ಐಐಎಸ್ಸಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗೆ 166ನೇ ಸ್ಥಾನ
Team Udayavani, Apr 7, 2017, 3:46 PM IST
ಕಲಬುರಗಿ: ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್ಸಿ) ಪ್ರವೇಶಕ್ಕಾಗಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕಲಬುರಗಿಯ ಪ್ರತಿಷ್ಠಿತ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಡಿಯಲ್ಲಿ ನಡೆಯುವ ಶರಣಬಸವೇಶ್ವರ ವಸತಿ ಕಾಲೇಜಿನ(ಎಸ್ ಬಿಆರ್) ವಿದ್ಯಾರ್ಥಿ ಮನೋಜ ರಾಠೊಡ ರಾಷ್ಟಿಯ ಮಟ್ಟದಲ್ಲಿ 166ನೇ ಸ್ಥಾನ ಗಳಿಸುವ ಮೂಲಕ ಹೈದ್ರಾಬಾದ ಕರ್ನಾಟಕ ಪ್ರದೇಶದಲ್ಲಿಯೇ ಹೊಸ ದಾಖಲೆ ಬರೆದಿದ್ದಾರೆ.
ಇದರೊಂದಿಗೆ ಎಸ್ಬಿಆರ್ ವಿದ್ಯಾರ್ಥಿ ಮನೋಜ ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಜಾರಿಗೆ ತಂದಿರುವ ಕಿಶೋರ ವೈಜ್ಞಾನಿಕ ಪ್ರೋತ್ಸಾಹಧನ ಯೋಜನೆ(ಡಿಎಸ್ಟಿ) (ಕೆವಿಪಿವೈ) ಅಡಿ ಸ್ಕಾಲರ್ಶಿಪ್ ಪಡೆಯಲು ಅರ್ಹತೆ ಪಡೆದುಕೊಂಡವರ ಪಟ್ಟಿಯಲ್ಲಿ ಸ್ಥಾನ ಪಡೆದಂತಾಗಿದೆ.
ಈ ವರೆಗೆ ನಡೆದ ಪ್ರವೇಶ ಪರೀಕ್ಷೆಯಲ್ಲಿಈ ಭಾಗದ ವಿದ್ಯಾರ್ಥಿಗಳು ರ್ಯಾಂಕಿಂಗ್ ಶ್ರೇಣಿ ಪಡೆದಿರಲಿಲ್ಲ. ಮಹತ್ವದ ಸ್ಕಾಲರ್ಶಿಪ್ ಯೋಜನೆಗೆ ಆಯ್ಕೆಯಾಗಿರುವ ಎಸ್ಬಿಆರ್ ವಿದ್ಯಾರ್ಥಿಗೆ ಮುಂದಿನ ದಿನಗಳಲ್ಲಿ ಐಐಎಸ್ಯಲ್ಲಿ ಉನ್ನತ ಶಿಕ್ಷಣದ ಕಲಿಕೆ ಜತೆ, ವಿಜ್ಞಾನ ಕ್ಷೇತ್ರದಲ್ಲಿ ಹೊಸ ಆವಿಷ್ಕಾರ, ಸಂಶೋಧನಾ ಕಾರ್ಯ ಕೈಗೊಳ್ಳಲು ಅವಕಾಶವಿರುತ್ತದೆ.
ಉನ್ನತ ಶಿಕ್ಷಣ ಹಾಗೂ ಪಿಎಚ್ಡಿ ಇನ್ನಿತರ ಕಲಿಕೆಗಾಗಿ 5 ವರ್ಷಗಳ ಕಾಲ ಮನೋಜ ರಾಠೊಡಗೆ ಪ್ರತಿ ತಿಂಗಳು ನಿಯಮಿತವಾಗಿ ವಿದ್ಯಾರ್ಥಿ ವೇತನ ನೀಡಲಿದೆ. ವಿದ್ಯಾರ್ಥಿ ವೇತನ ಆತನ ಸಂಪೂರ್ಣ ಕಲಿಕಾ ವೆಚ್ಚವನ್ನು ಭರಿಸುವಷ್ಟು ಕೆವಿಪಿವೈ ಯೋಜನೆಯಿಂದ ನೀಡಲಾಗುತ್ತದೆ. ಇಂತಹ ಮಹತ್ವದ ಯೋಜನೆಗೆ ಆಯ್ಕೆಯಾಗುವ ಮೂಲಕ ಹಿಂದುಳಿದ ಪ್ರದೇಶದಲ್ಲಿ ಪ್ರತಿಭೆಗೆ ಕೊರತೆಯಿಲ್ಲ.
ಅತ್ಯುನ್ನತ ದರ್ಜೆಯ ಶಿಕ್ಷಣವನ್ನು ಎಸ್ಬಿಆರ್ ನೀಡುತ್ತದೆ ಎಂಬುದನ್ನು ಐಐಎಸ್ಸಿಗೆ ಆಯ್ಕೆಯಾಗುವ ಮೂಲಕ ಸಾಬೀತುಪಡಿಸಿದ್ದಾನೆ ಎಂದು ಮಹಾದಾಸೋಹಿ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಗಳು ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪೂಜ್ಯ ಡಾ| ಶರಣಬಸವಪ್ಪ ಅಪ್ಪಾಜಿಯವರು ವಿದ್ಯಾರ್ಥಿ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ