ಜಿಲ್ಲೆಯಲ್ಲಿ ನಿಲ್ಲದ ಜಿಟಿಜಿಟಿ ಮಳೆ

•ಬೆಣ್ಣೆತೋರಾ-ಅಮರ್ಜಾ-ಗಂಡೋರಿನಾಲಾ-ಚಂದ್ರಂಪಳ್ಳಿ ಜಲಾಶಯಕ್ಕೆ ಇನ್ನೂ ಬಂದಿಲ್ಲ ನೀರು

Team Udayavani, Aug 6, 2019, 12:01 PM IST

gb-tdy-3

ಕಲಬುರಗಿ: ಜಿಲ್ಲೆಯಲ್ಲಿ ಕಳೆದ ವಾರದಿಂದ ಜಿಟಿಜಿಟಿ ಮಳೆ ಸುರಿಯುತ್ತಿದೆಯಾದರೂ ಎಲ್ಲೂ ಹಳ್ಳ-ಕೊಳ್ಳಗಳು ಭರ್ತಿಯಾಗಿಲ್ಲ.

ಮಹಾರಾಷ್ಟ್ರದಲ್ಲಿ ಮಳೆ ಸುರಿಯುತ್ತಿರುವ ಪರಿಣಾಮ ಮಹಾರಾಷ್ಟ್ರದ ಪುಣೆ ಹತ್ತಿರದ ವೀರ ಜಲಾಶಯದಿಂದ ಹರಿಬಿಟ್ಟ ನೀರು ಜಿಲ್ಲೆಯ ಜೀವನಾಡಿ ಭೀಮಾ ನದಿಗೆ ಬಂದು ಭೀಮಾ ಏತ ಜಲಾಶಯದಲ್ಲಿ ಸಂಗ್ರಹವಾಗುತ್ತಿದೆ. ಹಾಗಾಗಿ ಜಲಾಶಯ ಈಗ ಅರ್ಧದಷ್ಟು ಭರ್ತಿಯಾಗಿದೆ.

ಸೊನ್ನ ಬಳಿಯ ಭೀಮಾ ಏತ ನೀರಾವರಿ ಜಲಾಶಯ ಭರ್ತಿಯಾದ ನಂತರ ಕೆಳಗಡೆ ಘತ್ತರಗಾ, ಗಾಣಗಾಪುರ, ಕಲ್ಲೂರ ಸೇತುವೆ ಮೂಲಕ ಕಲಬುರಗಿ ನಗರಕ್ಕೆ ಪೂರೈಕೆಯಾಗಿರುವ ಸರಡಗಿ ಸೇತುವೆಗೆ ಬರುತ್ತದೆ.

ಜಿಲ್ಲೆಯ ಬೆಣ್ಣೆತೋರಾ, ಅಮರ್ಜಾ, ಗಂಡೋರಿನಾಲಾ ಚಂದ್ರಂಪಳ್ಳಿ ಜಲಾಶಯಗಳಲ್ಲಿ ಇನ್ನೂ ನೀರು ಬಂದಿಲ್ಲ. ಈ ಎಲ್ಲ ಜಲಾಶಯಗಳು ಖಾಲಿಯಾಗಿಯೇ ಇವೆ. ವಾರದಿಂದ ಜಿಟಿಜಿಟಿ ಮಳೆ ಸುರಿಯುತ್ತಿದ್ದರೂ ಒಂದನಿ ನೀರಿನ ಪ್ರಮಾಣ ಹೆಚ್ಚಳವಾಗಿಲ್ಲ.

ಬೆಳೆಗಳಿಗೆ ಹೆಚ್ಚಿನ ಅನುಕೂಲ: ವಾರದಿಂದ ಸಣ್ಣ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆ ಬೆಳೆಗಳಿಗೆ ಉತ್ತಮವಾಗಿದೆ. ಅದರಲ್ಲೂ ತೊಗರಿಗೆ ಹೇಳಿ ಮಾಡಿಸಿದಂತಾಗಿದೆ. ಜಿಲ್ಲೆಯಲ್ಲಿ ಈ ವರ್ಷ ಹತ್ತಿ ಎರಡು ಲಕ್ಷ ಸಮೀಪ ಎಕರೆ ಭೂಮಿಯಲ್ಲಿ ಬಿತ್ತನೆಯಾಗಿದೆ. ಇದಕ್ಕೂ ಸಹ ಅನುಕೂಲವಾಗಿದೆ. ಆದರೆ ಸತತ ಮಳೆಯಿಂದ ಅಲ್ಪಾವಧಿ ಬೆಳೆಗಳಿಗೆ ಸ್ವಲ್ಪ ಪ್ರಮಾಣದಲ್ಲಿ ಧಕ್ಕೆಯಾಗುವ ಸಾಧ್ಯತೆಗಳಿವೆ.

ಸತತ ಮಳೆಯಿಂದ ಕಳೆ ಸಹ ಬೆಳೆಗಳಿಗಿಂತ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದ್ದು, ಬೆಳೆಗಳ ಬೆಳವಣಿಗೆಗೆ ಹೊಡೆತ ಬೀಳಲಾರಂಭಿಸಿದೆ. ಮುಂದಿನ ದಿನಗಳಲ್ಲಿ ಕಳೆ ತೆಗೆಯುವುದು ರೈತನಿಗೆ ದೊಡ್ಡ ಸವಾಲಾಗಿ ಪರಿಣಮಿಸಲಿದೆ. ದನಕರುಗಳಿಗೆ ಇನ್ನೂ ಪರಿಪೂರ್ಣ ಮೇವು ತಿನ್ನುವಷ್ಟು ಕಳೆ ಬೆಳೆದಿಲ್ಲ. ಹೀಗಾಗಿ ಜಿಟಿಜಿಟಿ ಮಳೆ ನಡುವೆ ದನಕರುಗಳಿಗೆ ಮೇವು ಹಾಕುವುದು ಕಷ್ಟವಾಗುತ್ತಿದೆ.

ಮಳೆ ವಿವರ: ಕಳೆದ ಆಗಸ್ಟ್‌ 1ರಿಂದ ಕಳೆದ ಐದು ದಿನಗಳಲ್ಲಿ ಜಿಲ್ಲಾದ್ಯಂತ 59 ಮಿಮೀ ಮಳೆಯಾಗಿದೆ. ಸರಾಸರಿ 26 ಮಿಮೀ ಮಳೆ ಪೈಕಿ ಇಷ್ಟೊಂದು ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಅಫ‌ಜಲಪುರ ತಾಲೂಕಿನಲ್ಲಿ ಕಳೆದ ಐದು ದಿನಗಳ ಕಾಲ ಒಟ್ಟಾರೆ 34 ಮಿಮೀ, ಆಳಂದ ತಾಲೂಕಿನಲ್ಲಿ 58 ಮಿಮೀ, ಚಿಂಚೋಳಿ ತಾಲೂಕಿನಲ್ಲಿ 105 ಮಿಮೀ, ಚಿತ್ತಾಪುರ ತಾಲೂಕಿನಲ್ಲಿ 62 ಮಿಮೀ, ಕಲಬುರಗಿ ತಾಲೂಕಿನಲ್ಲಿ 66 ಮಿಮೀ, ಜೇವರ್ಗಿ ತಾಲೂಕಿನಲ್ಲಿ ಕೇವಲ 30 ಮಿಮೀ ಮಳೆಯಾಗಿದೆ. ಸೇಡಂ ತಾಲೂಕಿನಲ್ಲಿ 62 ಮಿಮೀ ಮಳೆಯಾಗಿದೆ.

ಜೇವರ್ಗಿ ತಾಲೂಕಿನಲ್ಲಿ ಜೂನ್‌ 7ರ ಮೃಗಶಿರ ಮಳೆ ಆರಂಭದಿಂದಲೂ ಕೊರತೆವಿದೆ. ಜೂನ್‌ ತಿಂಗಳಲ್ಲಿ ಶೇ. 23ರಷ್ಟು ಹಾಗೂ ಜುಲೈ ತಿಂಗಳಲ್ಲಿ ಶೇ. 38ರಷ್ಟು ಮಳೆ ಕೊರತೆಯಾಗಿತ್ತು. ಈಗಲೂ ಜೇವರ್ಗಿ ತಾಲೂಕಿನ ಕೆಲ ಹಳ್ಳಿಗಳಲ್ಲಿ ಮಳೆ ಬೆಳೆಗೆ ತಕ್ಕ ಬಂದಿಲ್ಲ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.