ಪಿಎಸಿ ಸಭೆ ಮುಕ್ತಾಯ, 22ರಲ್ಲಿ ಮೂರು ಸದಸ್ಯರು ಮಾತ್ರ ಹಾಜರ್‌


Team Udayavani, Nov 29, 2018, 6:00 AM IST

181128kpn58.jpg

ಕಲಬುರಗಿ: ಹಲವು ನಿರೀಕ್ಷೆ ಹಾಗೂ ಕುತೂಹಲ ಮೂಡಿಸಿದ್ದ ರಾಜ್ಯದಲ್ಲೇ ಪ್ರಥಮವಾಗಿ ಕಲಬುರಗಿಯಲ್ಲಿ ಮಂಗಳವಾರ ಹಾಗೂ ಬುಧವಾರ ನಡೆದ ಎರಡು ದಿನಗಳ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ(ಪಿಎಸಿ)ಯ ಅಧ್ಯಯನ ಪ್ರವಾಸ ಮತ್ತು ಸಭೆಗೆ ನಿರೀಕ್ಷೆಯಷ್ಟು ಸಮಿತಿ ಸದಸ್ಯರು ಬಾರದೇ ಗೈರು ಹಾಜರಾಗುವ ಮೂಲಕ ಈ ಭಾಗದ ಜನತೆಯಲ್ಲಿ ನಿರಾಶೆಯನ್ನುಂಟು ಮಾಡಿದ್ದಾರೆ.

ಲೆಕ್ಕಪತ್ರ ಸಮಿತಿಯಲ್ಲಿ 15 ಸಂಸದರು ಹಾಗೂ ರಾಜ್ಯಸಭೆಯ ಏಳು ಸದಸ್ಯರು ಸೇರಿ ಒಟ್ಟಾರೆ 22 ಸದಸ್ಯರಿದ್ದರೂ ಅಧ್ಯಕ್ಷ
ಮಲ್ಲಿಕಾರ್ಜುನ ಖರ್ಗೆ ಸೇರಿ ಕೇವಲ ಮೂವರು ಮಾತ್ರ ಕಲಬುರಗಿಗೆ ಆಗಮಿಸಿದ್ದರು. ಪಿಎಸಿಯನ್ನು ಮಿನಿ ಸಂಸತ್‌ ಎಂದೇ ಕರೆಯಲಾಗುತ್ತದೆ.

ಸುಮಾರು 97 ವರ್ಷಗಳ ಇತಿಹಾಸ ಹೊಂದಿರುವ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸ್ವಾತಂತ್ರ್ಯಪೂರ್ವದಿಂದಲೂ ಅಂದರೆ 1921ರಿಂದ ಅಸ್ತಿತ್ವದಲ್ಲಿದೆ. ಕೇಂದ್ರದ ಹಣಕಾಸಿನ ವ್ಯವಹಾರಗಳನ್ನು ಪರಿಶೀಲಿಸುವಂತಹ ಉನ್ನತ ಅಧಿಕಾರವನ್ನು ಪಿಎಸಿ ಹೊಂದಿದ್ದು,ಸಮಿತಿಯ ಸಭೆಗಳು ಹೆಚ್ಚಾಗಿ ದೆಹಲಿಯಲ್ಲೇ ನಡೆಯುತ್ತವೆ. ಆಗಾಗ ಬೇರೆ,ಬೇರೆ ಸ್ಥಳಗಳಿಗೆ ಪ್ರವಾಸ ಕೈಗೊಂಡು ಸಭೆಯನ್ನು ನಡೆಸಿರುವ ಉದಾಹರಣೆಗಳು ಇವೆ. ಕಲಬುರಗಿ ಸಂಸದರು ಹಾಗೂ ಲೋಕಸಭೆಯಲ್ಲಿ ಕಾಂಗ್ರೆಸ್‌ ನಾಯಕರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ 2017-18ರಲ್ಲಿ ಮೊದಲ ಬಾರಿಗೆ ಪಿಎಸಿ ಅಧ್ಯಕ್ಷ ಸ್ಥಾನದ ಒಲಿದಿದ್ದು, 2018-19ನೇ ಸಾಲಿಗೂ ಅವರು ಅಧ್ಯಕ್ಷರಾಗಿ ಮುಂದುವರಿದ್ದಾರೆ.

ಹೀಗಾಗಿಯೇ 97 ವರ್ಷಗಳ ನಂತರ ಲೆಕ್ಕಪತ್ರ ಸಮಿತಿ ಸದಸ್ಯರನ್ನು ಅಧ್ಯಯನ ಪ್ರವಾಸ ಮತ್ತು ಸಭೆಗೆಂದು ಸಂಸದ ಖರ್ಗೆ ಕರ್ನಾಟಕಕ್ಕೆ ಪ್ರಥಮ ಬಾರಿಗೆ ಕರೆದುಕೊಂಡು ಬಂದಿದ್ದರು. ಅದರಲ್ಲೂ ವಿಶೇಷ ಕಾಳಜಿ ಮತ್ತು ಆಸಕ್ತಿ ವಹಿಸಿ ತಾವೇ ಪ್ರತಿನಿಧಿಸುವ ಕಲಬುರಗಿಗೆ ಸಮಿತಿಯನ್ನು ಕರೆಸಿ, ಇಲ್ಲಿ ಕೇಂದ್ರ ಸರ್ಕಾರ ಆರಂಭಿಸಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಇಎಸ್‌ ಐಸಿ ಮೆಡಿಕಲ್‌ ಹಬ್‌, ನೂತನ ವಿಮಾನ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಗಳ ಪರಿಶೀಲನೆ ಕೈಗೊಂಡು ಮತ್ತು ಪಿಎಸಿಗೆ ಸಂಬಂಧಪಟ್ಟ ಸಭೆಯನ್ನು ನಡೆಸಲಾಯಿತು.

12 ಸದಸ್ಯರು ಆಗಮಿಸುವ ನಿರೀಕ್ಷೆ ಇತ್ತು: ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರಾಗಿರುವುದಿಂದ ಅದರಲ್ಲೂ ರಾಜ್ಯಕ್ಕೆ ಮೊದಲ ಬಾರಿಗೆ ಸಮಿತಿ ಭೇಟಿ ನೀಡುತ್ತಿರುವುದರಿಂದ ಕನಿಷ್ಠ 12 ಸದಸ್ಯರು ಕಲಬುರಗಿಗೆ ಬರಲಿದ್ದಾರೆ ಎನ್ನಲಾಗಿತ್ತು. ಆದರೆ,ಎರಡು ದಿನಗಳ ಪಿಎಸಿಯ ಅಧ್ಯಯನ ಪ್ರವಾಸ ಹಾಗೂ ಸಭೆಗೆ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೇವಲ ಇಬ್ಬರೇ ಸದಸ್ಯರು ಆಗಮಿಸಿದ್ದು ನಿರಾಶೆ ಮೂಡಿಸಿತು. ರಾಜ್ಯದವರೇ ಆದ ಹಾವೇರಿ ಸಂಸದ ಶಿವಕುಮಾರ ಉದಾಸಿ ಮತ್ತು ರಾಜ್ಯಸಭಾ ಸದಸ್ಯ ರಾಜೀವ್‌ ಗೌಡ ಕೂಡ ಪಿಎಸಿ ಸದಸ್ಯರಾಗಿದ್ದಾರೆ. ಆದರೆ, ಇಬ್ಬರೂ ಮೊದಲ ದಿನ ಕಲಬುರಗಿಗೆ ಬಂದಿರಲಿಲ್ಲ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.