ವಾಸವದತಾ ವಿರುದ್ಧ ದೂರು


Team Udayavani, Feb 24, 2019, 8:31 AM IST

gul-5.jpg

ಸೇಡಂ: ಮನೆಗೊಂದು ನೌಕರಿ ಕೊಡುವುದಾಗಿ ಭರವಸೆ ನೀಡಿದ್ದ ವಾಸವದತ್ತಾ ಕಾರ್ಖಾನೆ ಮಾತಿಗೆ ತಪ್ಪಿದ ಕಾರಣ ಇಂಜೆಪಲ್ಲಿ ಗ್ರಾಮಸ್ಥರು ತಹಶೀಲ್ದಾರ್‌ ಸುಬ್ಬಣ್ಣ ಜಮಖಂಡಿ ಅವರಿಗೆ ದೂರು ಸಲ್ಲಿಸಿದ್ದಾರೆ.

2006-07ರಲ್ಲಿ ವಾಸವದತ್ತಾ ಸಿಮೆಂಟ್‌ ಕಾರ್ಖಾನೆಗೆ ಹೊಂದಿಕೊಂಡಿರುವ ಇಂಜೆಪಲ್ಲಿ ಗ್ರಾಮ ತೆರವುಗೊಳಿಸುವಂತೆ ಕಾರ್ಖಾನೆ ಆಡಳಿತ ಮಂಡಳಿ ಸೂಚಿಸಿತ್ತು. ಅಲ್ಲದೇ ಕುರಕುಂಟಾ ಕ್ರಾಸ್‌ ಬಳಿ ಹೊಸ ಮನೆ ನಿರ್ಮಿಸಿಕೊಡುವ ಮತ್ತು ಮನೆಗೊಂದು ನೌಕರಿ ನೀಡುವ ಭರವಸೆ ನೀಡಿತ್ತು. 

ಆದರೆ 170 ಮನೆಗಳ ಪೈಕಿ ಕೇವಲ 60 ಮನೆಗಳನ್ನು ನಿರ್ಮಿಸಿರುವ ಕಾರ್ಖಾನೆ ಮಂಡಳಿ, ಬಡ ಜನರ ಮೇಲೆ ದಬ್ಟಾಳಿಕೆ ನಡೆಸುತ್ತಿದೆ. ಅತ್ತ ಹೊಸ ಸೂರಿಗೂ ಸೇರಲಾಗದೆ, ಇತ್ತ ಇರುವ ಮನೆಗಳನ್ನು ರಕ್ಷಿಸಿಕೊಳ್ಳಲಾಗದೆ ಪರದಾಡುವಂತಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿನಿತ್ಯ ವಾಸವದತ್ತಾ ಸಿಮೆಂಟ್‌ ಕಾರ್ಖಾನೆ ನಡೆಸುವ ಬ್ಲಾಸ್ಟಿಂಗ್‌ನಿಂದ ಮನೆಗಳು ಬಿರುಕು ಬಿಡುತ್ತಿವೆ. ಮಕ್ಕಳು ಶಾಲೆಗಳಿಗೆ ತೆರಳಲು ಹೆದರುತ್ತಿದ್ದಾರೆ. ಮನೆಯಿಂದ ಹೊರಬರಬೇಕಾದರೆ ಜೀವ ಕೈಯಲ್ಲಿಟ್ಟುಕೊಂಡು ತಿರುಗಾಡುವ ಪರಿಸ್ಥಿತಿ ಇದೆ. ಅಲ್ಲದೇ ಸ್ಥಳೀಯ ಕನ್ನಡಿಗರಿಗೆ ನೌಕರಿ ನೀಡುವ ಬದಲು ಬೇರೆ ರಾಜ್ಯದವರಿಗೆ ನೌಕರಿ ನೀಡಿ, ಸ್ಥಳೀಯರಿಗೆ ಅನ್ಯಾಯ ಮಾಡುತ್ತಿದೆ ಎಂದು ದೂರಿದ್ದಾರೆ.

15 ದಿನಗಳ ಒಳಗಾಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಇಲ್ಲದಿದ್ದಲ್ಲಿ ಕಾರ್ಖಾನೆಗೆ ಬೀಗ ಜಡಿದು ಪ್ರತಿಭಟಿಸಲಾಗುವುದು. ನಿರಂತರ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ವೀರ ಕನ್ನಡಿಗರ ಸೇನೆ ಕಾರ್ಯಕರ್ತರು ಮತ್ತು ಇಂಜೇಪಲ್ಲಿ ಗ್ರಾಮಸ್ಥರು ಎಚ್ಚರಿಸಿದ್ದಾರೆ. 

ವೀರ ಕನ್ನಡಿಗರ ಸೇನೆ ರಾಜ್ಯಾಧ್ಯಕ್ಷ ಅಮೃತರಾವ್‌ ಪಾಟೀಲ ಸಿರನೂರ, ರಾಜ್ಯ ಉಪಾಧ್ಯಕ್ಷ ರವಿ ಒಂಟಿ, ಭೀಮಶಾ ಇಂಜಳ್ಳಿ, ಅರ್ಜುನ ಇಂಜಳ್ಳಿ, ಲಕ್ಷ್ಮಣ ತಳವಾರ, ಸಾಯಪ್ಪ ನಾಡೇಪಲ್ಲಿ, ಕಾಶಪ್ಪ ತಳವಾರ, ಗುಡಸಾಬ ಮುಲ್ಲಾ, ನಾಗರಾಜ ಸಜ್ಜನ್‌, ಶಿವಪ್ಪ ತಳವಾರ, ಅರ್ಜುನ ಇಂಜಳ್ಳಿ, ದ್ಯಾವಮ್ಮ ಇಂಜಳ್ಳಿ, ನರಸಮ್ಮ ಆಡಕಿ, ರಾಜಮ್ಮ ಇಂಜಳ್ಳಿ, ಸಿದ್ರಾಮಪ್ಪ ಪಾಟೀಲ, ಹಣಮಂತ ಇಂಜಳ್ಳಿ, ವಿಠ್ಠಲ ಇಂಜಳ್ಳಿ, ಸುಧೀರ ಇಂಜಳ್ಳಿ, ಅಶೋಕ ಇಂಜಳ್ಳಿ, ಇಮಾಮಸಾಬ, ಸುಕ್ರಮಿಯಾ, ಶಾಮಪ್ಪ, ಪರಶುರಾಮ, ಬಸವಣ್ಣ ದಿಗ್ಗಾವಿ, ನಾಗಪ್ಪ ರಂಜೋಳ, ಚಂದಪ್ಪ, ಶರಣಪ್ಪ, ಅಂಜಲಮ್ಮ, ಕಲ್ಲಪ್ಪ ಮಾಡೆನೂರ, ದೇವಿಂದ್ರಪ್ಪ ಡೋಣಗಾಂವ್‌, ಭರತ ಭೂಷಣ, ರಿಷಿ ವಾಡೇಕರ್‌, ಶಿವಕುಮಾರ ದೇವರಮನಿ ಮತ್ತಿತರರು ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.