ಪ್ರತಿ ಕ್ಷೇತ್ರದಲ್ಲೂ ಸ್ಪರ್ಧೆ ಅನಿವಾರ್ಯ


Team Udayavani, Sep 9, 2017, 9:56 AM IST

gul-2.jpg

ಕಲಬುರಗಿ: ತಾಂತ್ರಿಕ ಜಗತ್ತಿನಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಸ್ಪರ್ಧೆ ಇದೆ. ಅದಕ್ಕಾಗಿ ವಿದ್ಯಾರ್ಥಿಗಳಷ್ಟೆ ಅಲ್ಲ, ನೌಕರಸ್ಥರು ಹಾಗೂ ವಿವಿಧ ಸ್ತರದ ಜನರು ಸ್ಪರ್ಧೆಗಳಿಗೆ ಮಾನಸಿಕ ತಯಾರಿ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಗುವಿವಿ ಕುಲಪತಿ ಪ್ರೊ| ಎಸ್‌.ಆರ್‌.ನಿರಂಜನ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಸಾಯಿ ಪ್ರಿಸಿಡೆನ್ಸಿ ಪದವಿ ಕಾಲೇಜಿನ ಸ್ವಾಗತ ಹಾಗೂ ಪದವಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಉದ್ಯೋಗ ಕ್ಷೇತ್ರದಲ್ಲೂ ಸ್ಪರ್ಧೆ ಇದೆ. ಉತ್ತಮ ಅಂಕಗಳಷ್ಟೆ ಅಲ್ಲದೆ, ಉತ್ತಮ ದೈಹಿಕ, ಆಂಗಿಕ ಭಾಷೆ ಬೇಕಾಗುತ್ತದೆ.
ಅದನ್ನು ನೋಡಿ ಖಾಸಗಿ ವಲಯದಲ್ಲಿ ನೌಕರಿ ಗಿಟ್ಟಿಸಬಹುದು. ಅದರೊಂದಿಗೆ ಉನ್ನತ ಶಿಕ್ಷಣದಲ್ಲೂ ಸ್ಪರ್ಧೆ ಇದೆ. ಈಗಂತೂ ಪ್ರವೇಶಕ್ಕಾಗಿ ಸಿಇಟಿ, ಟಿಇಟಿ ಇತರೆ ಅರ್ಹತಾ ಪರೀಕ್ಷೆಗಳನ್ನು ಬರೆಯುವುದು ಕಡ್ಡಾಯವೂ ಹಾಗೂ ಅನಿವಾರ್ಯವೂ ಆಗಿದೆ ಎಂದರು.

ಆದ್ದರಿಂದ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿರುವ ಸಂದರ್ಭದಲ್ಲಿಯೇ ಕಷ್ಟ ಪಟ್ಟು ಓದಿಕೊಂಡು ಸ್ಪರ್ಧೆಗಳಿಗೆ ಅರ್ಹತೆಯನ್ನು ಹಾಗೂ ಸಾಮರ್ಥ್ಯವನ್ನು ಸಂಪಾದಿಸಿಕೊಳ್ಳಬೇಕು ಎಂದು ಹೇಳಿದರು.

ಶಾಸಕ ದತ್ತಾತ್ರೇಯ ಪಾಟೀಲ ಮಾತನಾಡಿ, ಹೈದ್ರಾಬಾದ ಕರ್ನಾಟಕ ಪ್ರದೇಶದಲ್ಲಿ ಗುಣಮಟ್ಟದ ಶಿಕ್ಷಣ ಸಿಗುವ
ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳು ಶ್ರಮ ವಹಿಸಬೇಕು ಎಂದರು. ಕಾಲೇಜು ಮಟ್ಟದಲ್ಲಿ ಪದವಿ ಪ್ರದಾನ ಕಾರ್ಯಕ್ರಮ
ಹಮ್ಮಿಕೊಂಡಿರುವುದು ಉತ್ತಮ ಬೆಳವಣಿಗೆಯಾಗಿದೆ. ಇಲ್ಲಿಂದ ಹೊರಬರುವ ಕಾಲೇಜು ವಿದ್ಯಾರ್ಥಿಗಳು ಸಮಾಜದಲ್ಲಿ
ಉತ್ತಮ ಪ್ರಜೆಗಳಾಗಿ ಬಾಳಿ ಎಂದು ಆಶಯ ವ್ಯಕ್ತಪಡಿಸಿದರು. 

ಗುವಿವಿ ಮೌಲ್ಯ ಮಾಪನ ಕುಲಸಚಿವ ಡಾ| ಸಿ.ಎಸ್‌. ಪಾಟೀಲ, ಜಿ.ಪಂ.ಸದಸ್ಯ ದಿಲೀಪ ಆರ್‌. ಪಾಟೀಲ,
ನಾರಾಯಣರಾವ ಕಾಳೆ, ಸಂಗಣ್ಣಗೌಡ ಪೋಲಿಸ್‌ ಪಾಟೀಲ್‌, ನಾಗೇಶ ಕೊಳ್ಳಿ, ಡಾ| ರಮೇಶ ಲಂಡನಕರ್‌, ಶಿವಶರಣಪ್ಪ ಸಿಗರಕಂಟಿ, ಡಾ.ಸಂಗಮೇಶ ಹಿರೇಮಠ, ಪ್ರಶಾಂತ ಅತನೂರ, ತೌಸೀಫ್‌ ಜಿ.ಕೆ., ಇದ್ದರು.

ಟಾಪ್ ನ್ಯೂಸ್

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.