ಕ್ಲಬ್‌ ಬ್ಯಾಂಕ್ವೆಟ್‌ ಹಾಲ್‌ ಉದ್ಘಾಟನೆ


Team Udayavani, Jul 1, 2018, 10:38 AM IST

gul-3.jpg

ಕಲಬುರಗಿ: ಮಹಾನಗರದ ಹೃದಯ ಭಾಗ ಸಾರ್ವಜನಿಕ ಉದ್ಯಾನವನದಲ್ಲಿರುವ ಗುಲಬರ್ಗಾ ಕ್ಲಬ್‌ ಕೇವಲ ಮನೋರಂಜನೆಗೆ ಸಿಮೀತವಾಗಿರದೆ ಆಟೋಟಗಳಿಗೂ ಹೆಚ್ಚಿನ ಒತ್ತು ನೀಡಲು ಮುಂದಾಗಬೇಕೆಂದು ಕ್ಲಬ್‌ ಜಿಲ್ಲಾ 
ಧಿಕಾರಿ ಆರ್‌. ವೆಂಕಟೇಶಕುಮಾರ ಕರೆ ನೀಡಿದರು.

ಮಹಾನಗರದ ಸಾರ್ವಜನಿಕ ಉದ್ಯಾನವನದಲ್ಲಿರುವ ಗುಲಬರ್ಗಾ ಕ್ಲಬ್‌ನ ನೂತನ ಬ್ಯಾಂಕ್ವೆಟ್‌ ಹಾಲ್‌ನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ಲಬ್‌ ಇತ್ತೀಚೆಯ ವರ್ಷಗಳಲ್ಲಿಸಾಕಷ್ಟು ಅಭಿವೃದ್ಧಿ ಹೊಂದುತ್ತಾ ಬಂದಿರುವುದು
ಸಂತಸದ ವಿಷಯ. ಸದಸ್ಯರಿಗೆ ಜಿಮ್‌, ಈಜು ಸೇರಿ ಇತರ ಆಟೋಟಗಳನ್ನು ಮೈಗೂಡಿಸಿಕೊಳ್ಳಲು ವಾತಾವರಣ
ಕಲ್ಪಿಸುವುದರ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲು ಕ್ರಮ ಕೈಗೊಳ್ಳಬೇಕೆಂದರು.

ಕ್ಲಬ್‌ನ ಸಮಯವನ್ನು ಕಟ್ಟುನಿಟ್ಟಾಗಿ ಪರಿಪಾಲನೆ ಮಾಡಬೇಕು. ಏಕೆಂದರೆ ಕ್ಲಬ್‌ನ ಅಧ್ಯಕ್ಷರು ತಾವೇ
ಆಗಿರುವುದರಿಂದ ನಿಯಮ ಪಾಲನೆ ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಕ್ಲಬ್‌ನ ಸದಸ್ಯರಿಗೆ ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಮಹಾಪೌರ ಶರಣಕುಮಾರ ಮೋದಿ, ಕ್ಲಬ್‌ನ ರಸ್ತೆ ಕೆಟ್ಟು ಹೋಗಿದ್ದರಿಂದ ಎಸ್‌ ಎಫ್‌ಸಿ ಅನುದಾನದಲ್ಲಿ 5 ಲಕ್ಷ ರೂ. ತೆಗೆದಿಡಲಾಗುವುದು ಎಂದು ಪ್ರಕಟಿಸಿದರು. ಕ್ಲಬ್‌ನ ಜಂಟಿ ಕಾರ್ಯದರ್ಶಿ ಮಲ್ಲಿನಾಥ ಗುಡೇದ್‌ ಮಾತನಾಡಿ, ಕ್ಲಬ್‌ನ ಸದಸ್ಯರ ಸಣ್ಣ-ಸಣ್ಣ ಕಾರ್ಯಕ್ರಮಗಳಿಗೆ ಅನುಕೂಲವಾಗಲೆಂದು ಸುಸಜ್ಜಿತ
ಬ್ಯಾಂಕ್ವೆಟ್‌ ಹಾಲ್‌ ನಿರ್ಮಿಸಲಾಗಿದೆ.

ಮುಂದಿನ ದಿನಗಳಲ್ಲಿ ಇನ್ನಷ್ಟು ಯೋಜನೆಗಳನ್ನು ಹೊಂದಲಾಗಿದೆ ಎಂದು ಹೇಳಿದರು. ಕ್ಲಬ್‌ನ ಕಾರ್ಯದರ್ಶಿ ಸೋಮನಾಥ ನಿಗ್ಗುಡಗಿ ಜಿಲ್ಲಾಧಿಕಾರಿಗಳನ್ನು ಸನ್ಮಾನಿಸಿದರು. ಕ್ಲಬ್‌ನ ಆಡಳಿತ ಮಂಡಳಿ ಸದಸ್ಯರಾದ
ಡಾ| ಲಿಂಗರಾಜ ಲಾತೂರೆ, ಮಹಾಂತಗೌಡ ತುಪ್ಪದ, ಸಾತಪ್ಪ ಪಟ್ಟಣಕರ್‌, ಎಸ್‌.ಕೆ. ಹಿರೇಮಠ, ಪ್ರದೀಪಕುಮಾರ ಮನ್ಸೂರ. ಕೆ.ಎಸ್‌. ಸಕ್ರಿ ಹಾಗೂ ಕ್ಲಬ್‌ನ ಹಿರಿಯ ಸದಸ್ಯರು ಹಾಜರಿದ್ದರು. ನಿವೃತ್ತ ಪ್ರಾಧ್ಯಾಪಕ ಪ್ರೊ| ನರೇಂದ್ರ ಬಡಶೇಷಿ ನಿರೂಪಿಸಿದರು, ಸವಿತಾ ಪಾಟೀಲ ಪ್ರಾರ್ಥನಾಗೀತೆ ಹಾಡಿದರು, ಚಂದ್ರಶೇಖರ ಕಮಲಾಪುರ ಸ್ವಾಗತಿಸಿದರು, ಕ್ಲಬ್‌ನ ಖಜಾಂಚಿ ಶೇಖರ ಮೋದಿ ವಂದಿಸಿದರು. ನಂತರ ರಸಮಂಜರಿ ಕಾರ್ಯಕ್ರಮ ನಡೆಯಿತು.

ಟಾಪ್ ನ್ಯೂಸ್

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.