ಕಮಲ ಕೋಟೆಗೆ ಕವಿದ ಕಾರ್ಮೋಡ
Team Udayavani, Mar 23, 2021, 6:09 PM IST
ವಾಡಿ : ಕಮ್ಯೂನಿಸ್ಟ್ರು ಮತ್ತು ಕಾಂಗ್ರೆಸ್ಸಿಗರ ಹಿಡಿತದಲ್ಲಿದ್ದ ಚಿತ್ತಾಪುರ ತಾಲೂಕಿನಲ್ಲಿ ಬಿಜೆಪಿ ಪಕ್ಷ ಕಟ್ಟಲು ಸಹಪಾಠಿ ಗೆಳೆಯರೊಂದಿಗೆ ಪಣ ತೊಟ್ಟು ಕಮಲ ಅರಳಿಸುವಲ್ಲಿ ಯಶಸ್ವಿಯಾಗಿದ್ದ ಮಾಜಿ ಶಾಸಕ ವಾಲ್ಮೀಕಿ ನಾಯಕ ಅಕಾಲಿಕ ನಿಧನದಿಂದ ಬಿಜೆಪಿ ಕೋಟೆಯ ಮೇಲೀಗ ಕಾಮೋಡವೇ ಕವಿದಂತಾಗಿದೆ. ಚಿತ್ತಾಪುರ ಕ್ಷೇತ್ರದ ಬಿಜೆಪಿಗೆ ಭದ್ರ ಬುನಾದಿಯಾಗಿದ್ದ ದಿ.ವಾಲ್ಮೀಕಿ ಅವರ ಸಾವು ಅವರ ಅಭಿಮಾನಿಗಳಿಗೆ ಮತ್ತು ಕಾರ್ಯಕರ್ತರಿಗೆ ದೊಡ್ಡ ಆಘಾತ ನೀಡಿದ್ದು, ನಮ್ಮ ಮುಂದಿನ ನಾಯಕನಾರು ಎಂಬ ಅನಾಥ ಪ್ರಜ್ಞೆ ಕಾಡುತ್ತಿದೆ. ಚಿತ್ತಾಪುರ ವಿಧಾನಸಭೆ ಮೀಸಲು ಮತಕ್ಷೇತ್ರದಲ್ಲಿ ಏಕೈಕ ಕಮಲ ನಾಯಕರಾಗಿ ಗುರುತಿಸಿಕೊಂಡಿದ್ದ ದಿ.ವಾಲ್ಮೀಕಿ ನಾಯಕ, ಕಾಂಗ್ರೆಸ್ನ ಹಿರಿಯ ನಾಯಕ ಡಾ|ಮಲ್ಲಿಕಾರ್ಜುನ ಖರ್ಗೆ ಅವರ ಎದುರು ಸ್ಪರ್ಧಿಸಿ ಕಡಿಮೆ ಮತಗಳಿಂದ ಸೋತಿದ್ದರಾದರೂ ರಾಜ್ಯದ ಗಮನ ಸೆಳೆದಿದ್ದರು.
ನಂತರ ರಾಜ್ಯದಲ್ಲಿ ಬೀಸಿದ ಯಡಿಯೂರಪ್ಪ ಗಾಳಿಯಲ್ಲಿ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ ಅವರನ್ನು ಸೋಲಿಸಿ ಉಪ ಚುನಾವಣೆ ಗೆದ್ದರು. ರಾಜಕೀಯ ಏಳುಬೀಳಿನ ಜತೆಗೆ ಪಕ್ಷವನ್ನು ಎತ್ತರಕ್ಕೆ ಬೆಳೆಸುವ ಮೂಲಕ ಹಳ್ಳಿ ಜನರ ಹೃದಯ ಗೆದ್ದು ಸಮರ್ಥ ನಾಯಕರಾಗಿ ವಾಲ್ಮೀಕಿ ಹೊರ ಹೊಮ್ಮಿದ್ದರು. ಮತ್ತೂಮ್ಮೆ ಶಾಸಕರಾಗುವ ಕನಸು ಹೊತ್ತಿದ್ದರು. ಎದೆಯಲ್ಲಿ ನಾಲ್ಕು ಸ್ಟಂಟ್ ಮತ್ತು ಎರಡೂ ಮೊಣಕಾಲು ಶಸ್ತ್ರ ಚಿಕಿತ್ಸೆಯ ನಂತರವೂ ಅದೇ ಹುಮ್ಮಸ್ಸಿನಿಂದ ಕ್ಷೇತ್ರದ ಸುತ್ತಾಟದಲ್ಲಿರುವಾಗಲೇ ವಿಧಿ ಯ ತೆಕ್ಕೆಗೆ ಜಾರಿದರು. ಮರಳಿ ಬಾರದ ಲೋಕಕ್ಕೆ ತೆರಳಿದ ನಾಯಕನನ್ನು ನೆನೆದು ಕ್ಷೇತ್ರದ ಕಾರ್ಯಕರ್ತರು ಕಣ್ಣೀರಾಗಿದ್ದಾರೆ.
ಬಿಜೆಪಿ ಎಂದರೆ ವಾಲ್ಮೀಕಿ ನಾಯಕ, ವಾಲ್ಮೀಕಿ ನಾಯಕ ಎಂದರೆ ಬಿಜೆಪಿ ಎನ್ನುವಷ್ಟರ ಮಟ್ಟಿಗೆ ಗುರುತಿಸಿಕೊಂಡಿದ್ದ ಅವರು ಇನ್ನಿಲ್ಲವೆಂಬುದನ್ನು ಅರಗಿಸಿಕೊಳ್ಳಲಾಗದೆ ಸಾಮಾನ್ಯ ಸದಸ್ಯರ ಮನಸ್ಸು ಅರಣ್ಯ ರೋದನವಾಗಿದೆ. ವಾಲ್ಮೀಕಿ ನಾಯಕ ಅವರು ಬಿಜೆಪಿಯ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳನ್ನು ನಡು ಬೀದಿಯಲ್ಲಿ ಬಿಟ್ಟು ಹೋದಂತಾಗಿದೆ. ಚಿತ್ತಾಪುರ ಮೀಸಲು ಮತಕ್ಷೇತ್ರ ಒಡೆಯನಿಲ್ಲದ ಮನೆಯಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ