ಎಲ್ಲ ಕ್ಷೇತ್ರಗಳಲ್ಲೂ ಭ್ರಷ್ಟಾಚಾರ ತಾಂಡವ: ನ್ಯಾ| ನಾಗರಾಜ
Team Udayavani, Oct 8, 2018, 11:39 AM IST
ಕಲಬುರಗಿ: ನ್ಯಾಯಾಂಗ, ಸಾಹಿತ್ಯ ಸೇರಿದಂತೆ ಎಲ್ಲ ಕ್ಷೇತ್ರಗಳು ಸದ್ಯ ಕಲುಷಿತಗೊಂಡಿವೆ. ಭ್ರಷ್ಟಾಚಾರ, ಜಾತೀಯತೆ ಹಾಗೂ ಪಕ್ಷಪಾತ ತುಂಬಿಕೊಂಡಿದೆ ಎಂದು ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಅರಳಿ ನಾಗರಾಜ ಗಂಗಾವತಿ ವಿಷಾದ ವ್ಯಕ್ತಪಡಿಸಿರು.
ನಗರದ ಭವಾನಿ ನಗರದ ಬಬಲಾದ ಮಠದ ಶ್ರೀ ಗುರು ಚನ್ನವೀರೇಶ್ವರ ಮಂಟಪದಲ್ಲಿ ಸ್ನೇಹ ಸಂಗಮ ವಿವಿಧೋದ್ದೇಶ ಸೇವಾ ಸಂಘ ಹಮ್ಮಿಕೊಂಡಿದ್ದ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸಹಾಯಕ ಭದ್ರತಾ ನಿರೀಕ್ಷಕರಾಗಿ ಸೇವಾ ನಿವೃತ್ತಿ ಹೊಂದಿದ ಕುಪೇಂದ್ರ ಬಿರಾದಾರ ಮರಗುತ್ತಿ ಅವರ ಸನ್ಮಾನ ಸಮಾರಂಭದ ಅಂಗವಾಗಿ ರವಿವಾರ ವಿವಿಧ ಕ್ಷೇತ್ರಗಳ ಸಾಧಕರಿಗೆ “ಮೋಡದಲ್ಲಿ ಮಿನುಗುವ ನಕ್ಷತ್ರ’ ಪ್ರಶಸ್ತಿ ಪ್ರದಾನ ಹಾಗೂ ಗೌರವ ಸತ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು 30 ವರ್ಷಗಳ ಹಿಂದೆ ಕಠಿಣ ಕಾನೂನು ಜಾರಿಯಾಗಿದೆ. ಆದರೂ ಭ್ರಷ್ಟಾಚಾರ ಮಾತ್ರ ಹೆಚ್ಚಾಗುತ್ತಲೇ ಇದೆ. ಉನ್ನತ ಹುದ್ದೆಗೇರಿದ ನ್ಯಾಯಮೂರ್ತಿಗಳೂ ಭ್ರಷ್ಟಾಚಾರದ ಆರೋಪಕ್ಕೆ ಗುರಿಯಾಗುತ್ತಿದ್ದಾರೆ. ಇದೇ ರೀತಿ ಶಿಕ್ಷಣ, ಆರೋಗ್ಯ, ಸಾಹಿತ್ಯ ಮತ್ತು ಮಠ-ಮಾನ್ಯಗಳಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಶೇ.90ರಷ್ಟು ರಾಜಕಾರಣಿಗಳು ಭ್ರಷ್ಟರಿದ್ದಾರೆ ಎಂದು ಹೇಳಿದರು.
ಭ್ರಷ್ಟಾಚಾರವನ್ನು ಹೀಗೆ ಬಿಟ್ಟರೆ ಭವಿಷ್ಯತ್ ನಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ. ಆದ್ದರಿಂದ ಭ್ರಷ್ಟಾಚಾರ ವಿರುದ್ಧ ಯುವಕರು ಈಗಲೇ ಜಾಗೃತಗೊಳ್ಳಬೇಕು. ಆಯಸ್ಸು, ಆರೋಗ್ಯ ಮತ್ತು ಅವಕಾಶ ಬಳಸಿಕೊಂಡು ಭ್ರಷ್ಟಾಚಾರ ತೊಡೆದು ಹಾಕಲು ಹೋರಾಡಲು ಸ್ವಾಮೀಜಿಗಳು, ಹಿರಿಯರು, ಸಾರ್ವಜನಿಕರು ಸಾಥ್ ನೀಡಬೇಕು ಎಂದು ಹೇಳಿದರು.
ಮಾಜಿ ಸಚಿವ ಎಸ್.ಕೆ. ಕಾಂತಾ ಮಾತನಾಡಿ, ಉತ್ತಮ ಸಮಾಜಕ್ಕೆ ಸಮಾನತೆಯೇ ಪ್ರಮುಖವಾಗಿದೆ. ಸಾಮಾಜಿಕ ವ್ಯವಸ್ಥೆಯಲ್ಲಿ ಸಮಾನತೆ ಇದ್ದರೆ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಹೇಳಿದರು.
ಶ್ರೀನಿವಾಸ ಸರಡಗಿಯ ರೇವಣಸಿದ್ದ ಶಿವಾಚಾರ್ಯರು, ಯಳಸಂಗಿಯ ಮುತ್ಯಾನ ಬಬಲಾದನ ಗುರುಪಾದಲಿಂಗ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿ ಆಶೀರ್ವದಿಸಿದರು.
ಪ್ರಶಸ್ತಿ ಪುರಸ್ಕೃತರು: ನ್ಯಾಯವಾದಿ ಸುಭಾಷ್ ಚಂದ್ರ ಬಾಣಿ (ಕಾನೂನು), ನರರೋಗ ತಜ್ಞ ಡಾ| ಅನಿಲಕುಮಾರ ಬಿ. ಪಾಟೀಲ (ವೈದ್ಯಕೀಯ), ಮಹಾಂತಪ್ಪ ಎಂ. ಬಿರಾದಾರ (ಸಮಾಜ ಸೇವೆ), ಶ್ರೀಶೈಲ ಪವಾಡಶೆಟ್ಟಿ (ಸಮಾಜಸೇವೆ), ಸೂರ್ಯಕಾಂತ ಪೋದ್ದಾರ (ಶಿಕ್ಷಣ) ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಗೌರವ ಸತ್ಕಾರ: ಮಲ್ಲಿಕಾರ್ಜುನ ಎಸ್. ಧೂಳಬಾ ಫೀರೋಜಾಬಾದ್ (ಕೃಷಿ, ಸಮಾಜ ಸೇವೆ), ಕಸ್ತೂರಬಾಯಿ ಎಸ್. ಕಲ್ಲಾ(ರಾಜಕೀಯ), ಕ್ಷೇಮಲಿಂಗ ಸಲಗರ (ಸಮಾಜ ಸೇವೆ), ಸಂಗಮೇಶ ವೈ. ಹೂಗಾರ(ಸಾಹಿತ್ಯ), ಸಂಗಣ್ಣಗೌಡ ಸಿದ್ದಗೊಂಡ (ಆರೋಗ್ಯ ಸೇವೆ) ಅವರನ್ನು ಸತ್ಕರಿಸಲಾಯಿತು.
ನ್ಯಾಯವಾದಿ ಹಣಮಂತರಾಯ ಎಸ್. ಅಟ್ಟೂರ ಅಧ್ಯಕ್ಷತೆ ವಹಿಸಿದ್ದರು. ದಾಲ್ಮಿಲ್ ಅಸೋಸಿಯೇಶನ್ ಅಧ್ಯಕ್ಷ ಡಾ| ಚಿದಂಬರರಾವ್ ಪಾಟೀಲ ಮರಗುತ್ತಿ, ಗುಂಡಣ್ಣ ಡಿಗ್ಗಿ, ರೇವಣಸಿದ್ದಯ್ಯ ಸ್ವಾಮಿ, ಡಾ| ಬಾಬುರಾವ್ ಶೇರಿಕಾರ್, ಶ್ರಾವಣಕುಮಾರ ಮಠ, ಶರಣು ಜೆ. ಪಾಟೀಲ, ದೇವಿಂದ್ರಪ್ಪ ಗೋಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ