ಷರತ್ತು ಬದ್ಧ ಸಾಲ ಮನ್ನಾಕ್ಕೆ ಆಕ್ರೋಶ


Team Udayavani, Jun 28, 2017, 3:20 PM IST

gul5.jpg

ಕಲಬುರಗಿ: ಸಹಕಾರಿ ಸಂಘಗಳಲ್ಲಿನ 50 ಸಾವಿರ ರೂ. ರೈತರ ಬೆಳೆ ಸಾಲ ಮನ್ನಾಕ್ಕೆ ರಾಜ್ಯ ಸರ್ಕಾರವು ವಿ ಧಿಸಿರುವ ಷರತ್ತುಗಳಿಂದಾಗಿ ಬಹುಭಾಗದ ರೈತರಿಗೆ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. 

ಆದ್ದರಿಂದ ಕೂಡಲೇ ಷರತ್ತುಗಳನ್ನು ಕೈಬಿಡಬೇಕೆಂದು ಸರ್ಕಾರದ ಮೇಲೆ ಒತ್ತಡ ತರಲು ರೈತ ಸಂಘಟನೆಗಳೆಲ್ಲ ಒಗ್ಗೂಡಿ ಹೋರಾಟ ರೂಪಿಸಬೇಕೆಂದು ಜಿಲ್ಲಾ ರೈತ ಹೋರಾಟ ಸಮಿತಿ ಅಧ್ಯಕ್ಷ, ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್‌ನ ಮಾಜಿ ಅಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ ಕರೆ ನೀಡಿದರು. 

ಸರ್ಕಾರ ವಿಧಿಸಿರುವ ಷರತ್ತುಗಳು ರೈತರ ಪಾಲಿಗೆ ಕರಾಳವಾಗಿವೆ. ಸಾಲ ಮನ್ನಾಕ್ಕೆ ಸುಮಾರು 14 ಷರತ್ತುಗಳನ್ನು ರಾಜ್ಯ ಸರ್ಕಾರವು ವಿಧಿಸಿದೆ. ಅದರಲ್ಲಿಯೂ ನಾಲ್ಕನೇ ಷರತ್ತು ಪರಿಗಣಿಸಿದರೆ, ಈ ಸಾಲಿನಲ್ಲಿ ರಾಜ್ಯ ಸರ್ಕಾರವು ರೈತರ ಸಾಲ ಮನ್ನಾ ಮಾಡಬಾರದು ಎನ್ನುವಂತಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಕ್ಷೇಪಿಸಿದರು.

50,000ರೂ.ಗಿಂತ ಹೆಚ್ಚಿಗೆ ಅಲ್ಪಾವಧಿ  ಕೃಷಿ ಸಾಲ ಪಡೆದು 2017ರ ಜೂನ್‌ 20ಕ್ಕೆ ಹೊರಬಾಕಿ ಇರುವ ಸಾಲವು ಚಾಲ್ತಿ ಇದ್ದಲ್ಲಿ ಸಾಲ ಪಡೆದ ರೈತರು ಗಡುವು ದಿನಾಂಕ ಅಥವಾ 2018ರ ಜೂನ್‌ 20 ಇದರಲ್ಲಿ ಯಾವುದು ಮೊದಲೋ ಆ ದಿನಾಂಕದೊಳಗೆ 50,000ರೂ.ಗಳಿಗಿಂತ ಹೆಚ್ಚಿನ ಅಸಲನ್ನು ಪಾವತಿಸಿದಲ್ಲಿ 50,000ರೂ. ಗಳ ಸಾಲ ಮನ್ನಾ ಮಾಡಲಾಗುವುದು. 

ಸಂಪೂರ್ಣ ಸಾಲದ ಮೇಲಿನ ಬಡ್ಡಿ ಸಹಾಯಧನವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂಬ ಷರತ್ತು ಹಾಕಿದ್ದು, ಮುಂದಿನ ವರ್ಷ ಸಾಲ ಮನ್ನಾದ ನಿರ್ಧಾರವನ್ನು ಅ ಧಿಕೃತವಾಗಿಯೇ ರಾಜ್ಯ ಸರ್ಕಾರವು ಆದೇಶದಲ್ಲಿ ಪ್ರಕಟಿಸಿದೆ. ಇದರಿಂದ ಮುಂದಿನ ವರ್ಷದವರೆಗೂ ರೈತರಿಗೆ ಯಾವುದೇ ಹೊಸ ಸಾಲವೂ ಸಿಗುವುದಿಲ್ಲ. 

ಇದು ರೈತರ ಪಾಲಿಗೆ ಕರಾಳವಾಗಿರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಮುಂದಿನ ವರ್ಷದಿಂದ ಜನವರಿಯಲ್ಲಿಯೇ ಬಜೆಟ್‌ ಮಂಡಿಸುವ ಘೋಷಣೆ ಮಾಡಿದ್ದಾರೆ. ಹಾಗೊಂದು ವೇಳೆ ಆದಲ್ಲಿ ರಾಜ್ಯ ಸರ್ಕಾರವು ಜನವರಿಯಲ್ಲಿಯೇ ರಾಜ್ಯ ಬಜೆಟ್‌ ಮಂಡಿಸಬೇಕಾಗುತ್ತದೆ.

ಸಾಲ ಮನ್ನಾದ ಷರತ್ತಿನಿಂದಾಗಿ ರೈತರ ಸಾಲ ಮತ್ತೆ ನನೆಗುದಿಗೆ ಬೀಳಲಿದೆ. ರೈತ ಸಂಘಟನೆಗಳು ಈಗಾಗಲೇ ಆದೇಶದ ವಿರುದ್ಧ ಹೋರಾಟ ಆರಂಭಿಸಬೇಕಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 75 ಲಕ್ಷ ರೈತರಿಗೆ ಸಾಲ ಮನ್ನಾದ ಪ್ರಯೋಜನ ಆಗುತ್ತದೆ ಎಂಬುದು ಸುಳ್ಳು. ಕೇವಲ 15 ಲಕ್ಷ ರೈತರಿಗೂ ಲಾಭ ಆಗುವುದಿಲ್ಲ.

ಆದ್ದರಿಂದ ಹೋರಾಟ ಅನಿವಾರ್ಯ ಎಂದು ವಿವರಣೆ ನೀಡಿದರು. ಎಚ್‌.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದಾಗ 2007ರಲ್ಲಿ ಬರದ ಹಿನ್ನೆಲೆಯಲ್ಲಿ ಸಹಕಾರ ಸಂಘಗಳಲ್ಲಿನ ರೈತರ 25000ರೂ.ಗಳವರೆಗಿನ ಸಾಲ ಮನ್ನಾ ಮಾಡಿ, 45 ದಿನಗಳೊಳಗೆ ಸಾಲ ಮನ್ನಾದ ಎರಡೂವರೆ ಸಾವಿರ ಕೋಟಿ ರೂ.ಗಳನ್ನು ಬ್ಯಾಂಕ್‌ಗೆ ಜಮಾ ಮಾಡಿದ್ದರು ಎಂದರು. 

ಈ ಹಿಂದೆ 2012ರಲ್ಲಿ ಜಗದೀಶ ಶೆಟ್ಟರ್‌ ಮುಖ್ಯಮಂತ್ರಿಗಳಾಗಿದ್ದಾಗ ಸಹಕಾರಿ ಸಂಘಗಳಲ್ಲಿನ ರೈತರ 25000ರೂ.ಗಳ ಸಾಲ ಮನ್ನಾ ಮಾಡಿದ್ದರು. ಆದಾಗ್ಯೂ, ಸಾಲದ ಹಣವನ್ನು ಬ್ಯಾಂಕಿಗೆ ಭರಿಸಲು ಒಂದು ವರ್ಷ ಕಾಲ ವಿಳಂಬ ಮಾಡಿದರು. ಇದರಿಂದಾಗಿ ಹೊಸ ಸಾಲ ಪಡೆಯಲು ಹಾಗೂ ಸಾಲದ ನವೀಕರಣಕ್ಕೆ ಹಲವಾರು ಷರತ್ತುಗಳನ್ನು ಹಾಕಿದ್ದರಿಂದ ರೈತರು ಕಂಗಾಲಾದರು.

ಈಗ ಸಿದ್ದರಾಮಯ್ಯ ಸರ್ಕಾರವು ಅದಕ್ಕಿಂತ ಕಠಿಣ ಷರತ್ತುಗಳನ್ನು ವಿಧಿಸಿದೆ. ಇಂತಹ ಯಾವುದೇ ಷರತ್ತುಗಳನ್ನು ಹಾಗೂ ನಿಬಂಧನೆಗಳನ್ನು ಹಾಕದೇ ವಿಳಂಬವಿಲ್ಲದೇ ರೈತರ ಸಾಲದ ಮನ್ನಾದ 8000 ಕೋಟಿ ರೂ. ಗಳನ್ನು ಬ್ಯಾಂಕ್‌ ಖಾತೆಗಳಿಗೆ ನೇರವಾಗಿ ಜಮಾ ಮಾಡಬೇಕು ಎಂದು ಆಗ್ರಹಿಸಿದರು.   

ಟಾಪ್ ನ್ಯೂಸ್

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.