ಕುಂಚಾವರಂ ವನ್ಯಜೀವಿಧಾಮ ಅರಣ್ಯ ರಕ್ಷಣೆಗೆ ಬೆಂಕಿ ರೇಖೆ

200 ಕಿಮೀ ಮಾರ್ಗದಲ್ಲಿ ಬೆಂಕಿ ರೇಖೆ ಈಗಾಗಲೇ 100 ಕಿಮೀ ಕಾರ್ಯ ಪೂರ್ಣ ಅರಣ್ಯ ಇಲಾಖೆಯಿಂದ 2.50 ಲಕ್ಷ ಖರ್ಚು

Team Udayavani, Feb 1, 2020, 10:55 AM IST

Feburary-2

ಚಿಂಚೋಳಿ: ತಾಲೂಕಿನ ಕುಂಚಾವರಂ ವನ್ಯಜೀವಿ ಧಾಮ ಅರಣ್ಯ ಪ್ರದೇಶದಲ್ಲಿ ಬೇಸಿಗೆ ದಿನಗಳಲ್ಲಿ ಯಾವುದೇ ಬೆಂಕಿ ಅನಾಹುತ ಸಂಭವಿಸದಂತೆ ಅರಣ್ಯ ಪ್ರದೇಶ ರಕ್ಷಿಸಲು ವಲಯ ವನ್ಯಜೀವಿಧಾಮ ಅರಣ್ಯ ಇಲಾಖೆ ಸಿಬ್ಬಂದಿ ಕಳೆದ ಡಿಸೆಂಬರ್‌ನಿಂದಲೇ ಬೆಂಕಿ ರೇಖೆ (ಫೈರ್‌ ಲೈನ್‌) ನಿರ್ಮಿಸುತ್ತಿದ್ದಾರೆ.

ಶಿವರಾಮಪುರ-ಶಹಾಪುರ ರಾಜ್ಯ ಹೆದ್ದಾರಿಯಲ್ಲಿ ಬರುವ ಕುಂಚಾವರಂ ಅರಣ್ಯಪ್ರದೇಶವನ್ನು 2011ರಲ್ಲಿ ರಾಜ್ಯ ಸರ್ಕಾರ ವನ್ಯಜೀವಿಧಾಮ ಪ್ರದೇಶವೆಂದು ಘೋಷಿಸಿದ ನಂತರ ಕಾಡಿನಲ್ಲಿ ವಿವಿಧ ಜಾತಿಯ ಮರಗಳು, ಕಾಡು ಪ್ರಾಣಿಗಳ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ.

ಈ ಮೀಸಲು ಅರಣ್ಯಪ್ರದೇಶದಲ್ಲಿ ಯಾವುದೇ ಬೆಂಕಿ ಅನಾಹುತ ಆಗದಂತೆ ಅರಣ್ಯ ಸಿಬ್ಬಂದಿ ರಾಜ್ಯ ಹೆದ್ದಾರಿ ಮತ್ತು ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳು, ಅರಣ್ಯ ಪ್ರದೇಶದಿಂದ ಹಾಯ್ದು ಹೋಗಿರುವ ರಸ್ತೆ ಅಂದರೆ ಒಟ್ಟು 200 ಕಿಮೀ ಉದ್ದದ ಮಾರ್ಗದಲ್ಲಿ ಬೆಂಕಿ ರೇಖೆ ನಿರ್ಮಿಸಲು ಮುಂದಾಗಿದೆ. ಬೆಂಕಿ ಅನಾಹುತ ಉಂಟಾಗುವ ಸೇರಿಭಿಕನಳ್ಳಿ, ಶಾದೀಪುರ, ಮಂಡಿ ಬಸವಣ್ಣ, ಸಂಗಾಪುರ, ಗೊಟ್ಟಂಗೊಟ್ಟ,ಬೊಮ್ಮಾಪುರ, ಕುಂಚಾವರಂ-
ಜಹೀರಾಬಾದ ರಸ್ತೆ, ಬಡಾತಾಂಡಾ, ವಂಟಿಚಿಂತಾ ತಾಂಡಾ ಪ್ರದೇಶ ಎಂದು ಗುರುತಿಸಲಾಗಿರುವ ಅರಣ್ಯದಲ್ಲಿ ರಸ್ತೆ ಬದಿಯಲ್ಲಿ ಜಂಗಲ್‌ ಕಟಿಂಗ್‌ ನಡೆದಿದೆ. ಇದಕ್ಕಾಗಿ ಸ್ಥಳೀಯ 15 ಜನರನ್ನು ವಾಚರ್‌ ಗಳೆಂದು ನೇಮಕ ಮಾಡಿಕೊಳ್ಳಲಾಗಿದೆ.

100 ಕಿಮೀ ಕಾರ್ಯ ಪೂರ್ಣ: ಚಿಂಚೋಳಿ ಅರಣ್ಯ ಪ್ರದೇಶದಲ್ಲಿ ಸುಮಾರು 100 ಕಿಮೀ ಉದ್ದದ ಬೆಂಕಿ ರೇಖೆ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ. ಇದಕ್ಕಾಗಿ ವನ್ಯಜೀವಿಧಾಮ ಇಲಾಖೆ 2.50 ಲಕ್ಷ ರೂ. ಖರ್ಚು ಮಾಡುತ್ತಿದೆ. ಅರಣ್ಯ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿ ಪತ್ತೆ ಹಚ್ಚಲು ಇಲಾಖೆಯು 15 ಫೈರ್‌ ವಾಚರ್‌ಗಳಲ್ಲಿ ಪ್ರತಿಯೊಂದು ಗುಂಪಿನಲ್ಲಿ ವಾಚರ್‌ ಗಳಿವೆ. ಫಾರೆಸ್ಟ್‌ ಐ ಪಾಯಿಂಟ್‌ಗಳಲ್ಲಿ ವಾಚರ್‌ ಗಳನ್ನು ನಿಯೋಜಿಸಲಾಗಿರುತ್ತದೆ. ಇವರು ತಮ್ಮ ವ್ಯಾಪ್ತಿಯೊಳಗಿನ ಕಾಡಿನಲ್ಲಿ ಅಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡರೆ ತಕ್ಷಣ ಹಿರಿಯ ಅ ಧಿಕಾರಿಗಳ ಗಮನಕ್ಕೆ ತಂದು, ಬೆಂಕಿ ನಂದಿಸಲು ಮುಂದಾಗುತ್ತಾರೆ.

ಮೂರು ವಿಧದಲ್ಲಿ ಬೆಂಕಿ ಅನಾಹುತ: ಗ್ರೌಂಡ್‌ ಫೈರ್‌ (ತರಗು ಹುಲ್ಲಿಗೆ ಬೆಂಕಿ), ಮಿಡ್‌ ಫೈರ್‌(ಪೊದೆ ಲಂಟಾನ ಇತ್ಯಾದಿ ಬೆಂಕಿ), ಕ್ರೌನ್‌ ಫೈರ್‌ (ಮರಗಳ ತುದಿಯಲ್ಲಿ ಕಾಣಿಸಿಕೊಳ್ಳುವ ಬೆಂಕಿ) ಈ ಮೂರು ರೀತಿಯ ಬೆಂಕಿಯ ಕಾಡ್ಗಿಚ್ಚನ್ನು ವನ್ಯಜೀವಿಧಾಮ ಇಲಾಖೆ ಗುರುತಿಸಿದೆ. ಅತಿದೊಡ್ಡ ಅರಣ್ಯ ಪ್ರದೇಶ: ಕುಂಚಾವರಂ ಅರಣ್ಯ
ಪ್ರದೇಶ ಜಿಲ್ಲೆಯಲ್ಲಿಯೇ ಅತಿ ದೊಡ್ಡ ಅಂದರೆ 13488.31 ಹೆಕ್ಟೇರ್‌ ಪ್ರದೇಶ ಹೊಂದಿದೆ. ಇದರಲ್ಲಿ ವನ್ಯಜೀವಿಧಾಮ ಅರಣ್ಯಪ್ರದೇಶ 134.88 ಚದರ ಕಿಮೀ ಪ್ರದೇಶದ ವ್ಯಾಪ್ತಿಗೆ ಒಳಪಡುತ್ತದೆ. ವಿವಿಧ ಜಾತಿಯ ಮರಗಳು, ಔಷಧಿ ಸಸ್ಯಗಳು, ಹಣ್ಣಿನ ಮರಗಳು ಇಲ್ಲಿವೆ. ತೋಳ, ಮಂಗ, ಕೋತಿ, ಜಿಂಕೆ, ಕಾಡು ಕುರಿ, ಕಾಡುಹಂದಿ, ನವಿಲು, ಮುಳ್ಳು ಹಂದಿ, ಮುಂಗುಸಿ, ಸಾರಂಗ ಹಾಗೂ ಪಕ್ಷಿಗಳು ಇಲ್ಲಿವೆ.

ಕುಂಚಾವರಂ ಬೆಂಕಿ ರೇಖೆ ಎಂದರೇನು? ಅರಣ್ಯಪ್ರದೇಶ ಸುರಕ್ಷತೆಗೆ ಅಗತ್ಯ ಕ್ರಮ
ಕೈಗೊಳ್ಳಲಾಗುತ್ತಿದೆ. ಜನರು ಕಾಡಿನೊಳಗೆ ಹೋಗದಂತೆ ಎಚ್ಚರಿಕೆ ನೀಡಲಾಗುತ್ತಿದೆ. ಅಲ್ಲದೇ ತಾಂಡಾ ಮತ್ತು ಗ್ರಾಮಗಳಲ್ಲಿ ಡಂಗೂರ ಸಾರುವ ಮೂಲಕ ಜನ ಜಾಗೃತಿ ಮೂಡಿಸಲಾಗುತ್ತಿದೆ.
ಸಂಜೀವಕುಮಾರ ಚವ್ಹಾಣ,
ವನ್ಯಜೀವಿಧಾಮ ಅರಣ್ಯಾಧಿಕಾರಿ, ಕುಂಚಾವರಂ

ಮಳೆಗಾಲ ಮತ್ತು ಚಳಿಗಾಲದಲ್ಲಿ ಕುಂಚಾವರಂ ಅರಣ್ಯಪ್ರದೇಶ ಹಚ್ಚ ಹಸಿಗಿನಿಂದ ಕಂಗೊಳಿಸುತ್ತದೆ. ಸಣ್ಣಪುಟ್ಟ ಜಲಪಾತಗಳು ಉಕ್ಕಿ ಹರಿಯುತ್ತವೆ. ಬೆಟ್ಟ-ಗುಡ್ಡಗಳ್ಳಿ ಬೆಳೆದಿರುವ ಬಾನೆತ್ತರದ ಮರಗಳಿಂದ ಕೂಡಿದ ಇಂತಹ ಪ್ರದೇಶವನ್ನು ರಕ್ಷಿಸಬೇಕಿದೆ. ಇದೊಂದು ನಮ್ಮ ಭಾಗದ ಮಲೆನಾಡು ಪ್ರದೇಶ. ಕಾಡಿನೊಳಗೆ ಹೋಗುವ ಸಂದರ್ಭದಲ್ಲಿ ಪ್ರಯಾಣಿಕರು ಬೀಡಿ, ಸಿಗರೇಟ್‌ ಸೇದಬಾರದು.
ಶಿವನಾಗಯ್ಯ ಸ್ವಾಮಿ,
ಸಮಾಜ ಸೇವಕ

ಬೆಂಕಿ ರೇಖೆ ಎಂದರೇನು?
ವಸಂತ ಋತುವಿನಲ್ಲಿ ಮರಗಳ ಎಲೆಗಳು ಸಾಮಾನ್ಯವಾಗಿ ಉದುರಿ, ಹೊಸ ಎಲೆಗಳು ಚಿಗುರುತ್ತವೆ. ಇದರಿಂದ ಅಪಾರ ಪ್ರಮಾಣದಲ್ಲಿ ಉದುರಿದ ಎಲೆಗಳು ಒಂದೆಡೆ ಸಂಗ್ರಹವಾಗಿರುತ್ತದೆ. ದಾರಿ ಹೋಕರು, ವಿಶ್ರಾಂತಿಗೆ ಆಗಮಿಸಿದ ಜನರು ಧೂಮಪಾನ
ಮಾಡಿ ಬೀಸಾಡುವ ಸಿಗರೇಟ್‌, ಬೀಡಿಯ ಕಿಡಿಹೊತ್ತಿ ಬೆಂಕಿ ತಗಲುವ ಸಾಧ್ಯತೆಗಳು ಹೆಚ್ಚು .ಹಿಂದೆ ಇಂತಹ ಅನೇಕ ಘಟನೆಗಳು ಬಹಳಷ್ಟು ಕಡೆ ನಡೆದಿವೆ. ಅರಣ್ಯದಲ್ಲಿ ಈ ರೀತಿ ಏಕಾಏಕಿ ಉಂಟಾಗುವ ಬೆಂಕಿಯನ್ನು ತಡೆಯುವ ಅಥವಾ ದೂರದವರೆಗೆ ವ್ಯಾಪಿಸದಂತೆ ಬೆಂಕಿ ರೇಖೆ (ಫೈರ್‌ ಲೈನ್‌) ತಂತ್ರ ಬಳಕೆ ಮಾಡಲಾಗುತ್ತದೆ. ಅರಣ್ಯ ಪ್ರದೇಶದ ಮೂಲಕ ಸಾಗುವ ರಸ್ತೆಗಳ ಅಕ್ಕ-ಪಕ್ಕ, ಕಾಡಿನ ಕಾಲು ದಾರಿಗಳು, ಬೆಂಕಿ ಸ್ಥಳಗಳನ್ನು ಗುರುತಿಸಲಾಗುತ್ತದೆ. ನಂತರ ಮೂರು ಮೀಟರ್‌ ಅಗಲದ ಅಂತರದಲ್ಲಿ ಅರಣ್ಯ ಸಿಬ್ಬಂದಿಯೇ ಬೆಂಕಿ ಹಚ್ಚಿ ಒಣಗಿದ ಹುಲ್ಲು, ತರಗು ಗಿಡಗಳನ್ನು ಸುಟ್ಟು ನಾಶಪಡಿಸುತ್ತಾರೆ. ಬೆಂಕಿ ಒಂದು ಕಡೆಯಿಂದ ಮತ್ತೂಂದು ಕಡೆಗೆ ಹರಡುವುದನ್ನು ತಡೆಯುವುದಕ್ಕೆ ಇದೊಂದು ತಂತ್ರವಾಗಿದೆ.

„ಶಾಮರಾವ ಚಿಂಚೋಳಿ

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.