ವಿಶ್ವಕರ್ಮರಿಗೆ ಕುಲಕಸುಬೆ ಕಾಯಕ
Team Udayavani, Sep 18, 2017, 10:17 AM IST
ಕಲಬುರಗಿ: ತಮ್ಮ ಕುಲಕಸುಬನ್ನೇ ಯಕವನ್ನಾಗಿಸಿಕೊಂಡು ಜೀವಿಸುವುದರೊಂದಿಗೆ ಸಮಾಜಕ್ಕೆ ಶ್ರಮ ಸಂಸ್ಕೃತಿ ಪರಿಚಯಿಸಿದ ಕೊಡುಗೆ ವಿಶ್ವಕರ್ಮ ಸಮಾಜಕ್ಕೆ ಸಲ್ಲಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಹೇಳಿದರು.
ರವಿವಾರ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ವಿಶ್ವಕರ್ಮ ಮಹೋತ್ಸವ ಸಮನ್ವಯ ಸಮಿತಿ, ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ಭಾಗದ ಖ್ಯಾತ ಕಲಾವಿದರಾಗಿದ್ದ ಶಿಲ್ಪಿ ಡಾ| ಎಸ್. ಎಂ.ಪಂಡಿತ ನೆನಪಿನಲ್ಲಿ ಇಲ್ಲಿನ ರಂಗಮಂದಿರಕ್ಕೆ ಅವರ ಹೆಸರಿಡಲಾಗಿದೆ. ಇದೀಗ ರಂಗಮಂದಿರ ಆವರಣದಲ್ಲಿ ಡಾ|ಎಸ್.ಎಂ. ಪಂಡಿತ ಅವರ ಪುತ್ಥಳಿ ನಿರ್ಮಿಸಬೇಕೆಂಬ ಬೇಡಿಕೆ ಇದೆ. ಅದನ್ನು ಆದಷ್ಟು ಶೀಘ್ರವಾಗಿ ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ವಿಶ್ವಕರ್ಮ ಮಹಾಸಭಾ ಜಿಲ್ಲಾಧ್ಯಕ್ಷ ಅಶೋಕ ಪೋದ್ದಾರ ಹರಸೂರ ಉಪನ್ಯಾಸ ನೀಡಿ, ಸರ್ವಧರ್ಮ ಸಮನ್ವಯ ಕ್ಷೇತ್ರವಾದ ಸುರಪುರ ತಾಲೂಕಿನ ತಿಂಥಣಿ ಮೌನೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಪ್ರಾಧಿಕಾರ ರಚಿಸಿ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಬೇಕು ಎಂದರು.
ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರ, ವಿಶ್ವಕರ್ಮ ಪೂಜಾ ಮಹೋತ್ಸವ
ಸಮನ್ವಯ ಸಮಿತಿ ಅಧ್ಯಕ್ಷ ಮೋಹನ ಎಸ್.ಪಂಡಿತ ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ
ತೆಗ್ಗೆಳ್ಳಿ, ಶಿಷ್ಠಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ್ ಹಾಗೂ ವಿಶ್ವಕರ್ಮ ಸಮಾಜದ ಗಣ್ಯರು ಹಾಜರಿದ್ದರು.
ಶಿವಾನಂದ ಅಣಜಗಿ ಸ್ವಾಗತಿಸಿದರು.
ಇದಕ್ಕೂ ಮುನ್ನ ನಗರದ ಸಂತ್ರಾಸವಾಡಿ ಕಾಳಿಕಾ ಮಂದಿರದಿಂದ ಸರಾಫ ಬಜಾರ, ಕಪಡಾ ಬಜಾರ, ಚೌಕ್
ಪೊಲೀಸ್ ಠಾಣೆ, ಸೂಪರ್ ಮಾರ್ಕೇಟ್, ಜಗತ್ ವೃತ್ತದಿಂದ ಡಾ| ಎಸ್.ಎಂ.ಪಂಡಿತ ರಂಗಮಂದಿರದ ವರೆಗೆ ವಿಶ್ವಕರ್ಮ ಭಾವಚಿತ್ರದ ಮತ್ತು ವಿವಿಧ ಜಾನಪದ ಕಲಾ ತಂಡಗಳ ಭವ್ಯ ಮೆರವಣಿಗೆ ಜರುಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು