ಅಂಬೇಡ್ಕರ್‌ ಪ್ರತಿಮೆಗೆ ಅಗೌರವ ಆಕ್ರೋಶ

ಪುರಸಭೆ ಮುಖ್ಯಾಧಿಕಾರಿ ಅಮಾನತಿಗೆ ಒತ್ತಾಯ ದಲಿತ ಮುಖಂಡರಿಂದ ಪ್ರತಿಭಟನೆ

Team Udayavani, Jan 27, 2020, 10:55 AM IST

27-Janauary-2

ಚಿಂಚೋಳಿ: ಡಾ| ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡದೇ ತಾಲೂಕು ಆಡಳಿತ ಅಗೌರವ ತೋರಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ವಿವಿಧ ದಲಿತ ಸಂಘಟನೆಗಳ ಮುಖಂಡರು ಶಾಸಕ ಡಾ| ಅವಿನಾಶ ಜಾಧವ, ಮುಖ್ಯಾಧಿಕಾರಿ ಅಭಯಕುಮಾರ, ತಹಶೀಲ್ದಾರ್‌ ಅರುಣ ಕುಲಕರ್ಣಿ ಎದುರು ಪ್ರತಿಭಟನೆ ನಡೆಸಿದರು.

ಚಿಂಚೋಳಿ: 71ನೇ ಗಣರಾಜ್ಯೋತ್ಸವ ದಿನಾಚರಣೆ ದಿವಸ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ| ಬಿ.ಆರ್‌. ಅಂಬೇಡ್ಕರ್‌ ಪ್ರತಿಮೆಗೆ ತಾಲೂಕಾಡಳಿತ, ಪುರಸಭೆ ಮಾಲಾರ್ಪಣೆ ಮಾಡದೇ ಅಗೌರವ ತೋರಿಸಿದ್ದನ್ನು ಖಂಡಿಸಿ ತಾಲೂಕಿನ ವಿವಿಧ ದಲಿತ ವಿವಿಧ ಸಂಘಟನೆಗಳ ಮುಖಂಡರು, ಜೆಡಿಎಸ್‌ ಕಾರ್ಯಕರ್ತರು ಪೊಲೀಸ್‌ ಪರೇಡ್‌ ಮೈದಾನದಲ್ಲಿ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದರು.

ಶಾಸಕ ಡಾ| ಅವಿನಾಶ ಜಾಧವ, ತಹಶೀಲ್ದಾರ್‌ ಅರುಣಕುಮಾರ ಕುಲಕರ್ಣಿ ಪುರಸಭೆ ಮುಖ್ಯಾಧಿಕಾರಿ ಅಭಯಕುಮಾರ ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿಲ್ಲ ಎಂದು ಪುರಸಭೆ ಸದಸ್ಯ ಆನಂದ ಟೈಗರ್‌, ಹಿರಿಯ ದಲಿತ ಮುಖಂಡ ಗೋಪಾಲರಾವ್‌ ಕಟ್ಟಿಮನಿ, ಭಾರತ ಮುಕ್ತಿ ಮೋರ್ಚಾ ರಾಜ್ಯ ಸಂಚಾಲಕ ಮಾರುತಿ ಗಂಜಗಿರಿ, ಗೌತಮ ಬೊಮ್ಮನಳ್ಳಿ, ಶಿವಕುಮಾರ ಕೊಳ್ಳುರ, ದಲಿತ ಸಂಘಟನೆ ಮುಖಂಡ ವಾಮನರಾವ್‌ ಕೊರವಿ, ಪಾಂಡುರಂಗ ಲೊಡನೋರ, ಅಮರನಾಥ ಲೊಡನೋರ, ಲೋಕೇಶ, ವಿಶ್ವನಾಥ ಬೀರನಳ್ಳಿ ಹಾಗೂ ಮತ್ತಿತರು ತೀವ್ರವಾಗಿ ಖಂಡಿಸಿದರು.

ಈ ವೇಳೆ ಮಾತನಾಡಿದ ಶಾಸಕ ಡಾ| ಅವಿನಾಶ ಜಾಧವ, ಡಾ| ಬಿ.ಆರ್‌. ಅಂಬೇಡ್ಕರ್‌ ಅವರಿಗೆ ನಾವ್ಯಾರೂ ಅಗೌರವ ತೋರಿಸಿಲ್ಲ. ಯಾರು ತಪ್ಪು ಮಾಡಿದ್ದಾರೆಯೋ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ನಂತರ ಪುರಸಭೆ ಮುಖ್ಯಾಧಿಕಾರಿ ಅಭಯಕುಮಾರ ಅವರನ್ನು ತರಾಟೆಗೆ ತೆಗೆದುಕೊಂಡ ಶಾಸಕರು ನಿಮಗೆ ಡಾ| ಬಿ.ಆರ್‌. ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಬೇಕು. ಪೂಜೆ ಸಲ್ಲಿಸಬೇಕು ಎಂದು ಗೊತ್ತಾಗುವುದಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಾಧಿಕಾರಿ ಅಭಯಕುಮಾರ ಮಾತನಾಡಿ, ಇನ್ನು ಮುಂದೆ ಇಂತಹ ತಪ್ಪು ಆಗದಂತೆ
ನೋಡಿಕೊಳ್ಳುತ್ತೇನೆ. ನನ್ನನ್ನು ಕ್ಷಮಿಸಿ ಎಂದು ಬಹಿರಂಗವಾಗಿ ದಲಿತ ಸಂಘಟನೆಗಳ ಮುಖಂಡರಲ್ಲಿ ಕ್ಷಮೆಯಾಚಿಸಿದರು. ತಹಶೀಲ್ದಾರ್‌ ಅರುಣಕುಮಾರ ಕುಲಕರ್ಣಿ ಅವರು ಕ್ಷಮೆ ಕೋರಿದರು.

ಕೇವಲ ಕ್ಷಮೆ ಕೇಳಿದರೆ ಸಾಲದು ತಪ್ಪು ಮಾಡಿದ ಮುಖ್ಯಾಧಿಕಾರಿ ವಿರುದ್ಧ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿ, ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಪಟ್ಟುಹಿಡಿದ ದಲಿತ ಸಂಘಟನೆಗಳ ಮುಖಂಡರಾದ ಜೆಡಿಎಸ್‌ ತಾಲೂಕು ಅಧ್ಯಕ್ಷ ರವಿಶಂಕರ ಮುತ್ತಂಗಿ, ಹಣಮಂತ ಪೂಜಾರಿ, ಮಹೆಬೂಬಶಾ, ಮಾಜೀದ್‌ ಪ್ರತಿಭಟನೆ ನಡೆಸಿದರು. ದಲಿತ ಸಂಘಟನೆಗಳ ಮುಖಂಡ ಕಾಶಿನಾಥ ದೇಗಲಮಡಿ ಶಾಸಕರ ಕಾರಿನ ಎದುರು ಮಲಗಿ ಪ್ರತಿಭಟನೆ ನಡೆಸುತ್ತಿದ್ದಾಗ ಡಿವೈಎಸ್ಪಿ ಇ.ಎಸ್‌. ವೀರಭದ್ರಯ್ಯ, ಸಿಪಿಐ ಎಚ್‌.ಎಂ. ಇಂಗಳೇಶ್ವರ ಮಾತನಾಡಿ, ಯಾರು ನಿರ್ಲಕ್ಷ್ಯತನ ಮತ್ತು ಅಗೌರವ ತೋರಿಸಿದ್ದಾರೆ ಅವರ ವಿರುದ್ಧ ದೂರು ನೀಡಿ ಎಂದು ಎಲ್ಲರನ್ನು ಸಮಾಧಾನಪಡಿಸಿ ಪ್ರಕ್ಷುಬ್ದ ವಾತಾವರಣವನ್ನು ತಿಳಿಗೊಳಿಸಿದರು.

ನಂತರ ಶಾಸಕ ಡಾ| ಅವಿನಾಶ ಜಾಧವ ಪೊಲೀಸ್‌ ಬಿಗಿ ಭದ್ರತೆಯಲ್ಲಿ ತೆರಳಿ ಡಾ|ಬಿ.ಆರ್‌. ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಿಜೆಪಿ ಕಾರ್ಯಕರ್ತರು, ಗಣ್ಯರು, ಅಧಿಕಾರಿಗಳು ಭಾಗವಹಿಸಿದ್ದರು. ಮುಖ್ಯಾಧಿಕಾರಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್‌ಗೆ ದೂರು ನೀಡಲಾಗಿದೆ ಎಂದು ಮಾರುತಿ ಗಂಜಗಿರಿ ಗೋಪಾಲರಾವ್‌ ಕಟ್ಟಿಮನಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.