಬೇಕಾಯಿತು.
ರೈತ ಸಂಪರ್ಕ ಕೇಂದ್ರದಲ್ಲಿ ದೂರದಿಂದ ಬಂದಂತಹ ರೈತರಿಗೆ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಇಲ್ಲದ ಕಾರಣ ರೈತರು ಸುಡು ಬಿಸಿಲಿನಲ್ಲಿ ಪರದಾಡುವಂತಾಯಿತು. ಕೆಲವರು ಮಧ್ಯರಾತ್ರಿಯಿಂದಲೇ ತಮ್ಮ ಮನೆಯಲ್ಲಿ ಮದುವೆ ಸಮಾರಂಭಗಳನ್ನು ಬಿಟ್ಟು ಬೀಜ ಪಡೆದುಕೊಳ್ಳುವುದಾಗಿ ನೋಂದಣಿಗಾಗಿ ಆಗಮಿಸಿದರು. ಕೆಲ ರೈತರು ಊಟ ಇಲ್ಲದೆ ಪರದಾಡಬೇಕಾಯಿತು. ರೈತ ಸಂಪರ್ಕ ಕೇಂದ್ರದ ಮುಂದೆ ಮಲಗಬೇಕಾದರೆ ಕತ್ತಲು ಇರುವುದರಿಂದ ರೈತರು ತುಂಬಾ ಭಯ ಬರಬೇಕಾಯಿತೆಂದು ಮಾಣಿಕ್ ಜಾಧವ್, ಶಂಕರ್ ಜಾಧವ್ , ಕಿಶನ್ ರಾತೊಡ, ರಮೇಶ್ ಪವಾರ್ ತಿಳಿಸಿದ್ದಾರೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್
MUST WATCH
ಹೊಸ ಸೇರ್ಪಡೆ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು