ಅಂಗನವಾಡಿಗೆ ಗ್ಯಾಸ್‌ ಸಂಪರ್ಕ ಕಲ್ಪಿಸಿ


Team Udayavani, Jul 1, 2018, 10:30 AM IST

gul-2.jpg

ಕಲಬುರಗಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿನ ಜಿಲ್ಲೆಯ ಹಲವು ಅಂಗನವಾಡಿ ಕೇಂದ್ರಗಳಿಗೆ ಗ್ಯಾಸ್‌ ಸಂಪರ್ಕವಿಲ್ಲದೆ ಒಲೆ ಮೇಲೆ ಅಡುಗೆ ಮಾಡುತ್ತಿರುವುದು ಆಯೋಗದ ಗಮನಕ್ಕೆ ಬಂದಿದೆ. ಕೂಡಲೆ ಜಿಲ್ಲೆಯ ಅಂತಹ 126 ಅಂಗನವಾಡಿ ಕೇಂದ್ರಗಳಿಗೆ ಗ್ಯಾಸ್‌ ಸಂಪರ್ಕ ಒದಗಿಸಿ ಒಂದು ತಿಂಗಳ ಒಳಗಾಗಿ ಆಯೋಗಕ್ಕೆ ವರದಿ ಸಲ್ಲಿಸಬೇಕೆಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಸದಸ್ಯ ವಿ.ಬಿ. ಪಾಟೀಲ ಸೂಚಿಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜನಿಸುವ ಪ್ರತಿಯೊಬ್ಬ ಮಗುವಿಗೂ ಪೌಷ್ಟಿಕ ಆಹಾರ ದೊರಕಬೇಕು ಮತ್ತು ಅನ್ನಭಾಗ್ಯ, ಬಿಸಿಯೂಟ, ಅಂಗನವಾಡಿಯಲ್ಲಿ ಮಾತೃಪೂರ್ಣದಂತಹ ಮಹತ್ವಪೂರ್ಣ ಯೋಜನೆಗಳಲ್ಲಿ ನೀಡಲಾಗುತ್ತಿರುವ ಆಹಾರ ಸಾಮಗ್ರಿಗಳು ಸಮರ್ಪಕವಾಗಿ ತಲುಪುತ್ತಿವೆಯೇ ಎಂಬುದನ್ನು ಪರಿಶೀಲಿಸುವುದು ಮತ್ತು ಈ ಸಂಬಂಧ ಆಗಾಗ ಸರ್ಕಾರಕ್ಕೆ ಸೂಕ್ತ ಸಲಹೆ ನೀಡುವುದು, ಅಪೌಷ್ಟಿಕತೆ ನಿವಾರಿಸುವುದೆ ಆಯೋಗದ ಮುಖ್ಯ ಉದ್ದೇಶವಾಗಿದೆ. ಅದರಂತೆ ಆಯೋಗವು ರಾಜ್ಯಾದ್ಯಂತ ಸಂಚರಿಸಿ ಯೋಜನೆಗಳಲ್ಲಿನ ಲೋಪದೋಷಗಳನ್ನು ಅಧಿಕಾರಿಗಳಿಂದ ಪಡೆದು ಸರ್ಕಾರಕ್ಕೆ ಸೂಕ್ತ ಶಿಫಾರಸು ಮಾಡಲಿದೆ ಎಂದರು.

ಆಯೋಗವು ಕಳೆದ ಮೂರು ದಿನಗಳಿಂದ ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರ. ಶಾಲೆ, ವಸತಿ ನಿಲಯಗಳಿಗೆ ಭೇಟಿ ನೀಡಿ ಅಲ್ಲಿನ ಹಲವು ಸಮಸ್ಯೆಗಳನ್ನು ಪತ್ತೆ ಹಚ್ಚಿದೆ. ಹಡಗಿಲ್‌ ಹಾರುತಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದಾಗ ಅಲ್ಲಿನ ಕಾರ್ಯಕರ್ತೆ ಗೈರಾಗಿದ್ದರು. ಅಲ್ಲದೆ ಕಾರ್ಯಕರ್ತೆ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಗ್ರಾಮಸ್ಥರು ದೂರು ನೀಡಿದ್ದು, ಕೂಡಲೆ ಅಂಗನವಾಡಿ ಕಾರ್ಯಕರ್ತೆಯನ್ನು ಅಮಾನತು ಮಾಡಬೇಕು ಎಂದರು.

ಕಲಬುರಗಿ ನಗರದ ಮೆಟ್ರಿಕ್‌ ನಂತರ ಮಹಿಳಾ ವಸತಿ ನಿಲಯಕ್ಕೆ ಭೇಟಿ ನೀಡಿದಾಗ 56 ವಿದ್ಯಾರ್ಥಿಗಳಿಗೆ ಕೇವಲ 30 ಬೆಡ್‌ಗಳನ್ನು ಪೂರೈಸಲಾಗಿದ್ದು ಗಮನಕ್ಕೆ ಬಂದಿದೆ. ಕೆಲ ವಿದ್ಯಾರ್ಥಿಗಳು ನೆಲದ ಮೇಲೆ ಮಲಗುತ್ತಿದ್ದಾರೆ. ಕೂಡಲೆ ಈ ಸಮಸ್ಯೆ ಬಗೆಹರಿಸುವಂತೆ ಸಮಾಜ ಕಲ್ಯಾಣ ಅಧಿಕಾರಿಗಳಿಗೆ ಸೂಚಿಸಿದರು. ಆಹಾರ ಗೋದಾಮುಗಳಲ್ಲಿ ಮಾನವ ಸೇವನೆಗೆ ಯೋಗ್ಯವಿಲ್ಲದ ಆಹಾರ ಧಾನ್ಯಗಳನ್ನು ವಿಲೇವಾರಿ ಅಥವಾ ನಾಶ ಮಾಡಲು ಸರ್ಕಾರದ ಆದೇಶವಿದ್ದು, ಅದರಂತೆ ಕ್ರಮ ಕೈಗೊಳ್ಳಬೇಕು ಎಂದು ಆಹಾರ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.

ಆಯೋಗದ ಸದಸ್ಯರಾದ ಎಚ್‌.ವಿ. ಶಿವಶಂಕರ, ಡಿ.ಜಿ. ಹಸಬಿ, ಬಿ.ಎ.ಮಹಮ್ಮದ ಅಲಿ, ಮಂಜುಳಾಬಾಯಿ ಮಾತನಾಡಿ, ಅಪೌಷ್ಟಿಕತೆ ನಿವಾರಣೆ ನಿಟ್ಟಿನಲ್ಲಿ ಆಯೋಗದ ಮಹತ್ವದ ಈ ಸಭೆಗೆ ಗೈರು ಹಾಜರಾದ ಜಿಪಂ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಮತ್ತು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಗೈರು ಹಾಜರಿಯನ್ನು ಅಧಿಕೃತವಾಗಿ ದಾಖಲಿಸಿಲಾಗುವುದು.

ಪಡಿತರ ಅಂಗಡಿ ಹಂತದಲ್ಲಿ ಆಹಾರ ಜಾಗೃತಿ ಸಭೆ ಮತ್ತು ಅಂಗನವಾಡಿ ಹಂತದಲ್ಲಿ ಬಾಲ ವಿಕಾಸ ಸಭೆ ಕಡ್ಡಾಯವಾಗಿ ನಡೆಸಬೇಕು. ಜಿಲ್ಲೆಯ ಎಲ್ಲ ಪಡಿತರ ಅಂಗಡಿಗಳಿಗೆ ಪಿ.ಒ.ಎಸ್‌ ಅಳವಡಿಸಬೇಕು ಮತ್ತು ಆಹಾರ ಅದಾಲತ್‌ ಕಡ್ಡಾಯವಾಗಿ ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಮಾತನಾಡಿ, ಆಹಾರ ಆಯೋಗವು ಕಳೆದ ಎರಡೂಮೂರು ದಿನಗಳಿಂದ ಜಿಲ್ಲೆಯಲ್ಲಿ ಪ್ರವಾಸ ಮಾಡಿ ಆಹಾರಕ್ಕೆ ಸಂಬಂಧಿಸಿದಂತೆ ಕೆಲ ನ್ಯೂನತೆಗಳನ್ನು ಸರಿಪಡಿಸುವಂತೆ ತಿಳಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಆಯೋಗದ ಎಲ್ಲ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಿದರು.

ಇನ್ನು ಮುಂದೆ ವಸತಿ ನಿಲಯಗಳಿಗೆ ತಾವು ಖುದ್ದಾಗಿ ಅನಿರೀಕ್ಷಿತವಾಗಿ ಭೇಟಿ ನೀಡುತ್ತೇನೆ ಎಂದ ಜಿಲ್ಲಾಧಿಕಾರಿಗಳು
ತಹಶೀಲ್ದಾರ್‌ರು ಮತ್ತು ಸಹಾಯಕ ಆಯುಕ್ತರು ಸಹ ಪ್ರತಿವಾರ 2-3 ವಸತಿ ನಿಲಯಗಳಿಗೆ ಭೇಟಿ ನೀಡುವಂತೆ ನಿರ್ದೇಶಿಸಿದರು. ಜಿಲ್ಲೆಯ 983 ಪಡಿತರ ಅಂಗಡಿಗಳ ಪೈಕಿ 983 ಅಂಗಡಿಯಲ್ಲಿ ಪಿ.ಓ.ಎಸ್‌. ಅಳವಡಿಸಿದ್ದು, ಪಿ.ಒ.ಎಸ್‌ ಅಳವಡಿಕೆಯಲ್ಲಿ ರಾಜ್ಯದಲ್ಲಿಯೆ ಕಲಬುರಗಿ ಜಿಲ್ಲೆ ಅಗ್ರಸ್ಥಾನದಲ್ಲಿದೆ ಎಂದರು.

ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ಅರುಣಕುಮಾರ ಸಂಗಾವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ರೆಡ್ಡಿ, ಸಮಾಜ ಕಲ್ಯಾಣ ಇಲಾಖೆ, ಅಳತೆ ಮತ್ತು ತೂಕ ಇಲಾಖೆ, ಕರ್ನಾಟಕ ರಾಜ್ಯ ಆಹಾರ ನಿಗಮ, ಆರೋಗ್ಯ ಇಲಾಖೆಯ ಅಧಿಕಾರಿಗಳು, ತಾಲೂಕಾ ಸಿ.ಡಿ.ಪಿ.ಒಗಳು ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

ಇಂದಿನಿಂದ ರಾಷ್ಟ್ರಿಯ ಪೌಷ್ಠಿಕಾಂಶ ಮಿಷನ್‌ ಜಾರಿ ಅಪೌಷ್ಟಿಕತೆ ನಿವಾರಣೆ ಕುರಿತು ನ್ಯಾ| ಎನ್‌.ಕೆ. ಪಾಟೀಲರ ಶಿಫಾರಸುಗಳನ್ನು ಅನುಷ್ಠಾನಗೊಳಿಸಬೇಕು. ಸಂಪೂರ್ಣಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಜು. 1 ರಿಂದ ರಾಷ್ಟ್ರೀಯ ಪೌಷ್ಟಿಕಾಂಶ ಮಿಷನ್‌ ಜಾರಿಯಾಗುತ್ತಿದ್ದು, ಅಧಿಕಾರಿಗಳು ಸನ್ನದ್ಧರಾಗಿರಬೇಕು. ಅಪೌಷ್ಟಿಕತೆ ನಿವಾರಣೆಯಲ್ಲಿ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪಾತ್ರ ಹೆಚ್ಚಾಗಿದೆ. ಆದರೆ ಈ ಎರಡು ಇಲಾಖೆಗಳು ಒಟ್ಟಾಗಿ ಸಮನ್ವಯತೆಯಿಂದ ಕೆಲಸ ನಿರ್ವಹಿಸದೆ ಇರುವುದು ದುರಾದೃಷ್ಟಕರ. ಪ್ರತಿ ಎರಡು
ತಿಂಗಳಿಗೊಮ್ಮೆ ವೈದ್ಯರು ಅಂಗನವಾಡಿಗೆ ತೆರಳಿ ಮಕ್ಕಳ ಆರೋಗ್ಯ ತಪಾಸಣೆ ಮಾಡಬೇಕೆಂದು ಆದೇಶವಿದ್ದರೂ ಪಾಲನೆಯಾಗುತ್ತಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳು ಗಮನಹರಿಸಬೇಕು.
ವಿ.ಬಿ. ಪಾಟೀಲ, ಕರ್ನಾಟಕ ರಾಜ್ಯ ಆಹಾರ ಆಯೋಗದ ಸದಸ್ಯ

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.