28ರೊಳಗೆ ಶೌಚಾಲಯ ಗುಂಡಿ ತೋಡುವ ಕೆಲಸ ಪೂರ್ಣಗೊಳಿಸಿ


Team Udayavani, Aug 21, 2018, 12:39 PM IST

gyk-3.jpg

ಕಲಬುರಗಿ: ಜಿಲ್ಲೆಯಲ್ಲಿ ನಿರ್ಮಿಸಲು ಬಾಕಿಯಿರುವ ಒಟ್ಟು 37,281 ಶೌಚಾಲಯಗಳನ್ನು ಸೆ. 15ರೊಳಗಾಗಿ ಪೂರ್ಣಗೊಳಿಸುವ ಗುರಿಯೊಂದಿಗೆ ಎಲ್ಲ ಶೌಚಾಲಯಗಳ ಗುಂಡಿ ತೋಡುವ ಕಾರ್ಯ ಆ. 28ರೊಳಗಾಗಿ ಪೂರ್ಣಗೊಳಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಸೂಚಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ನಡೆದ ಸ್ವಚ್ಚ ಭಾರತ ಮಿಷನ್‌ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಪಂ ಅಧ್ಯಕ್ಷರು, ಸದಸ್ಯರು, ಶಿಕ್ಷಕರು, ವೈದ್ಯರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನೊಳಗೊಂಡು ಎಲ್ಲರೂ ಶೌಚಾಲಯ ನಿರ್ಮಿಸುವ ಕಾರ್ಯಕ್ಕೆ ಸಹಕರಿಸುವಂತೆ ಮನವಿ ಮಾಡಿದರು.

ಆಳಂದ ಮತ್ತು ಜೇವರ್ಗಿ ತಾಲೂಕುಗಳಲ್ಲಿ ಶೌಚಾಲಯ ನಿರ್ಮಾಣದ ಪ್ರಗತಿ ಆಮೆ ಗತಿಯಲ್ಲಿ ಸಾಗುತ್ತಿದೆ. ಜೇವರ್ಗಿ
ತಾಲೂಕಿನಲ್ಲಿ ಒಟ್ಟು 35055 ಶೌಚಾಲಯಗಳ ಪೈಕಿ 27323 ಶೌಚಾಲಯ ನಿರ್ಮಿಸಲಾಗಿದ್ದು, ಇನ್ನು 7732 ಶೌಚಾಲಯ
ನಿರ್ಮಿಸಬೇಕಾಗಿದೆ. ಆಳಂದದಲ್ಲಿ 41009 ಶೌಚಾಲಯಗಳ ಪೈಕಿ 28883 ಶೌಚಾಲಯ ನಿರ್ಮಿಸಲಾಗಿದ್ದು, ಇನ್ನು 12126
ಶೌಚಾಲಯಗಳು ನಿರ್ಮಿಸಬೇಕಾಗಿದೆ. ಜಿಲ್ಲೆಯಲ್ಲಿ ನಿರ್ಮಿಸಲು ಬಾಕಿಯಿರುವ ಶೌಚಾಲಯಗಳ ಪೈಕಿ ಸುಮಾರು ಅರ್ಧದಷ್ಟು ಆಳಂದ ಮತ್ತು ಜೇವರ್ಗಿ ತಾಲೂಕಿನಲ್ಲಿವೆ. ಆಳಂದ ಮತ್ತು ಜೇವರ್ಗಿ ತಾಲೂಕಿನ ಎಲ್ಲ ಗ್ರಾಪಂಗಳ ಅಭಿವೃದ್ಧಿ ಅಧಿಕಾರಿಗಳು ಗ್ರಾಮಗಳಲ್ಲಿಯೇ ವಾಸ್ತವ್ಯವಿದ್ದು, ಶೌಚಾಲಯ ನಿರ್ಮಾಣ ಕಾಮಗಾರಿಗೆ ತೀವ್ರ ಗತಿ ನೀಡಬೇಕು ಎಂದು ಸೂಚಿಸಿದರು. ಕೆಂದರು.

ಆಳಂದ ತಾಲೂಕಿನಲ್ಲಿ ಒಟ್ಟು 47 ಗ್ರಾಪಂಗಳಿವೆ. ನರೋಣಾ, ಸುಂಟನೂರ, ಗೋಳಾ (ಬಿ), ತಡಕಲ, ಕಡಗಂಚಿ ಹಾಗೂ
ಅಳಂಗಾ ಗ್ರಾಪಂಗಳನ್ನು ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಿಸಲಾಗಿದೆ. 200ಕ್ಕಿಂತ ಕಡಿಮೆ ಶೌಚಾಲಯ ನಿರ್ಮಿಸಬೇಕಾಗಿರುವ 11 ಗ್ರಾಪಂಗಳು, 200-300 ಶೌಚಾಲಯ ನಿರ್ಮಿಸಬೇಕಾಗಿರುವ 11 ಗ್ರಾಪಂಗಳು, 300-400 ಶೌಚಾಲಯ ನಿರ್ಮಿಸಬೇಕಾಗಿರುವ 15 ಗ್ರಾಪಂಗಳಿವೆ. ಈ ಎಲ್ಲ ಗ್ರಾಮ ಪಂಚಾಯಿತಿಗಳು ಸೆ. 15ರೊಳಗಾಗಿ ಬಯಲು ಬಹಿರ್ದೆಸೆ ಮುಕ್ತವಾಗಬೇಕು ಎಂದು ಸೂಚಿಸಿದರು.

ಕೆರೆ ಅಂಬಲಗಾ, ಕೊರಳ್ಳಿ, ಬಡಸಾವಳಗಿ ಹಾಗೂ ಸಾವಳೇಶ್ವರ ಗ್ರಾಪಂಗಳಲ್ಲಿ 400ಕ್ಕಿಂತ ಹೆಚ್ಚು ಶೌಚಾಲಯಗಳು ನಿರ್ಮಿಸಬೇಕಾಗಿದೆ. ಈ ಗ್ರಾಪಂಗಳಲ್ಲಿ ಆ. 30ರೊಳಗಾಗಿ ಅರ್ಧಕ್ಕಿಂತ ಹೆಚ್ಚು ಶೌಚಾಲಯ ನಿರ್ಮಿಸುವ ನಿಟ್ಟಿನಲ್ಲಿ ಪ್ರತಿದಿನ ಗುರಿ ಹೊಂದಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು. 

ಜೇವರ್ಗಿ ತಾಲೂಕಿನಲ್ಲಿ ಒಟ್ಟು 42 ಗ್ರಾಪಂಗಳಿವೆ. ಈಗಾಗಲೇ ಹರವಾಳ ಮತ್ತು ಬಳೂಂಡಗಿ ಗ್ರಾಪಂಗಳನ್ನು ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಿಸಲಾಗಿದೆ. 200ಕ್ಕಿಂತ ಕಡಿಮೆ ಶೌಚಾಲಯ ನಿರ್ಮಿಸಬೇಕಾಗಿರುವ 21 ಗ್ರಾಪಂಗಳು, 200-300 ಶೌಚಾಲಯ ನಿರ್ಮಿಸಬೇಕಾಗಿರುವ 7 ಗ್ರಾಪಂಗಳು, 300-400 ಶೌಚಾಲಯ ನಿರ್ಮಿಸಬೇಕಾಗಿರುವ 9 ಗ್ರಾಪಂಗಳು ಹಾಗೂ ಹಿಪ್ಪರಗಾ ಎಸ್‌.ಎನ್‌., ಯಾಳವಾರ, ಕುರಲಗೇರಾ, ಗಂವಾರ ಗ್ರಾಪಂಗಳು 400ಕ್ಕಿಂತ ಹೆಚ್ಚು ಶೌಚಾಲಯ ನಿರ್ಮಿಸಬೇಕಾಗಿರುವುದರಿಂದ ಸೆ. 15ರೊಳಗಾಗಿ ಎಲ್ಲ ಶೌಚಾಲಯಗಳನ್ನು ಪೂರ್ಣಗೊಳಿಸಲು ಪ್ರತಿದಿನ ನಿರ್ಮಿಸಬೇಕಾಗಿರುವ ಶೌಚಾಲಯಗಳನ್ನು ಪರಿಗಣನೆಗೆ ತೆಗೆದುಕೊಂಡು ಶೌಚಾಲಯ ನಿರ್ಮಾಣದ ಪ್ರತಿದಿನದ ವರದಿ ಸಲ್ಲಿಸಲು ಸೂಚಿಸಿದರು.

ಜಿಪಂ ಮುಖ್ಯ ಯೋಜನಾಧಿಕಾರಿ ಪ್ರವೀಣ ಪ್ರಿಯಾ ಡೇವಿಡ್‌ ಹಾಗೂ ಕಲಬುರಗಿ ತಾಲೂಕಿನ ಎಲ್ಲ ಗ್ರಾಪಂಗಳ ಅಭಿವೃದ್ಧಿ
ಅಧಿಕಾರಿಗಳು ಹಾಗೂ ಅಧಿಕಾರಿಗಳ ಪ್ರಯತ್ನದಿಂದಾಗಿ ಕಲಬುರಗಿ ತಾಲೂಕನ್ನು ಬಯಲು ಬಹಿರ್ದೆಸೆ ಮುಕ್ತ ತಾಲೂಕು ಎಂದು ಘೋಷಿಸಲು ಸಾಧ್ಯವಾಗಿದೆ. ಆಳಂದ ತಾಲೂಕಿನಲ್ಲಿಯೂ ಸಹ ಶೌಚಾಲಯ ನಿರ್ಮಾಣಕ್ಕೆ ವೇಗ ನೀಡಲು ಪ್ರವೀಣ ಪ್ರಿಯಾ ಡೇವಿಡ್‌ ಅವರು ನೋಡಲ್‌ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಬೇಕು. ಆಳಂದ ಮತ್ತು ಜೇವರ್ಗಿ ತಾಲೂಕಿನಲ್ಲಿ ಗ್ರಾಪಂ ಅಭಿವೃದ್ಧಿ ಅಧಿ ಕಾರಿಗಳ ಕೊರತೆಯಿದ್ದಲ್ಲಿ ಕಲಬುರಗಿ ತಾಲೂಕಿನ ಪಿಡಿಒಗಳನ್ನು ಶೌಚಾಲಯ ನಿರ್ಮಾಣ ಕಾರ್ಯಕ್ಕೆ ನಿಯೋಜಿಸಲಾಗುವುದು ಎಂದು ಹೇಳಿದರು. ಆಳಂದ ಮತ್ತು ಜೇವರ್ಗಿ ತಾಲೂಕಿನ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.