ಚಿಂಚೋಳಿ: ಧಾರಾಕಾರ ಮಳೆ; 236 ಮನೆಗಳಿಗೆ ನುಗ್ಗಿದ ನೀರು

ವಾಹನಗಳ ಸಂಚಾರಕ್ಕೆ, ಗ್ರಾಮಸ್ಥರು ಹೊಲಗದ್ದೆಗಳಿಗೆ ಮತ್ತು ಬೇರೆಡೆ ಹೋಗಲು ತೊಂದರೆಪಡಬೇಕಾಯಿತು.

Team Udayavani, Oct 15, 2022, 5:47 PM IST

ಚಿಂಚೋಳಿ: ಧಾರಾಕಾರ ಮಳೆ; 236 ಮನೆಗಳಿಗೆ ನುಗ್ಗಿದ ನೀರು

ಚಿಂಚೋಳಿ: ತಾಲೂಕಿನಲ್ಲಿ ಗುರುವಾರ ಸಂಜೆ ಯಿಂದ ಮಧ್ಯರಾತ್ರಿ ವರೆಗೆ ಸುರಿದ ಧಾರಾಕಾರ ಮಳೆಯಿಂದ ಪಟ್ಟಣದ ತಗ್ಗುಪ್ರದೇಶದ ಬಡಾವಣೆಗಳ ಅನೇಕ ಮನೆಗಳಿಗೆ ನೀರು ನುಗ್ಗಿ ದಿನಬಳಕೆ ವಸ್ತುಗಳು ಹಾನಿಯಾಗಿವೆಯಲ್ಲದೇ, ಮನೆಯಲ್ಲಿ ಹೊಕ್ಕಿದ ನೀರನ್ನು ಹೊರಹಾಕಲು ಜನರು ಜಾಗರಣೆ ಮಾಡುವ ಪರಿಸ್ಥಿತಿ ಉಂಟಾಗಿತ್ತು.

ಮಧ್ಯರಾತ್ರಿ ಸುರಿದ ಧಾರಾಕಾರ ಮಳೆಯಿಂದ ಪಟೇಲ್‌ ಕಾಲೋನಿ, ಬೆಳ್ಳಿಬೆಳಕು ಕಾಲೋನಿ, ಆಶ್ರಯ ಕಾಲೋನಿಯ 70ಮನೆಗಳಿಗೆ ಚರಂಡಿ ನೀರು ನುಗ್ಗಿದ್ದರಿಂದ ಮಲಗಿದ್ದ ಜನರು ಎಚ್ಚರವಾಗಿದ್ದು, ಚಿಕ್ಕಮಕ್ಕಳನ್ನು ಎತ್ತಿಕೊಂಡು ಸುರಕ್ಷಿತ ಸ್ಥಳಕ್ಕೆ ತೆರಳಿದರು. ಮನೆಯಲ್ಲಿದ್ದ ದಿನಬಳಕೆ ಆಹಾರ ಧಾನ್ಯ, ಬಟ್ಟೆಬರೆ, ಇನ್ನಿತರ ವಸ್ತುಗಳು ನೀರಿನಿಂದ ಹಾನಿಯಾಗಿವೆ.

ಗುರುವಾರ ರಾತ್ರಿ ಹಲವು ಗ್ರಾಮಗಳಲ್ಲಿ ಒಂದೇ ಸಮನೆ ಸುರಿದ ಭಾರಿ ಮಳೆಗೆ ಐನಾಪುರ, ಸುಲೇಪೇಟ, ಕುಂಚಾವರಂ, ಚಿಂಚೋಳಿ, ಚಿಮ್ಮನಚೋಡ, ನಿಡಗುಂದಾ ಹೋಬಳಿಯಲ್ಲಿ ಒಟ್ಟು 166 ಮನೆಗಳಿಗೆ ನೀರು ನುಗ್ಗಿದೆ. ನಾಲ್ಕು ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಮನೆಗಳಿಗೆ ಮಳೆ ನೀರು ನುಗ್ಗಿ ಹಾನಿಯಾಗಿರುವ ಆಶ್ರಯ ಕಾಲೋನಿ ಎಲ್ಲ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ.

ಹಾನಿಗೊಳಗಾದ ಎಲ್ಲರಿಗೂ ಸರ್ಕಾರದಿಂದ ಪರಿಹಾರ ಕೊಡಿಸಲು ಕಂದಾಯ ನಿರೀಕ್ಷಕರು ಮತ್ತು ಗ್ರಾಮಲೆಕ್ಕರಿಗೆ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ತಹಶೀಲ್ದಾರ್‌ ಅಂಜುಮ್‌ ತಬಸುಮ್‌ ತಿಳಿಸಿದ್ದಾರೆ.

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಸಣ್ಣಪುಟ್ಟ ನಾಲೆಗಳು ತುಂಬಿ ಹರಿಯುತ್ತಿವೆ. ಕೆಳದಂಡೆ ಮುಲ್ಲಾಮಾರಿ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಆರ್ಭಟದಿಂದ ಮಳೆಯಾಗಿದೆ. ಇದರಿಂದಾಗಿ ಜಲಾಶಯದಲ್ಲಿ ಒಳಹರಿವು ಹೆಚ್ಚಾಗಿದ್ದರಿಂದ ಮೂರು ಗೇಟ್‌ನಿಂದ 2ಸಾವಿರ ಕ್ಯೂಸೆಕ್‌ ನೀರನ್ನು ಮುಲ್ಲಾಮಾರಿ ನದಿಗೆ ಹರಿದುಬಿಡಲಾಗಿದೆ ಎಂದು ಎಇಇ ಹಣಮಂತರಾವ ಪೂಜಾರಿ ತಿಳಿಸಿದ್ದಾರೆ.

ಕೆಳದಂಡೆ ಮುಲ್ಲಾಮಾರಿ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ಹರಿದುಬಿಟ್ಟ ಹೆಚ್ಚುವರಿ ನೀರಿನಿಂದ ತಾಜಲಾಪುರ, ಕನಕಪುರ, ಗಾರಂಪಳ್ಳಿ, ಗೌಡಹನಳ್ಳಿ, ನಿಮಾಹೊಸಳ್ಳಿ,ಪೋಲಕಪಳ್ಳಿ, ಗರಗಪಳ್ಳಿ ಗ್ರಾಮದ ಬಳಿ ಮುಲ್ಲಾಮಾರಿ ನದಿಗೆ ನಿರ್ಮಿಸಿದ ಬ್ಯಾರೇಜ್‌ ಜಲಾವೃತವಾಗಿದೆ. ಇದರಿಂದಾಗಿ ವಾಹನಗಳ ಸಂಚಾರಕ್ಕೆ, ಗ್ರಾಮಸ್ಥರು ಹೊಲಗದ್ದೆಗಳಿಗೆ ಮತ್ತು ಬೇರೆಡೆ ಹೋಗಲು ತೊಂದರೆಪಡಬೇಕಾಯಿತು.

ಪಟ್ಟಣದ ಪಟೇಲ್‌ ಕಾಲೋನಿ ಬಳಿ ಇರುವ ಎಸ್‌.ಬಿ.ಐ ಬ್ಯಾಂಕಿನ ನೆಲಮಹಡಿಯಲ್ಲಿ ಮಳೆ ನೀರು ನಿಂತಿದ್ದರಿಂದ ಬರುವ ಗ್ರಾಹಕರು ತೊಂದರೆ ಪಡುವಂತೆ ಆಗಿತ್ತು. ಬ್ಯಾಂಕಿನ ಹಿಂದುಗಡೆ ಇರುವ ಮನೆಗಳ ಸುತ್ತಮುತ್ತ ತಗ್ಗುಪ್ರದೇಶದಲ್ಲಿ ಮಳೆ ನೀರು ನಿಂತಿದೆ. ಆದರೆ ಕಾಲೋನಿಯಲ್ಲಿ ಚರಂಡಿ ವ್ಯವಸ್ಥೆಯಿಲ್ಲದ ಕಾರಣ ಮಳೆ ನೀರು ಹರಿದು ಹೋಗುತ್ತಿಲ್ಲ. ಮಳೆ ನೀರಿನಿಂದ ಸೊಳ್ಳೆಕಾಟ, ಗೊಬ್ಬುವಾಸನೆ ವಿಪರೀತವಾಗಿದೆ ಎಂದು ನಿವಾಸಿಗಳು ದೂರಿದ್ದಾರೆ. ಕನಕಪುರ,
ಗಾರಂಪಳ್ಳಿ, ಹೂಡದಳ್ಳಿ, ಮಿರಿಯಾಣ, ಮರಪಳ್ಳಿ, ಚಿಮ್ಮನಚೋಡ, ನರನಾಳ, ಚಿಂಚೋಳಿ ಗ್ರಾಮಗಳ ಹೊಲಗಳಲ್ಲಿ ಬೆಳೆದ ತೊಗರಿ ಮಳೆ ನೀರಲ್ಲಿ ನಿಂತಿದೆ.

ಆಹಾರ ಧಾನ್ಯಕ್ಕೆ ಹಾನಿ: ಪಟ್ಟಣದ ಚಂದಾಪುರ ನಗರದ ಚರಂಡಿಗೆ ಹೊಂದಿಕೊಂಡಿರುವ ಪಟೇಲ್‌ ಕಾಲೋನಿಯಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಆಹಾರಧಾನ್ಯಗಳಿಗೆ ಹಾನಿಯಾಗಿದೆ. ಬೈಕ್‌ ಮತ್ತು ಕಾರುಗಳು ಕೊಚ್ಚಿಕೊಂಡು ಹೋಗಿವೆ ಎಂದು ಇಸ್ಮಾಯಿಲ್‌ ಪಟೇಲ ತಿಳಿಸಿದ್ದಾರೆ.

ಕ್ರಮಕ್ಕೆ ಜೆಡಿಎಸ್‌ ಆಗ್ರಹ: ಪಟ್ಟಣದಲ್ಲಿ ಹೆಚ್ಚು ಮಳೆ ಸುರಿದ್ದರಿಂದ ಪಟೇಲ್‌, ಆಶ್ರಯ, ಬೆಳ್ಳಿ ಬೆಳಕು ಕಾಲೋನಿಯಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು, ಕೂಡಲೇ ಈ ಪ್ರಸಂಗ ಮರುಕಳಿಸದಂತೆ ಜನಪ್ರತಿನಿಧಿಗಳು, ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್‌ ತಾಲೂಕು ಅಧ್ಯಕ್ಷ ರವಿಶಂಕರರೆಡ್ಡಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.