ಚಿಂಚೋಳಿ: 99,767 ಹೆಕ್ಟೇರ್ ಪ್ರದೇಶದಲ್ಲಿ ಮುಂಗಾರಿ ಬಿತ್ತನೆ
Team Udayavani, May 22, 2020, 3:47 PM IST
ಸಾಂದರ್ಭಿಕ ಚಿತ್ರ
ಚಿಂಚೋಳಿ: 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಒಟ್ಟು 99,767 ಹೆಕ್ಟೇರ್ ಪ್ರದೇಶ ಬಿತ್ತನೆ ಗುರಿ ಇದೆ ಎಂದು ತಾಲೂಕು ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಅನಿಲಕುಮಾರ ರಾಠೊಡ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ವರ್ಷ ಮುಂಗಾರು ಮಳೆಗಳು ಉತ್ತಮವಾಗಿವೆ ಎಂದು ಈಗಾಗಲೇ ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಬೇಗನೆ ಬಿತ್ತನೆ ಕಾರ್ಯ ಪ್ರಾರಂಭ ಆಗುವ ಸಾಧ್ಯತೆ ಇದೆ. ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ, ಕೀಟ ನಾಶಕಗಳನ್ನು ಸಂಗ್ರಣೆ ಮಾಡಿಕೊಳ್ಳಲಾಗಿದೆ. ಬಿತ್ತನೆ ಬೀಜಗಳ ಮತ್ತು ರಸಗೊಬ್ಬರ ಕೊರತೆ ಇಲ್ಲ ಎಂದರು.
ಬಿತ್ತನೆ ಕ್ಷೇತ್ರದ ವಿವರ: ಹೆಸರು 12,000 ಹೇಕ್ಟರ್, ಉದ್ದು 7,000 ಹೆಕ್ಟೇರ್, ತೊಗರಿ 69,500 ಹೇಕ್ಟರ್, ಅವರೆ 25 ಹೆಕ್ಟೇರ್, ಸೋಯಾಬಿನ 700 ಹೆಕ್ಟೇರ್, ಹೈಬ್ರಿಡ್ ಜೋಳ 310 ಹೆಕ್ಟೇರ್, ಸಜ್ಜೆ 1,000 ಹೆಕ್ಟೇರ್, ಮೆಕ್ಕೆಜೋಳ 200 ಹೆಕ್ಟೇರ್, ಎಳ್ಳು 650 ಹೆಕ್ಟೇರ್, ಹೈಬ್ರಿಡ್ ಹತ್ತಿ 150 ಹೆಕ್ಟೇರ್, ಕಬ್ಬು 1,487 ಹೆಕ್ಟೇರ್ ಹಾಗೂ ಇತರೆ 15 ಹೆಕ್ಟೇರ್ ಬಿತ್ತನೆ ಗುರಿ ಇದೆ. ದ್ವಿದಳ ಧಾನ್ಯ 22,222 ಹೆಕ್ಟೇರ್, ಎಣ್ಣಿಕಾಳು ಬೆಳೆ 1926.25 ಹೆಕ್ಟೇರ್ ಏಕದಳ ಧಾನ್ಯ 383.75 ಹೆಕ್ಟೇರ್, ವಾಣಿಜ್ಯ ಬೆಳೆ 409.28 ಹೆಕ್ಟೇರ್ ಬಿತ್ತನೆ ಆಗಲಿದೆ. ತೊಗರಿ 155 ಕ್ವಿಂಟಲ್, ಸೋಯಾಬಿನ್ 99.60 ಕ್ವಿಂಟಲ್ ಬೀಜ ಪೂರೈಕೆ ಆಗಿದೆ. ರಸಗೊಬ್ಬರ: ಯೂರಿಯಾ 10 ಟನ್, ಡಿಎಪಿ 2220 ಟನ್, ಎಂಒಪಿ 30 ಟನ್, ಕಾಂಪೋಸ್ಟ್ 50 ಟನ್ ಸೇರಿದಂತೆ 2,315 ಮೆಟ್ರಿಕ್ ಟನ್ ಸಂಗ್ರಹವಿದೆಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು