ಕ್ಷೇತ್ರದ ಸರ್ವಾಂಗೀಣ ಅಭಿವೃದಿಗೆ ಬದ್ದ
Team Udayavani, Jun 21, 2022, 10:37 AM IST
ಶಹಾಬಾದ: ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ನಾನು ಸದಾ ಕಾಲ ಬದ್ಧನಾಗಿರುತ್ತೆನೆ ಎಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹೇಳಿದರು.
ಲೋಕೋಪಯೋಗಿ ಇಲಾಖೆ ವತಿಯಿಂದ ಆಯೋಜಿಸಲಾದ 2019-20ನೇ ಸಾಲಿನ ನಬಾರ್ಡ ಆರ್ ಐಡಿಎಫ್-25 ಯೋಜನೆಯಡಿ ನಗರದ ಸರಕಾರಿ ಬಾಲಕ ಪ್ರೌಢಶಾಲೆಯಲ್ಲಿ ನಿರ್ಮಾಣಗೊಂಡ ಶಾಲಾ ಕೋಣೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಗರದ ಮಧ್ಯ ಭಾಗದ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಹಳೆಯ ಕಟ್ಟಡಗಳು ಬೀಳುವ ಹಂತದಲ್ಲಿದ್ದವು. ಇದರಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುತ್ತಿತ್ತು. ಅದನ್ನು ಅರಿತು ಸುಮಾರು 1.70 ಕೋಟಿ ರೂ. ಅನುದಾನದಲ್ಲಿ ಸುಮಾರು ಹತ್ತು ಕೋಣೆಗಳನ್ನು ನಿರ್ಮಾಣ ಮಾಡಿಕೊಡಲಾಗಿದೆ ಎಂದರು.
ನಗರಸಭೆ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ನರೇಂದ್ರ ವರ್ಮಾ, ಲೋಕೋಪಯೋಗಿ ಇಲಾಖೆ ಎಇ ಜಗನ್ನಾಥ, ಶಿಕ್ಷಣ ಸಂಯೋಜಕ ಶ್ರೀಧರ್, ಮುಖ್ಯಗುರು ಏಮನಾಥ ರಾಠೊಡ, ನಗರಸಭೆ ಸದಸ್ಯರಾದ ಡಾ| ಅಹ್ಮದ್ ಪಟೇಲ್, ಸಾಬೇರಾ ಬೇಗಂ, ಪಾರ್ವತಿ ಪವಾರ, ಜಗದೇವ ಸುಬೇದಾರ, ಸದಸ್ಯ ರವಿ ರಾಠೊಡ, ನಿಂಗಣ್ಣ ಹುಳಗೋಳಕರ್, ಸಿದ್ರಾಮ ಕುಸಾಳೆ, ಸದಾನಂದ ಕುಂಬಾರ, ಭೀಮಯ್ಯ ಗುತ್ತೆದಾರ, ರಾಜೇಶ ಯನಗುಂಟಿಕರ್, ಶರಣು ಪಗಲಾಪೂರ, ರಾಮು ಕುಸಾಳೆ, ಶಿವುಗೌಡ ಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ