ಕೊರೊನಾಗೆ ಕಲಬುರಗಿ ವೃದ್ಧ ಸಾವು: ಕುಟುಂಬದ ನಾಲ್ವರ ರಕ್ತ, ಕಫದ ಮಾದರಿ ಪರೀಕ್ಷೆಗೆ ರವಾನೆ
Team Udayavani, Mar 13, 2020, 12:17 PM IST
ಕಲಬುರಗಿ: ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಸಂಪರ್ಕದಲ್ಲಿದ್ದ ಒಟ್ಟು 46 ಜನರ ನಿಗಾ ವಹಿಸಲಾಗುತ್ತಿದೆ. ಇದರಲ್ಲಿ 36 ಜನರು ಗಂಭೀರ ಪರಿಣಾಮ ( ಹೈ ರಿಸ್ಕ್) ಮತ್ತು 15 ಜನರನ್ನು ಕಡಿಮೆ ಪರಿಣಾಮ (ಲೋ ರಿಸ್ಕ್) ಎಂದು ವಿಂಗಡಿಸಲಾಗಿದೆ. ಇವರಲ್ಲಿ ನಾಲ್ವರ ರಕ್ತ, ಕಫದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಬೆಂಗಳೂರಿನ ಲ್ಯಾಬ್ ಗೆ ರವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈ ರಿಸ್ಕ್ ಎಂದು ಪರಿಗಣಿಸಿರುವ 31 ಜನರಿಗೆ ತಲಾ ಒಬ್ಬರಂತೆ ಅಧಿಕಾರಿಗಳನ್ನು ನೇಮಿಸಿ ನಿಗಾ ವಹಿಸಲಾಗುತ್ತಿದೆ. ಈ 31 ಜನರ ಸಂಪರ್ಕದಲ್ಲಿದ್ದ ಇತರ ವ್ಯಕ್ತಿಗಳ ಪತ್ತೆಗೆ ಆಯಾ ಅಧಿಕಾರಿಗಳು ಕ್ರಮ ವಹಿಸುತ್ತಿದ್ದಾರೆ. ಅಲ್ಲದೇ, ಮುನ್ನೆಚ್ಚರಿಕೆ ಕ್ರಮವಾಗಿ 31 ಜನರನ್ನೂ ಇಎಸ್ ಐ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿರುವ ವಿಶೇಷ ಘಟಕದಲ್ಲಿ ದಾಖಲಿಸಲಾಗುತ್ತೆ ಎಂದರು.
ರಕ್ತ, ಕಫದ ಮಾದರಿ ಸಂಗ್ರಹಿಸಿದ ನಾಲ್ಕರೂ ಮೃತನ ಕುಟುಂಬದವರೇ ಆಗಿದ್ದು, ಇದರಲ್ಲಿ ಮೂವರ ಗಂಟಲು ದ್ರವವನ್ನು ಪರೀಕ್ಷೆಗೆ ರವಾನಿಸಲಾಗಿದೆ. ಇಂದು ಸಂಜೆ ಅಥವಾ ನಾಳೆ ಪರೀಕ್ಷಾ ವರದಿ ಬರುವ ಸಾಧ್ಯತೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ