ಹತ್ತಿ ಬಿತ್ತನೆಗೆ ಹಿಂದೇಟು-ತೊಗರಿಗೆ ಒಲವು


Team Udayavani, Jul 4, 2021, 5:37 PM IST

ertyuiuytre

ಅಫಜಲಪುರ: ಕಳೆದ ನಾಲ್ಕೈದು ವರ್ಷಗಳಲ್ಲಿ ತಾಲೂಕಿನ ರೈತರು ಹೆಚ್ಚು ಹತ್ತಿ ಬಿತ್ತನೆ ಮಾಡಿ ಇಳುವರಿ ಸಿಗದೇ ಕೈ ಸುಟ್ಟುಕೊಂಡಿದ್ದರು. ಈ ಬಾರಿಯೂ ಇಳುವರಿ ಸಮಸ್ಯೆಯಿಂದಾಗಿ ಹತ್ತಿ ಬಿತ್ತನೆಗೆ ಸ್ವಲ್ಪ ಹಿಂದೇಟು ಹಾಕುತ್ತಿದ್ದು, ತೊಗರಿ ಬೆಳೆಯತ್ತ ಹೆಚ್ಚು ಒಲವು ತೋರಿಸುತ್ತಿದ್ದಾರೆ. ಹೀಗಾಗಿ ಈ ಬಾರಿ ಹತ್ತಿಗಿಂತ ಹೆಚ್ಚು ತೊಗರಿ ಬಿತ್ತನೆಯಾಗುತ್ತಿದೆ.

ಸಾಗುವಳಿ ಕ್ಷೇತ್ರದಲ್ಲಿ 99850 ಹೆಕ್ಟೇರ್‌ ಬಿತ್ತನೆ ಗುರಿ: ಸದ್ಯ ತಾಲೂಕಿನ ಒಟ್ಟು ಭೌಗೋಳಿಕ ಕ್ಷೇತ್ರ 130479 ಹೆಕ್ಟೇರ್‌ ಇದ್ದು, ಇದರಲ್ಲಿ ಸಾಗುವಳಿ ಕ್ಷೇತ್ರ 11590 ಹೆಕ್ಟೇರ್‌ ಪ್ರದೇಶವಿದೆ. ಈ ಪೈಕಿ 99850 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಇಷ್ಟೊಂದು ಪ್ರಮಾಣದ ಬಿತ್ತನೆ ಕ್ಷೇತ್ರದಲ್ಲಿ ಬಹುಪಾಲು ರೈತರು ಈ ಬಾರಿ ತೊಗರಿ ಬಿತ್ತನೆಯನ್ನೇ ಮಾಡಿದ್ದಾರೆ. ಕೆಲ ವರ್ಷಗಳಿಂದ ತಾಲೂಕಿನ ರೈತರು ಹತ್ತಿ ಬೆಳೆಯನ್ನು ಹೆಚ್ಚಾಗಿ ಬಿತ್ತನೆ ಮಾಡುತ್ತಿದ್ದರು.

ಹತ್ತಿ ಬೆಳೆ ಬಹುತೇಕ ರೈತರಿಗೆ ಲಾಭ ತಂದುಕೊಡುವ ಬದಲಾಗಿ ನಷ್ಟವನ್ನೇ ತಂದೊಡ್ಡಿದೆ. ಯಾವ ಬೀಜ ಹಾಕಿದರೂ ನಿರೀಕ್ಷಿತ ಇಳುವರಿ ಸಿಗದೇ ಇದ್ದುದರಿಂದ ರೈತರು ಈ ಬಾರಿ ಹತ್ತಿ ಬಿತ್ತನೆ ಕೈಬಿಟ್ಟಿದ್ದಾರೆ. ಹತ್ತಿ ಬದಲಾಗಿ ಯಾವಾಗಲೂ ಬಿತ್ತನೆಯಾಗುವ ತೊಗರಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಬಿತ್ತಲು ಮನಸ್ಸು ಮಾಡಿದ್ದಾರೆ.

ಹೀಗಾಗಿ ಈ ಬಾರಿ ಹತ್ತಿಗಿಂತ ಹೆಚ್ಚು ತೊಗರಿ ಬಿತ್ತನೆಯಾಗುತ್ತಿದೆ. ಬಿತ್ತನೆಯ ಗುರಿಯ ಬಹುಪಾಲು ಭಾಗ ತೊಗರಿಯಾಗುತ್ತಿರುವುದು ಈ ಬಾರಿಯ ವಿಶೇಷವಾಗಿದೆ ಎಂದರು. ರೈತರ ಮೊಗದಲ್ಲಿ ಮಂದಹಾಸ: ಪ್ರಸಕ್ತ ಮುಂಗಾರು ಹಂಗಾಮಿನ ಬಿತ್ತನೆಗೆ ಪೂರಕವಾಗುವುಷ್ಟು ಮಳೆ ಬಂದಿದೆ. ಅದರಲ್ಲೂ ಪ್ರಸಕ್ತ ಸಾಲಿನಲ್ಲಿ ಜೂನ್‌ ಅಂತ್ಯದ ವೇಳೆಗೆ ಬರಬೇಕಾಗಿದ್ದ ಮಳೆಗಿಂತ ವಾಡಿಕೆ ಮಳೆಗಿಂತಲೂ ಹೆಚ್ಚಿನ ಮಳೆ ಬಂದಿದ್ದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ವರ್ಷದ ವಾಡಿಕೆ ಮಳೆ 667.3 ಎಂ.ಎಂ ಬರಬೇಕು.

ಜೂನ್‌ ಅಂತ್ಯದ ವರೆಗೆ ಬರಬೇಕಾದ ಮಳೆ 160.5 ಎಂ.ಎಂ ಬರಬೇಕಾಗಿತ್ತು. ಆದರೆ ಜೂನ್‌ ಅಂತ್ಯದ ವೇಳೆಗೆ 183.50 ಎಂ.ಎಂ ಮಳೆಯಾಗುವ ಮೂಲಕ 23 ಎಂ.ಎಂ ಮಳೆ ಹೆಚ್ಚಾಗಿ ಬಂದಿದೆ. ತಾಲೂಕಿನ ಕರ್ಜಗಿ ಭಾಗದಲ್ಲಿ 268 ಎಂ.ಎಂ ಮಳೆಯಾದರೆ, ಗೊಬ್ಬೂರ ವಲಯದಲ್ಲಿ ಅತಿ ಕಡಿಮೆ ಅಂದರೆ 113 ಎಂ.ಎಂ. ಮಳೆಯಾಗಿದೆ. ಅಫಜಲಪುರ ವಲಯದಲ್ಲಿ 204, ಅತನೂರ ವಲದಯ್ಲಲಿ 140.06 ಎಂ.ಎಂ ಮಳೆಯಾಗಿದೆ. ಹೀಗಾಗಿ ಬಿತ್ತನೆಗೆ ರೈತರು ಬಿತ್ತನೆಗೆ ಸಜ್ಜುಗೊಂಡಿದ್ದಾರೆ. ಬೆಳೆ ಮಾಹಿತಿ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಏಕ ದಳ ಧಾನ್ಯ ಬಿತ್ತನೆ ಗುರಿ 2315 ಹೆಕ್ಟೇರ್‌ ಇದೆ. ಬೆಳೆಕಾಳು 73.835 ಹೆಕ್ಟೇರ್‌ ಇದ್ದು, ಈ ಪೈಕಿ ತೊಗರಿ 23,557 ಹೆಕ್ಟೇರ್‌ ಬಿತ್ತನೆಯಾಗಿದೆ.

ಇನ್ನೂ ಬಿತ್ತನೆಯಾಗುತ್ತಿದೆ. ಎಣ್ಣೆ ಕಾಳು 2490 ಹೆಕ್ಟೇರ್‌ ಪ್ರದೇಶ ಗುರಿ ಇದೆ. ಈ ಪೈಕಿ 132 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ವಾಣಿಜ್ಯ ಬೆಳೆಗಳ ಗುರಿ 21210 ಹೆಕ್ಟೇರ್‌ ಇದೆ. ಕಬ್ಬಿನ ಗುರಿ 31250 ಹೆಕ್ಟೇರ್‌ ಇದೆ. ಈಗಾಗಲೇ 29.500 ಹೆಕ್ಟೇರ್‌ ನಾಟಿ ಮಾಡಲಾಗಿದೆ. ಹತ್ತಿ ಗುರಿ 6500 ಹೆಕ್ಟೇರ್‌ ಇದೆ. ಕಳೆದ ವರ್ಷವೂ ಇಷ್ಟೇ ಗುರಿ ಇದ್ದರೂ 28.860 ಹೆಕ್ಟೇರ್‌ ಪ್ರದೇಶದಲ್ಲಿ ಹತ್ತಿ ಬಿತ್ತನೆಯಾಗಿತ್ತು. ಆದರೆ ಈ ಬಾರಿ ಹತ್ತಿ ಬಿತ್ತನೆಯು 2865 ಹೆಕ್ಟೇರ್‌ ಮಾತ್ರ ಆಗಿದೆ. ಇನ್ನೂ ಸ್ವಲ್ಪ ಮಾತ್ರ ಬಿತ್ತನೆಯಾಗುವ ಸಂಭವವಿದೆ. ಕಳೆದ ವರ್ಷದ ಹತ್ತಿ ಬೆಳೆಯ ಕ್ಷೇತ್ರ ತೊಗರಿ ಬೆಳೆ ಕ್ಷೇತ್ರವಾಗಿ ಪರಿವರ್ತನೆಯಾಗಲಿದೆ.

ಟಾಪ್ ನ್ಯೂಸ್

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.