ನುಡಿಹಬ್ಬಕ್ಕೆ ಚಿತ್ತಾಪುರ ಸಜು


Team Udayavani, Jan 5, 2018, 11:04 AM IST

gul-6.jpg

ಚಿತ್ತಾಪುರ: ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆಯುವ ನಾಗಾವಿ ನಾಡು ನುಡಿ ಹಬ್ಬಕ್ಕೆ ಪಟ್ಟಣ ನವ ವಧುವಿನಂತೆ ಸಿಂಗಾರಗೊಂಡಿದೆ. ಡಾ| ನೀಲಮ್ಮ ಕತ್ನಳ್ಳಿ ಶಹಾಬಾದ ಸಮ್ಮೇಳನದ ಅಧ್ಯಕ್ಷತೆ ವಹಿಸುವರು. ಶುಕ್ರವಾರ ಬೆಳಗ್ಗೆ 8:00ಕ್ಕೆ ಪ್ರವಾಸೋದ್ಯಮ ಮತ್ತು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಖಾತೆ ಸಚಿವ ಪ್ರಿಯಾಂಕ್‌ ಖರ್ಗೆ, ಕಸಾಪ ತಾಲೂಕು ಅಧ್ಯಕ್ಷ ಕಾಶಿನಾಥ ಗುತ್ತೇದಾರ ರಾಷ್ಟ್ರ ಹಾಗೂ ನಾಡಧ್ವಜಾರೋಹಣ ನೆರವೇರಿಸಲಿದ್ದಾರೆ. ಸಮ್ಮೇಳನಾಧ್ಯಕ್ಷೆ ಡಾ| ನೀಲಮ್ಮ ಕತ್ನಳ್ಳಿ ಶಹಾಬಾದ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ನಂತರ ತಾಲೂಕು ಹಾಗೂ ವಿವಿಧ ಕಡೆಗಳಿಂದ ಆಗಮಿಸುವ ಕಲಾ ತಂಡದವರೊಂದಿಗೆ ತಹಶೀಲ್ದಾರ ಕಚೇರಿಯಿಂದ ಆರಂಭಗೊಂಡ ಮೆರವಣಿಗೆಯಲ್ಲಿ ವಿಜ್ಞಾನೇಶ್ವರ ಮಿತಾಕ್ಷರ ಮಹಾ ಮಂಟಪ-ಸಂತ ಚಿತ್ತಾಶಾವಲಿ ಮಹಾದ್ವಾರ ಸೇರಿದಂತೆ ಇನ್ನಿತರ ಮಹಾದ್ವಾರಗಳು ರಾರಾಜಿಸಲಿವೆ. ಅಂಗನವಾಡಿ ಕಾರ್ಯಕರ್ತರು, ಆಟೋ ಚಾಲಕರು ಹಾಗೂ ಯುವಕರು ಬೈಕ್‌ರ್ಯಾಲಿ ನಡೆಸಲಿದ್ದಾರೆ.

ಸಚಿವ ಪ್ರಿಯಾಂಕ್‌ ಖರ್ಗೆ ಸಮ್ಮೇಳನಕ್ಕೆ ಚಾಲನೆ ನೀಡುವವರು. ಕಸಾಪ ಜಿಲ್ಲಾಧ್ಯಕ್ಷ ವೀರಭದ್ರಪ್ಪ ಸಿಂಪಿ ಆಶಯ ನುಡಿ ಹೇಳುವರು. ವಿವಿಧ ಶ್ರೀಗಳು ಹಾಗೂ ಸನ್ನತಿ ಪೂಜ್ಯ ಭಂತೆ ಧಮ್ಮಾನಂದ ಅಣದೂರು, ಹಲಕಟ್ಟಾದ ಖಾಜಾ ಸೈಯ್ಯದ್‌ ಅಬುತುರಾಬ್‌ ಶಹಾ ಖಾದ್ರಿ ಚಿಸ್ತಿಯಮನಿ ಶರೀಫ್‌ ಮಾತನಾಡುವರು.

ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಸ್ಮರಣ ಸಂಚಿಕೆ ಮತ್ತು ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಾಬುರಾವ ಚಿಂಚನಸೂರ ಕವನ ಸಂಕಲನ ಬಿಡುಗಡೆ ಮಾಡುವುದು. ಅಲ್ಲದೆ ವಿವಿಧ ಲೇಖಕರು ಬರೆದ ಪುಸ್ತಕಗಳು ಬಿಡುಗಡೆಯಾಗಲಿವೆ. ಪಕ್ಕದ ಕೆ.ಇ.ಬಿ ಆವರಣದಲ್ಲಿ ಊಟದ ಕೌಂಟರ್‌ ತೆರೆದಿದ್ದು, ಗಣ್ಯರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ 62 ಮೀಟರ್‌ ಉದ್ದದ ಕನ್ನಡ ಧ್ವಜ ಪ್ರದರ್ಶಿಸಲಾಗುತ್ತಿದೆ. ನಂತರ ಮಲ್ಲಕಂಬ ಪ್ರದರ್ಶನ ಹಾಗೂ ವಿವಿಧ ಶಾಲೆ-ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಇತಿಹಾಸದ ಪುಟಗಳಲ್ಲಿ ಬರೆದಿಡುವ ದಿನ
ಚಿತ್ತಾಪುರ: ಜನವರಿ ಐದನೇ ದಿನಾಂಕವನ್ನು ಚಿತ್ತಾಪುರ ಇತಿಹಾಸದ ಪುಟಗಳಲ್ಲಿ ಬರೆದು ಇಡುವಂತಹ
ದಿನ. ಕಾರಣ ತಾಲೂಕಿನಲ್ಲಿ ತೃತೀಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಕನ್ನಡ ಸಾಹಿತ್ಯ ಪರಿಷತ್‌ ಸ್ಥಾಪನೆಯಾಗಿ ಶತಮಾನ ಕಳೆದರೂ ಚಿತ್ತಾಪುರ ತಾಲೂಕಿನಲ್ಲಿ ಇಲ್ಲಿವರೆಗೂ ಒಂದು ಕನ್ನಡ ಸಾಹಿತ್ಯ
ಸಮ್ಮೇಳನ ಆಗಿರಲಿಲ್ಲ. ಇದನ್ನು ಮನಗಂಡು ಮತ್ತು ಸಾಹಿತ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ 2014ರಲ್ಲಿ ಪ್ರಥಮ ಹಾಗೂ 2016ರಲ್ಲಿ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿದ್ದ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಪ್ರಸ್ತುತ ತೃತೀಯ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಲು ಅಣಿಯಾಗುತ್ತಿರುವುದು ಈ ಭಾಗದ ಸಾಹಿತ್ಯಾಭಿಮಾನಿಗಳಿಗೆ ತೀವ್ರ ಹರ್ಷ ತಂದಿದೆ.

ಜ.5ರಂದು ಚಿತ್ತಾಪುರದಲ್ಲಿ ಕನ್ನಡ ಹಬ್ಬದ ವಾತಾವರಣ, ತಾಲೂಕು ಸೇರಿದಂತೆ ಜಿಲ್ಲೆಯ ಎಲ್ಲ ಕಡೆಯಿಂದ ಕನ್ನಡಿಗರು ಚಿತ್ತಾಪುರದ ಕಡೆಗೆ ನೋಟ ಹರಿಸುವ ದಿನ. ತೃತೀಯ ಸಾಹಿತ್ಯ ಸಮ್ಮೇಳನವಾಗಿದ್ದು ಡಾ. ನೀಲಮ್ಮ ಕತ್ನಳ್ಳಿ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕಸಾಪ ತಾಲೂಕು ಅಧ್ಯಕ್ಷ ಕಾಶಿನಾಥ ಗುತ್ತೇದಾರ ಪರಿಷತ್ತಿನ ಪದಾಧಿಕಾರಿಗಳೊಂದಿಗೆ ಸಮ್ಮೇಳನ್ನಕ್ಕಾಗಿ ಶ್ರಮಿಸಿದ್ದಾರೆ. 

ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು ನುಡಿ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ
ಕನ್ನಡ ಸಾಹಿತ್ಯ ಪರಿಷತ್ತು ಸಮ್ಮೇಳನ ನಡೆಸುವ ಮೂಲಕ ನಾಡಿನ ಮೂಲೆ ಮೂಲೆಗಳಲ್ಲಿ ಸಾಹಿತ್ಯ ಹರಡಿಸಿದೆ. ಕನ್ನಡ ಸಾಹಿತ್ಯ ಲೋಕದ ದಿಗ್ಗಜರು, ಸಾಹಿತ್ಯಾಸಕ್ತರು, ಕನ್ನಡ ಅಭಿಮಾನಿಗಳು ಒಂದೇಡೆ ಸೇರಿ, ಪ್ರಚಲಿತ ಸಾಹಿತ್ಯದ ಸ್ಥಿತಿಗತಿ ಚರ್ಚಿಸುವಂತಹ ವೇದಿಕೆಯೇ ಕನ್ನಡ ಸಾಹಿತ್ಯ ಸಮ್ಮೇಳನ.

ಈಗ ನಾಗಾವಿ ನಾಡಿನಲ್ಲಿ ತೃತೀಯ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಇಲ್ಲಿನ ಸಾಹಿತ್ಯಾಭಿಮಾನಿಗಳಿಗೆ
ಹರ್ಷ ತಂದಿದೆ. ಕನ್ನಡ ಹಾಗೂ ಕನ್ನಡಿಗರ ಪರವಾಗಿ ಕನ್ನಡಿಗರನ್ನು ಬೆಸೆಯುತ್ತಾ ಎಚ್ಚರಿಸುತ್ತಾ ಹಾಗೂ ಹುರಿದುಂಬಿಸುತ್ತಾ ಬೆಳೆದುಕೊಂಡು ಬಂದಿರುವ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನ ಒಳ್ಳೆಯ ಕೆಲಸವಾಗಿದೆ. ಇದು ಹೀಗೆ ಮುಂದುವರೆಯಿಲಿ. 

ಕನ್ನಡ ಸಾಹಿತ್ಯದ ಇತಿಹಾಸ ತಿಳಿಸುವ ನಿಟ್ಟಿನಲ್ಲಿ ಕನ್ನಡಿಗರಿಗೆ ಪ್ರೇರಣೆ ನೀಡಬೇಕು ಮತ್ತು ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯಗಳನ್ನು ಜಾರಿಗೆ ತರಲು ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸ ಆಗಬೇಕು. ಅಂದಾಗ ಸಮ್ಮೇಳನ ಮಾಡಿದ್ದಕ್ಕೂ ಸಾರ್ಥಕ ಎನ್ನುವ ಅಭಿಪ್ರಾಯಗಳು ಕೇಳಿಬರುತ್ತಿದೆ.

ಸಚಿವ ಖರ್ಗೆ ಅಭಯಹಸ ತೃತೀಯ ಕನ್ನಡ ಸಾಹಿತ್ಯ ಸಮ್ಮೇಳನ ತಮ್ಮ ಶಾಸಕತ್ವದ ಅವಧಿಯಲ್ಲಿ ನಡೆಯುತ್ತಿರುವುದರಿಂದ ಸ್ವಾಗತ ಸಮಿತಿ ಅಧ್ಯಕ್ಷರಾದ ಪ್ರವಾಸೋದ್ಯಮ ಮತ್ತು ಐಟಿ-ಬಿಟಿ ಸಚಿವ ಪ್ರಿಯಾಂಕ ಖರ್ಗೆ ಮಾದರಿ ಸಮ್ಮೇಳನ ಆಗಬೇಕು. ಯಾವುದೇ ಅಡೆತಡೆಗಳು ಬಾರದಂತೆ ಅಚ್ಚುಕಟ್ಟಾಗಿ ಮಾಡಬೇಕು ಎಂಬ ಆಶಯದಿಂದ ಸಮ್ಮೇಳನದ ಯಶಸ್ವಿಗೆ ಎಲ್ಲ ರೀತಿಯ ಸಹಕಾರ ನೀಡಿದ್ದಾರೆ.

 ಇಲ್ಲಿಯವರೆಗೆ ಕನ್ನಡದ ಚಟುವಟಿಕೆಗಳು ಮಾಡುವುದಕ್ಕೆ ಚಿತ್ತಾಪುರ ಕೇಂದ್ರಸ್ಥಾನದಲ್ಲಿ ಸ್ಥಳಾವಕಾಶ ಇರಲಿಲ್ಲ. ಇದನ್ನು ಪರಿಗಣನೆಗೆ ತೆಗೆದುಕೊಂಡು ಕನ್ನಡ ಸಾಹಿತ್ಯಕ್ಕೆ ಉತ್ತೇಜನ ನೀಡುವುದಕ್ಕೆ ಕನ್ನಡ ಭವನ ನಿರ್ಮಾಣಕ್ಕೆ ಸ್ಥಳಾವಕಾಶ ಹಾಗೂ 50 ಲಕ್ಷ ರೂ. ಅನುದಾನ ಸಹ ನೀಡಿದ್ದಾರೆ. ಪ್ರಸ್ತುತ ತಾಂತ್ರಿಕ ಕಾರಣಗಳಿಂದ ಕಾಮಗಾರಿ ನನೆಗುದಿಯಲ್ಲಿದೆ

„ಎಂ.ಡಿ ಮಶಾಖ್‌

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.