ಪಾಲಿಕೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಖಾತ್ರಿ

ಉತ್ತರ-ದಕ್ಷಿಣ ಮತ ಕ್ಷೇತ್ರದಲ್ಲೂ "ಹಸ್ತ'ಕ್ಕೆ ಅಧಿಕ ಮತ |ಅಧಿಕಾರ ಹಿಡಿಯುವ ಬಿಜೆಪಿ ನಾಯಕರದ್ದು ತಿರುಕನ ಕನಸು

Team Udayavani, Sep 13, 2021, 3:27 PM IST

hggfh

ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆ ಅತಂತ್ರ ಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಳ್ಳಲಿದ್ದು, ಇದಕ್ಕೆ ಸ್ಥಳೀಯ ಜೆಡಿಎಸ್‌ ನಾಯಕರು ಒಲವು ಹೊಂದಿದ್ದಾರೆ. ಎರಡು ಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಬರುವುದು ಖಚಿತ ಎಂದು ಮಾಜಿ ಸಚಿವ, ಕಾಂಗ್ರೆಸ್‌ ಮುಖಂಡ ಡಾ| ಶರಣಪ್ರಕಾಶ ಪಾಟೀಲ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ರವಿವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸೈದ್ಧಾಂತಿಕ ನೆಲೆಗಟ್ಟಿನ ಮೇಲೆ ಎರಡು ಪಕ್ಷಗಳು ಹೊಂದಾಣಿಕೆ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ. ಈ ಬಗ್ಗೆ ಸ್ಥಳೀಯ ಜೆಡಿಎಸ್‌ ಮುಖಂಡರೊಂದಿಗೆ ಮಾತುಕತೆ ನಡೆಸಲಾಗಿದೆ. ರಾಜ್ಯದ ಮಟ್ಟದಲ್ಲಿ ಅಂತಿಮ ಮುದ್ರೆ ಮಾತ್ರ ಬೀಳಬೇಕಿದೆ ಎಂದರು.

ರಾಜ್ಯಸಭೆ ವಿರೋಧ ಪಕ್ಷದ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್‌ ರಾಷ್ಟ್ರೀಯ ವರಿಷ್ಠಎಚ್‌.ಡಿ.ದೇವೇಗೌಡ ಮಾತುಕತೆ ನಡೆಸುತ್ತಿದ್ದಾರೆ. ಕೆಪಿಪಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಚರ್ಚೆ ಮಾಡುತ್ತಿದ್ದಾರೆ. ಎರಡೂ ಪಕ್ಷಗಳ ಬಹುತೇಕ ಮೈತ್ರಿ ಖಚಿತವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್‌ನವರು ಮೇಯರ್‌ ಪಟ್ಟಕ್ಕೆ ಬೇಡಿಕೆ ವಿಚಾರವಾಗಿ ಪ್ರಕ್ರಿಯಿಸಿದ ಅವರು, ಮೈತ್ರಿ ಮಾತುಕತೆ ನಡೆಯುತ್ತಿದೆ. ಮೇಯರ್‌ ಅಥವಾ ಅಧಿಕಾರ ಹಂಚಿಕೆ ಮೈತ್ರಿ ನಂತರವೇ ಚರ್ಚೆಗೆ ಬರಲಿದೆ. ಹೀಗಾಗಿ ಇದು ಈಗ ಅಪ್ರಸ್ತುತ. ಜತೆಗೆ ಮೈತ್ರಿಗೆ ಸಿದ್ಧರಾಮಯ್ಯ ಹಾಗೂ ಎಚ್‌.ಡಿ.ಕುಮಾರಸ್ವಾಮಿ ನಡುವಿನ ಪ್ರತಿಷ್ಠೆಯೂ ಇದಕ್ಕೆ ಅಡ್ಡಿ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕಟೀಲಗೆ ಕನಿಷ್ಟ ಜ್ಞಾನವಿಲ್ಲ: ಬಿಜೆಪಿಯವರು ಭ್ರಷ್ಟಾಚಾರ ಮತ್ತು ಜನರಿಂದ ಲೂಟಿ ಮಾಡಿದ ಹಣವನ್ನು ಪಾಲಿಕೆ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳ ಗೆಲುವಿಗೆ ಖರ್ಚ ಮಾಡಿದ್ದಾರೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದ ಹುರುಪಿನಲ್ಲಿ ಪಾಲಿಕೆ ಚುನಾವಣೆಗೆ ಸಾಕಷ್ಟು ಹಣ ಹಾಕಿದ್ದಾರೆ. ಬಿಜೆಪಿಯಿಂದಲೇ ಪ್ರತಿಯೊಬ್ಬ ಅಭ್ಯರ್ಥಿಗೆ 25 ಲಕ್ಷ ರೂ. ಸುರಿಯಲಾಗಿದೆ. ಆದರೂ, ಬಿಜೆಪಿಯವರಿಗೆ ಕಾಂಗ್ರೆಸ್‌ಗಿಂತ ಹೆಚ್ಚಿನ ಸ್ಥಾನ ಗೆಲ್ಲಲು ಸಾಧ್ಯವಾಗಿಲ್ಲ. ಕಲಬುರಗಿ ಜನತೆ ಕಾಂಗ್ರೆಸ್‌ನ ಕೈ ಹಿಡಿದ್ದಾರೆ ಎಂದು ಹೇಳಿದರು.

ಪಾಲಿಕೆಯ 55 ಸ್ಥಾನಗಳ ಪೈಕಿ 27 ಸ್ಥಾನ ಗೆದ್ದು ಕಾಂಗ್ರೆಸ್‌ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕೇವಲ 23 ಸ್ಥಾನ ಗೆದ್ದ ಬಿಜೆಪಿಯವರು ತಮಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ ಕಟೀಲ್‌ ಕೂಡ ಪಾಲಿಕೆಯಲ್ಲಿ ತಮ್ಮದೇ ದೊಡ್ಡ ಪಕ್ಷ ಎಂದು ಹೇಳಿಕೆ ಕೊಟ್ಟಿರುವುದು, ಅವರಿಗೆ ಗಣಿತದ ಕನಿಷ್ಟ ಜ್ಞಾನವೂ ಇದ್ದಂತೆ ಇಲ್ಲ ಎಂದು ಟೀಕಿಸಿದರು.

ಕಳೆದ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ 23 ಸ್ಥಾನ ಗೆದ್ದಿತ್ತು. ಈ ಬಾರಿ ಹೆಚ್ಚುವರಿಯಾಗಿ ನಾಲ್ಕು ಸ್ಥಾನಗಳು ಬಂದಿವೆ. ಒಟ್ಟಾರೆ ಮತದಾನದಲ್ಲಿ ಕಾಂಗ್ರೆಸ್‌ಗೆ ಶೇ.38ರಷ್ಟು ಮತಗಳು ಬಂದಿವೆ. ಬಿಜೆಪಿಗೆ ಶೇ.31ರಷ್ಟು ಮಾತ್ರ ಮತ ಬಂದಿವೆ. ಉತ್ತರ ವಿಧಾನಸಭೆ ಕ್ಷೇತ್ರದಲ್ಲಿ 60 ಸಾವಿರ ಮತ ಕಾಂಗ್ರೆಸ್‌ ಪಡೆದರೆ, ಬಿಜೆಪಿ ಕೇವಲ 45 ಸಾವಿರ ಮತ ಗಳಿಸಿದೆ. ಬಿಜೆಪಿ ಶಾಸಕರಿರುವ ದಕ್ಷಿಣ ವಿಧಾನಸಭೆ ಕ್ಷೇತ್ರದಲ್ಲೂ ಕಾಂಗ್ರೆಸ್‌ ಮೇಲುಗೈ ಸಾಧಿಸಿದೆ. ಕಾಂಗ್ರೆಸ್‌ಗೆ 37 ಸಾವಿರ ಮತ ಬಂದಿದ್ದರೆ, ಬಿಜೆಪಿಗೆ 34 ಸಾವಿರ ಮತಗಳ ಮಾತ್ರ ಬಂದಿವೆ. ಆದರೆ, ಇದರ ಜ್ಞಾನವೂ ಇಲ್ಲದವರಂತೆ ಕಟೀಲ್‌ ಮತ್ತು ಬಿಜೆಪಿ ಮುಖಂಡರು ಮಾತನಾಡುತ್ತಿದ್ದಾರೆ ಎಂದರು. ಬಿಜೆಪಿಯವರು ವಾಮ ಮಾರ್ಗದಿಂದ ಅಧಿಕಾರ ಹಿಡಿಯಲು ಯತ್ನಿಸುತ್ತಿದ್ದಾರೆ. ಪಾಲಿಕೆಯಲ್ಲಿ ಅಧಿಕಾರಕ್ಕೆ ಬರುವುದುಬಿಜೆಪಿಯವರದ್ದು ತಿರುಕನಕನಸು.ಅವರು ಯಾವ ನೈತಿಕತೆ ಮೇಲೆ ಪಾಲಿಕೆ ಅಧಿಕಾರ ತಮ್ಮದೇ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಪ್ರಶ್ನಿಸಿದರು. ಸುದ್ದಿಗೋಷ್ಠಿಯಲ್ಲಿ ಶಾಸಕಿ ಖನೀಜ್‌ ಫಾತೀಮಾ, ಪಕ್ಷದ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಮಾಜಿ ಉಪಸಭಾಪತಿ ಬಿ.ಆರ್‌.ಪಾಟೀಲ, ಮಾಜಿ ಎಂಎಲ್‌ಸಿ ಅಲ್ಲಮಪ್ರಭು ಪಾಟೀಲ, ಮುಖಂಡರಾದ ಸುಭಾಷ ರಾಠೊಡ, ಶರಣಕುಮಾರ ಮೋದಿ ಇದ್ದರು.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVS

BJP ಅಸಮಾಧಾನ; ಶೀಘ್ರದಲ್ಲೇ ಆಂತರಿಕ ಭಾವನೆ ಹಂಚಿಕೊಳ್ಳುತ್ತೇನೆ!: ಸದಾನಂದ ಗೌಡ

Shakti Remark:ಸವಾಲು ಸ್ವೀಕರಿಸಿದ್ದೇನೆ-ರಾಹುಲ್‌ ಹೇಳಿಕೆಗೆ ಪ್ರಧಾನಿ ಮೋದಿ ತಿರುಗೇಟು

Shakti Remark:ಸವಾಲು ಸ್ವೀಕರಿಸಿದ್ದೇನೆ-ರಾಹುಲ್‌ ಹೇಳಿಕೆಗೆ ಪ್ರಧಾನಿ ಮೋದಿ ತಿರುಗೇಟು

Poll: ಪಶ್ಚಿಮಬಂಗಾಳ ಡಿಜಿಪಿ, 6 ರಾಜ್ಯಗಳ ಗೃಹ ಕಾರ್ಯದರ್ಶಿಗಳ ವರ್ಗಾವಣೆ; ಚುನಾವಣಾ ಆಯೋಗ

Poll: ಪಶ್ಚಿಮಬಂಗಾಳ ಡಿಜಿಪಿ, 6 ರಾಜ್ಯಗಳ ಗೃಹ ಕಾರ್ಯದರ್ಶಿಗಳ ವರ್ಗಾವಣೆ; ಚುನಾವಣಾ ಆಯೋಗ

ಹೆಡ್ ಲೈನ್ ಗಾಗಿ ಅಲ್ಲ, ಡೆಡ್ ಲೈನ್ ಗೆ ಕೆಲಸ ಮಾಡುವವ ನಾನು: ಪ್ರಧಾನಿ ಮೋದಿ

Loksabha; ಹೆಡ್ ಲೈನ್ ಗಾಗಿ ಅಲ್ಲ, ಡೆಡ್ ಲೈನ್ ಗೆ ಕೆಲಸ ಮಾಡುವವ ನಾನು: ಪ್ರಧಾನಿ ಮೋದಿ

Electoral Bonds ಕುರಿತ ಸುಪ್ರೀಂ ತೀರ್ಪನ್ನು ಗೌರವಿಸ್ತೇನೆ…ಆದರೆ… ಶಾ ಹೇಳಿದ್ದೇನು?

Electoral Bonds ಕುರಿತ ಸುಪ್ರೀಂ ತೀರ್ಪನ್ನು ಗೌರವಿಸ್ತೇನೆ…ಆದರೆ… ಶಾ ಹೇಳಿದ್ದೇನು?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.