ಶುದ್ದ ನೀರಿನ ಘಟಕ ಪುನಾರಂಭ
Team Udayavani, Oct 21, 2021, 11:08 AM IST
ಆಳಂದ: ಗ್ರಾಪಂ ಕೇಂದ್ರಸ್ಥಾನ ಕೊಡಲಹಂಗರಗಾ ಗ್ರಾಮದಲ್ಲಿ ಕಳೆದ ಮೂರು ವರ್ಷಗಳಿಂದಲೂ ಕೆಟ್ಟುನಿಂತಿದ್ದ ಶುದ್ಧ ಕುಡಿಯುವ ನೀರಿನ ಘಟಕದ ಪುನಾರಂಭಕ್ಕೆ ಗ್ರಾಪಂ ಅಧ್ಯಕ್ಷೆ ಕಮಲಾಬಾಯಿ ಆರ್. ಗುತ್ತೇದಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಗ್ರಾಮದಲ್ಲಿ ಜನರ ಆರೋಗ್ಯದ ಹಿತದೃಷ್ಟಿಯಿಂದ ಶುದ್ಧ ಕುಡಿಯುವ ನೀರಿನ ಅಗತ್ಯ ಮನಗಂಡು ತುಕ್ಕು ಹಿಡಿದಿದ್ದ ನೀರಿನ ಘಟಕ ದುರಸ್ತಿಗೊಳಿಸಿ ಪುನಾರಂಭಿಸಲಾಗಿದೆ. ಗ್ರಾಪಂಗೆ ಬರುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು ಗ್ರಾಮಸ್ಥರು ಹಾಗೂ ಸರ್ವ ಸದಸ್ಯರು ಸಹಕಾರ ನೀಡಿದರೆ ಯೋಜನೆಗಳನ್ನು ಜಾರಿಗೆ ತರಲು ಅನುಕೂಲವಾಗುತ್ತದೆ ಎಂದು ಹೇಳಿದರು.
ಗ್ರಾಪಂ ಅಭಿವೃದ್ಧಿ ಅಧಿಕಾರಿ ಮಂಜೂರ್ ಪಟೇಲ ಮಾತನಾಡಿ, ಕಲುಷಿತ ನೀರಿನಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಮನಗಂಡು ಗ್ರಾಪಂ ಆಡಳಿತ ಮಂಡಳಿ ಶುದ್ಧ ನೀರು ಸರಬರಾಜಿಗೆ ಕ್ರಮ ಕೈಗೊಂಡಿದೆ ಎಂದರು.
ತಾಪಂ ಮಾಜಿ ಸದಸ್ಯ ಚಂದುರಾವ್ ಕುಲಕರ್ಣಿ ಮಾತನಾಡಿ, ಅಭಿವೃದ್ಧಿ ಕಾರ್ಯಗಳನ್ನು ಪಕ್ಷಭೇದ ಮರೆತು ಮಾಡಬೇಕು ಎಂದು ಹೇಳಿದರು. ಗ್ರಾಪಂ ಸದಸ್ಯ ರಾಜು ಕಾಂದೆ, ಗ್ರಾಮದ ಗುಂಡಪ್ಪ ಜಮಾದಾರ, ಉಮೇಶ ಗುತ್ತೇದಾರ, ದತ್ತು ಬಾವಿಮನಿ, ಸುಧಾಕರ, ತುಕಾರಾಮ ಮೇಲಿನಕೇರಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ