ಪೌರ ಕಾರ್ಮಿಕರ ದಿಢೀರ್‌ ಪ್ರತಿಭಟನೆ


Team Udayavani, Apr 13, 2021, 12:57 PM IST

Untitled-1

ಕಲಬುರಗಿ: ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ನೇರ ನೇಮಕಾತಿ ಸಂಬಂಧ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ್ದು, ಇದರಲ್ಲಿ ಹಾಲಿ 377 ದಿನಗೂಲಿ ಪೌರ ಕಾರ್ಮಿಕರನ್ನು ಪರಿಗಣಿಸದೇ ಇರುವುದನ್ನುಖಂಡಿಸಿ ಪೌರ ಕಾರ್ಮಿಕರ ಹೋರಾಟಕ್ರಿಯಾ ಸಮಿತಿ ನೇತೃತ್ವದಲ್ಲಿ ಸೋಮವಾರಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಪಾಲಿಕೆಯಲ್ಲಿ 377 ಪೌರ ಕಾರ್ಮಿಕರು ಗುತ್ತಿಗೆ ಆಧಾರದ ಮೇಲೆ ಕಳೆದ 26ವರ್ಷಗಳಿಂದ ದುಡಿಯುತ್ತಿದ್ದಾರೆ. ಇದರಲ್ಲಿ ಈಗಾಗಲೇ ಕೆಲವರು ಸೇವೆ ಸಂದರ್ಭದಲ್ಲೇ ಮರಣ ಹೊಂದಿದ್ದಾರೆ. ನೌಕರಿ ಕಾಯಂಗೊಳಿಸಬೇಕೆಂದು ನಿರಂತರವಾಗಿ ಹೋರಾಟ ಮಾಡಿಕೊಂಡು ಬರಲಾಗಿದೆ. ನೌಕರಿ ಕಾಯಂಗಾಗಿ ನ್ಯಾಯಾಲಯದ ಮೊರೆ ಹೋದಾಗ ಕಾರ್ಮಿಕರ ಪರವಾಗಿ ತೀರ್ಪು ನೀಡಿದೆ. ಆದರೆ, ಏ.6ರಂದುಪ್ರಕಟಿಸಿರುವ ನೇರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಈ 377ದಿನಗೂಲಿ ಪೌರ ಕಾರ್ಮಿಕರ ಹೆಸರೇ ಇಲ್ಲ ಎಂದು ಪ್ರತಿಭಟನಾನಿರತರು ಅಸಮಾಧಾನ ವ್ಯಕ್ತಪಡಿಸಿದರು.

ನೇರ ನೇಮಕಾತಿಗಾಗಿ 2017-18ರಲ್ಲಿ ಜಿಲ್ಲಾಧಿಕಾರಿಗಳು ಅರ್ಜಿ ಆಹ್ವಾನಿಸಿದ್ದರು.ಆಗ ಎಲ್ಲ ದಿನಗೂಲಿ ಪೌರ ಕಾರ್ಮಿಕರುಅರ್ಜಿ ಸಲ್ಲಿಸಿದ್ದರು. ನಂತರ ದಿನಗೂಲಿ ಪೌರ ಕಾರ್ಮಿಕರ ಸೇವೆ ಪರಿಗಣಿಸಿ, ಈಗಇರುವವರನ್ನೇ ಕಾಯಂ ನೇಮಕಾತಿ ಮಾಡಿಕೊಳ್ಳಲಾಗುವುದಾಗಿ ಅನೇಕಸಭೆಗಳಲ್ಲಿ ಸರ್ಕಾರ ಮತ್ತು ಜಿಲ್ಲಾಡಳಿತ ಭರವಸೆ ನೀಡಿತ್ತು. ಸರ್ಕಾರ ಎಲ್ಲ ಇಲಾಖೆಗಳಲ್ಲೂ ದಿನಗೂಲಿ ನೌಕರರನ್ನೇಕಾಯಂ ಮಾಡಿಕೊಂಡು ಬರಲಾಗಿದೆ.ಕಲಬುರಗಿ ಮಹಾಗರ ಪಾಲಿಕೆ ಮಾತ್ರಹಾಲಿ ನೌಕರರನ್ನು ಆಯ್ಕೆ ಪಟ್ಟಿಯಿಂದಬಿಟ್ಟು ಮೋಸ ಮಾಡಲು ಹೊರಟಿದೆ ಎಂದು ಆಕ್ರೋಶ ಹೊರ ಹಾಕಿದರು.

ತಾತ್ಕಾಲಿಕ ಆಯ್ಕೆ ಪಟ್ಟಿಗೆ ನೌಕರರ ಸೇವೆಪರಿಗಣಿಸಿದೇ ಇರುವುದು ನ್ಯಾಯಾಲಯದಆದೇಶದ ಉಲ್ಲಂಘನೆಯಾಗಿದೆ. ದಿನಗೂಲಿನೌಕರರನ್ನು ಹಕ್ಕನ್ನು ಕಸಿದುಕೊಳ್ಳುವಹುನ್ನಾರವಾಗಿದೆ. ಕಾಯಂ ನೇಮಕಾತಿಗೆಪರಿಗಣಿಸದೇ ಇರುವುದರಿಂದಬಡ ಕಾರ್ಮಿಕರ ಕುಟುಂಬಗಳು ಆಘಾತಕ್ಕೆ ಒಳಗಾಗಿವೆ. ಆದ್ದರಿಂದ ಈಗ ಪ್ರಕಟಿಸಿರುವ ಆಯ್ಕೆಯನ್ನುರದ್ದುಗೊಳಿಸಬೇಕು. ಹಾಲಿ 377 ದಿನಗೂಲಿ ಪೌರ ಕಾರ್ಮಿಕರನ್ನೊಳಗೊಂಡ ಹೊಸ ಪಟ್ಟಿಯನ್ನು ಪ್ರಕಟಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ ಹೋರಾಟ ನಡೆಸಲಾಗುತ್ತದೆ. ಇದನ್ನುಜಿಲ್ಲಾಧಿಕಾರಿಗಳೇ ಕಾರಣರಾಗಬೇಕಾಗುತ್ತೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಮುಖಂಡರಾದ ಅರ್ಜುನ ಭದ್ರೆ, ಮರೆಪ್ಪಹಳ್ಳಿ, ಮಲ್ಲೇಶಿ ಸಜ್ಜನ, ಸೂರ್ಯಕಾಂತ ನಿಂಬಾಳಕರ, ಸಂತೋಷ ಮೇಲ್ಮನಿ ಇದ್ದರು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.