ಎಲ್ಲ ವರ್ಗದವರಿಗೂ ಸಹಾಯ ಮುಂದುವರಿಕೆ
Team Udayavani, Jul 12, 2020, 1:35 PM IST
ಕಲಬುರಗಿ: ಕೋವಿಡ್ ನಿಯಂತ್ರಣ ಹಾಗೂ ಸಂಕಷ್ಟಕ್ಕೆ ಒಳಗಾಗಿರುವ ಎಲ್ಲ ವರ್ಗದವರಿಗೆ ಸಹಾಯ ಕಲ್ಪಿಸುವ ಕಾರ್ಯ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಮುಂದುವರಿದಿದೆ ಎಂದು ಸಂಸದ ಡಾ.ಉಮೇಶ ಜಾಧವ್ ತಿಳಿಸಿದ್ದಾರೆ.
ನಾಲ್ಕು ತಿಂಗಳಿನಿಂದ ಕೇಂದ್ರ ಹಾಗೂ ರಾಜ್ಯ ಸರಕಾರ ತಮ್ಮೊಂದಿಗೆ ಇದ್ದು, ಸಾಕಷ್ಟು ಸಹಾಯ ಮಾಡುತ್ತಿದೆ. ಹೀಗಾಗಿ ಯಾವುದೇ ಭಯಪಡುವ ಅಗತ್ಯವಿಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ಸಾರ್ವಜನಿಕರಿಗೆ ಅಭಯ ನೀಡಿದ್ದಾರೆ.
ಆತ್ಮನಿರ್ಭರ್ ಭಾರತ್ ಕಾರ್ಯಕ್ರಮದ ಮುಖಾಂತರ ಆರ್ಥಿಕ, ಮೂಲ ಸೌಕರ್ಯ, ಉತ್ಪಾದನೆ ಹಾಗೂ ಬೇಡಿಕೆಗಳನ್ನೊಳಗೊಂಡಂತೆ ದೇಶದ 130 ಕೋಟಿ ಜನತೆಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಮೋದಿ ಸರಕಾರ ಸ್ವಯಂ ಅವಲಂಬಿತ ಭಾರತ’ದ ನಿರ್ಮಾಣಕ್ಕೆ ಪಣತೊಟ್ಟಿದೆ. ಇದಲ್ಲದೇ ದೇಶದ ಎಲ್ಲಾ ರಾಜ್ಯಗಳಿಗೆ ಕೋವಿಡ್ ನ ಈ ಸಂಕಷ್ಟದ ಸಂದರ್ಭದಲ್ಲಿ ಹಣದ ಅಡಚಣೆ ನೀಗಿಸಲು ರಾಜ್ಯ ಸರ್ಕಾರಗಳ ಸಾಲದ ಮಿತಿಯನ್ನು ಶೇ 3 ರಿಂದ 5 ಕ್ಕೆ ಹೆಚ್ಚಿಸುವುದರ ಮುಖಾಂತರ ಹೆಚ್ಚುವರಿ ಪಡೆಯಲು ಅನುಕೂಲ ಮಾಡಿಕೊಟ್ಟಿದೆ. ದೇಶದ ಗಡಿಯಲ್ಲಿ ತಂಟೆ ಮಾಡುತ್ತಿರುವ ಚೀನಾಗೆ ಮೋದಿಜಿ ಸರಕಾರ ತಕ್ಕ ಪಾಠ ಕಲಿಸಿ ಜಾಗತಿಕ ಮಟ್ಟದಲ್ಲಿ ದೇಶದ ಘನತೆ ಹೆಚ್ಚಿಸಿದೆ.
ಹೀಗೆ ಕೇಂದ್ರ ಸರ್ಕಾರವು ದೇಶದ 130 ಕೋಟಿ ಜನತೆಯ ಸಂಕಷ್ಟದಲ್ಲಿ ಭಾಗಿಯಾಗಿದ್ದು, ಜತೆಗೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರವೂ ಕೂಡಾ ರೈತರಿಗೆ, ನೇಕಾರರಿಗೆ, ಮೀನುಗಾರರಿಗೆ, ಕಟ್ಟಡ ಕಾರ್ಮಿಕರಿಗೆ ಎಲ್ಲಾ ಕಾರ್ಮಿಕ ವರ್ಗದ ಬಂಧುಗಳಿಗೆ ಸಹಾಯ ಹಸ್ತವನ್ನು ನೀಡಿದ್ದು, ಜತೆಗೆ ರಾಜ್ಯದ ಎಲ್ಲ ಬಿಪಿಎಲ್ ಕಾರ್ಡ್ದಾರರಿಗೆ ಉಚಿತ ರೇಷನ್ ವಿತರಿಸಿದ್ದು ಕೂಡಾ ಐತಿಹಾಸಿಕ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ