ಮಕ್ಕಳ ಮಾರಾಟ ತಡೆಗೆ ಸಹಕಾರ ಅಗತ್ಯ
Team Udayavani, Oct 7, 2017, 11:21 AM IST
ಕಲಬುರಗಿ: ಈಚೆಗೆ ಗ್ರಾಮೀಣ ಪ್ರದೇಶದಲ್ಲಿ ಬಾಲ್ಯವಿವಾಹ ಮತ್ತು ಮಕ್ಕಳ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಸಮುದಾಯದ ಸಹಕಾರ ತುಂಬಾ ಅಗತ್ಯ ಎಂದು ಸಂಸ್ಕಾರ ಪ್ರತಿಷ್ಠಾನ ಸಂಸ್ಥೆ ನಿರ್ದೇಶಕ ವಿಠ್ಠಲ ಚಿಕಣಿ ಹೇಳಿದರು.
ಅಫಜಲಪುರ ತಾಲೂಕಿನ ಬಡದಾಳ ಗ್ರಾಮದಲ್ಲಿ ಚನ್ನಮಲ್ಲೇಶ್ವರ ಕಲ್ಯಾಣ ಮಂಟಪದಲ್ಲಿ ಸಂಸ್ಕಾರ ಪ್ರತಿಷ್ಠಾನ, ರೆಡ್ ಅಲರ್ಟ್ ಅಂಡ್ ಮೈ ಚಾಯ್ಸಿ ಫೌಂಡೇಶನ್ ಮತ್ತು ಚನ್ನಮಲ್ಲೇಶ್ವರ ಪ್ರೌಢಶಾಲೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಗ್ರಾಮ ಸುರಕ್ಷಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಗ್ರಾಮಸ್ಥರು ತಮ್ಮ ಸುತ್ತಲಿನಲ್ಲಿ ನಡೆಯುತ್ತಿರುವ ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಅವರ ವಿರುದ್ಧ ನಡೆಯುವ ಚಟುವಟಿಕೆಗಳ ಕುರಿತು ಎಚ್ಚರಿಕೆ ವಹಿಸಬೇಕು. ಮಕ್ಕಳು ಕೂಡ ತಮ್ಮ ವಿರುದ್ಧ ನಡೆಯುವ ಎಲ್ಲ ಬೆಳವಣಿಗೆ ಕುರಿತು ಪಾಲಕರಿಗೆ ತಿಳಿಸಬೇಕು ಎಂದು ಹೇಳಿದರು. ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿರುವುದನ್ನು ಯಾರೇ ಮಕ್ಕಳು ಗಮನಿಸಿದರೆ ಸುಮ್ಮನೆ ಮೌನವಾಗಿ ಕೂಡಬಾರದು.
ಅತ್ಯಾಚಾರ ಪ್ರಕರಣದಿಂದ ಎಚ್ಚರಿಕೆ ವಹಿಸಬೇಕು.
ಪರಿಚಯ ಇಲ್ಲದ ವ್ಯಕ್ತಿಗಳೊಂದಿಗೆ ಸಲುಗೆಯಿಂದ ಮಾತನಾಡುವುದು ಮತ್ತು ಸಂಪರ್ಕ ಸಾಧಿಸಿಕೊಳ್ಳುವುದು ತಪ್ಪು. ಇಂತಹ ಘಟನೆಗಳಿಂದ ಬಾಲಕಿಯರು ಎಚ್ಚರಿಕೆವಹಿಸಬೇಕು ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಡದಾಳ ಗ್ರಾಪಂ ಸದಸ್ಯ ಶಿವಾನಂದ ಗೊಬ್ಬೂರು, ಬಾಲಕಿಯರು ಹಾಗೂ ಚಿಕ್ಕ ಮಕ್ಕಳ ಮೇಲೆ ಈಗ ದೌರ್ಜನ್ಯ ಹೆಚ್ಚಾಗುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ನಾವು ಶಕ್ತಿ ಮೀರಿ ಪ್ರಯತ್ನಿಸಬೇಕು ಎಂದು ಹೇಳಿದರು ಅತಿಥಿಯಾಗಿ ಆಗಮಿಸಿದ್ದ ಶಂಕರ ಪಾಟೀಲ ಹಾಗೂ ಭೀಮರಾವ ಭಾರತಿ ಮಾತನಾಡಿ, ಸರಕಾರ ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಹಲವಾರು ಸಹಾಯವಾಣಿ ಆರಂಭಿಸಿದೆ. ನಮ್ಮ ಗ್ರಾಮೀಣ ಮಕ್ಕಳು ಇದರ ಪ್ರಯೋಜನ ಪಡೆಯಬೇಕಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಚನ್ನಮಲ್ಲೇಶ್ವರ ಪ್ರೌಢಶಾಲೆ ಶಿಕ್ಷಕ ಸಾಗರ ನೂಲಾ ಮಾತನಾಡಿದರು. ಚನ್ನಮಲ್ಲಪ್ಪ ಮಳಗಿ ಸೇರಿದಂತೆ ಇತರರು ಇದ್ದರು. ಸಿದ್ಧರಾಮ ಚಿಕ್ಕಳಗಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು