ರಂಜಾನ್‌ ಹಬ್ಬದ ಸಂಭ್ರಮಕ್ಕೆ ಕೋವಿಡ್ ಕರಿನೆರಳು


Team Udayavani, May 25, 2020, 5:46 AM IST

ರಂಜಾನ್‌ ಹಬ್ಬದ ಸಂಭ್ರಮಕ್ಕೆ ಕೋವಿಡ್ ಕರಿನೆರಳು

ಕಲಬುರಗಿ: ಭಾವೈಕ್ಯತೆ ನೆಲೆ ಬೀಡು, ಸೂಫಿ-ಸಂತರ ನಾಡು, ಸೂರ್ಯ ನಗರಿಯಲ್ಲಿ ಮುಸ್ಲಿಮರ ಪವಿತ್ರ ಹಬ್ಬ ರಂಜಾನ್‌ ಮೇಲೆ ಕೋವಿಡ್  ಕರಿನೆರಳು ಬೀರಿದೆ. ಹೊಸ ಬಟ್ಟೆ ಖರೀದಿಸಿ ಸಂಭ್ರಮಿಸುತ್ತಿದ್ದವರ ಮೊಗದಲ್ಲಿ ಮಂಕು ಕವಿದಿದೆ. ಮನೆಯೊಳಗೆ ಹಬ್ಬವನ್ನು ಸರಳವಾಗಿ ಆಚರಿಸಲು ಮುಸ್ಲಿಮರು ಸಜ್ಜಾಗಿದ್ದಾರೆ.

ಸೌದಿ ಅರೇಬಿಯಾದಿಂದ ಮರಳಿದ್ದ ನಗರದ 76 ವರ್ಷದ ವೃದ್ಧನನ್ನು ದೇಶದಲ್ಲೇ ಮೊದಲು ಕೋವಿಡ್ ಬಲಿ ಪಡೆದಿತ್ತು. ವೃದ್ಧ ಕೋವಿಡ್ ಕ್ಕೆ ತುತ್ತಾದ ನಂತರ ಮಾ.12ರಿಂದಲೂ ಆತಂಕ ಮನೆ ಮಾಡಿದ್ದು, ನಿತ್ಯವೂ ಕೋವಿಡ್ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗುತ್ತಿರುವುದರಿಂದ ಜನರು ಹೊರ ಬರಲು ಹಿಂದೇಟು ಹಾಕುತ್ತಿದ್ದಾರೆ. ಮಹಾಮಾರಿ ರೋಗದ ಭೀತಿ ಹಿನ್ನೆಲೆಯಲ್ಲಿ ಯುಗಾದಿ, ಗುಡ್‌ಫ್ತೈಡೆ, ಮಹಾವೀರ ಜಯಂತಿ ಹಾಗೂ ಬುದ್ಧ ಜಯಂತಿ ಹಬ್ಬಗಳನ್ನು ಸರಳವಾಗಿ ಆಚರಿಸಲಾಗಿತ್ತು. ಅದರಂತೆ ಸೋಮವಾರ (ಮೇ 25) ರಂಜಾನ್‌ ಹಬ್ಬವನ್ನು ಸರಳವಾಗಿ ಆಚರಿಸಲು ಮುಂದಾಗಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಈದ್ಗಾ ಮೈದಾನ, ಮಸೀದಿ, ದರ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮತ್ತು ಇಫ್ತಾರ್‌ ಕೂಟಗಳಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಕಾಣದ ಸಂಭ್ರಮ: ರಂಜಾನ್‌ ಮುಸ್ಲಿಮರ ದೊಡ್ಡ ಹಾಗೂ ಶ್ರೇಷ್ಠ ಹಬ್ಬ. ತಿಂಗಳ ಪೂರ್ತಿ ಉಪವಾಸ, ಪ್ರಾರ್ಥನೆ, ದಾನ-ಧರ್ಮ ಮಾಡಿ ಆಚರಿಸುವ ಪವಿತ್ರ ಹಬ್ಬ. ರಂಜಾನ್‌ ಮಾಸದುದ್ದಕ್ಕೂ ಖರೀದಿ, ಮಸೀದಿಗಳಲ್ಲಿ ವಿಶೇಷ ಸಾಮೂಹಿಕ ಪ್ರಾರ್ಥನೆ ಮತ್ತು ಇಫ್ತಾರ್‌ ಕೂಟಗಳು ನಡೆಯುತ್ತಿದ್ದವು. ಆದರೆ, ಈ ವರ್ಷ ಹಬ್ಬದ ಸಂಭ್ರಮವನ್ನೇ ಕೋವಿಡ್ ಕಸಿದಿದೆ.

ರಂಜಾನ್‌ ಮುನ್ನಾ ದಿನದ ರಾತ್ರಿಯಂತೂ ಸೂಪರ್‌ ಮಾರ್ಕೆಟ್‌ ಅಂಗಡಿಗಳಲ್ಲಿ ಖರೀದಿಗೆ ಕುಟುಂಬ ಸಮೇತರಾಗಿ ಜನರು ಮುಗಿಬೀಳುತ್ತಿದ್ದರು. ಹೊಸ ಬಟ್ಟೆ, ಚಪ್ಪಲಿ, ಶೂ, ಟೋಪಿ, ಸುಗಂಧ ದ್ರವ್ಯದ ಅಂಗಡಿಗಳು ತುಂಬಿ ತುಳುಕುತ್ತಿದ್ದವು. ಬಿರಿಯಾನಿ, ಸಿರಕುಂಬ ಹಾಗೂ ವಿಶಿಷ್ಟ ಖಾದ್ಯಗಳಿಗಾಗಿ ಒಣದ್ರಾಕ್ಷಿ, ಬಾದಾಮಿ, ಖರ್ಜೂರ, ಗೋಡಂಬಿ, ಗಸಗಸೆ, ಶಾವಿಗೆ ಮುಂತಾದ ಸಾಮಗ್ರಿಗಳಿಗೆ ಇನ್ನಿಲ್ಲದ ಬೇಡಿಕೆ ಬರುತ್ತಿತ್ತು. ಬಳೆ, ಫ್ಯಾನ್ಸಿ ಐಟಂಗಳ ಖರೀದಿ ಜೋರಾಗಿಯೇ ನಡೆಯುತ್ತಿತ್ತು. ಪ್ರತಿವರ್ಷ ಹಬ್ಬದ ಹೊತ್ತಲ್ಲಿ ಕಾಲಿಡಲು ಜಾಗವಿರುತ್ತಿರಲಿಲ್ಲ. ಈ ಬಾರಿ ಎಲ್ಲ ಅಂಗಡಿಗಳು ಮುಚ್ಚಿದ್ದು, ರಸ್ತೆಗಳು ಬಿಕೋ ಎನ್ನುತ್ತಿವೆ. ಹಬ್ಬದ ಸಂಭ್ರಮವೇ ಕಾಣುತ್ತಿಲ್ಲ.

ಕೋವಿಡ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಸರಳವಾಗಿ ಮನೆಯಲ್ಲೇ ಹಬ್ಬ ಆಚರಿಸುತ್ತಿದ್ದೇವೆ ಎನ್ನುತ್ತಾರೆ ಮುಸ್ಲಿಂ ಮುಖಂಡರು. ಹಬ್ಬವನ್ನು ಸರಳವಾಗಿ ಆಚರಿಸುವ ನಿಟ್ಟಿನಲ್ಲಿ 15 ದಿನಗಳ ಹಿಂದೆಯೇ ಪ್ರಮುಖ ಮುಖಂಡರು ನಿರ್ಧಾರ ತೆಗೆದುಕೊಂಡಿದ್ದರು. ಅಂತೆಯೇ ವರ್ತಕರು, ಅಂಗಡಿಗಳ ಮಾಲೀಕರು ರಂಜಾನ್‌ ಮುಗಿಯುವ ವರೆಗೆ ಬಟ್ಟೆ, ಚಪ್ಪಲಿ ಅಂಗಡಿಗಳನ್ನು ತೆರೆಯದಿರಲು ನಿರ್ಣಯ ಕೈಗೊಂಡಿದ್ದರು. ಕೆಲ ವರ್ತಕರು ಅಂಗಡಿಗಳಿಗೆ ಅವಕಾಶ ನೀಡಬೇಕೆಂದು ಕೋರಿದ್ದರು. ಆದರೆ, ಸಾಮಾಜಿಕ ಅಂತರ ಕಾಪಾಡಲು ಸಾಧ್ಯವಿಲ್ಲ ಎಂದು ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಮೇಲಾಗಿ ರವಿವಾರ ಸಂಪೂರ್ಣ ಲಾಕ್‌ಡೌನ್‌ ಜಾರಿಯಾಗಿದ್ದರಿಂದ ನಗರ ಸ್ತಬ್ಧಗೊಂಡಿತ್ತು. ಹೀಗಾಗಿ ಮುಸ್ಲಿಂ ಚೌಕ್‌, ಶೇಖ್‌ ರೋಜಾ, ಎಂಎಸ್‌ಕೆ ಮಿಲ್‌, ಸ್ಪೇಷನ್‌ ಪ್ರದೇಶದಲ್ಲಿ ಮಾಂಸ ಮಾರಾಟವೂ ಇರಲಿಲ್ಲ.

ರಂಜಾನ್‌ ಹಬ್ಬವನ್ನು ಸರಳವಾಗಿ ಮನೆಯಲ್ಲೇ ಆಚರಿಸಲು ತಯಾರಿ ನಡೆದಿದೆ. ಪ್ರಾರ್ಥನೆ ಸಹ ಮನೆಯಲ್ಲೇ ನಡೆಯಲಿದ್ದು, ಮಸೀದಿಗಳಲ್ಲಿ ಮೌಲ್ವಿಗಳು ಹಾಗೂ ಸಿಬ್ಬಂದಿ ಮಾತ್ರವೇ (ಐದರಿಂದ ಆರು ಜನ) ಪ್ರಾರ್ಥನೆ ಸಲ್ಲಿಸಲಿದ್ದಾರೆ. ಇಸ್ಲಾಂ ಧರ್ಮ ಹೇಳುವುದು ಜೀವ ರಕ್ಷಣೆಯ ಬಗ್ಗೆಯೇ. ಅದರಂತೆ ಸರ್ಕಾರ ಸಹಿತ ಲಾಕ್‌ ಡೌನ್‌ ಜಾರಿ ಮಾಡಿದೆ. ಆದ್ದರಿಂದ ಸರ್ಕಾರದ ನಿಯಮಗಳನ್ನು ಎಲ್ಲರೂ ಪಾಲಿಸಬೇಕು. -ನಿಜಾಮ ಬಾಬಾ, ಕೆಬಿಎನ್‌ ದರ್ಗಾ

ಡಾ| ಸೈಯದ್‌ ಸಜ್ಜಾದೆ ಸಂದೇಶ ; ರಂಜಾನ್‌ ಹಬ್ಬದಂದು ಮನೆಗಳಲ್ಲಿ ಪ್ರಾರ್ಥನೆ ಸಲ್ಲಿಸುವ ನಿಟ್ಟಿನಲ್ಲಿ ಖ್ವಾಜಾ ಬಂದೇ ನವಾಜ್‌ ದರ್ಗಾ ಮುಖ್ಯಸ್ಥ ಡಾ| ಸೈಯದ್‌ ಶಾ ಖುಸ್ರೋ ಹುಸೇನಿ ಸಜ್ಜಾದೆ ನಸೀನ್‌ ಮಾರ್ಗದರ್ಶನದಲ್ಲಿ ಮೌಲ್ವಿಗಳು ವಿಡಿಯೋ ಸಂದೇಶ ಸಿದ್ಧಪಡಿಸಿದ್ದಾರೆ. ಈದ್ಗಾ ಮೈದಾನದಲ್ಲಿ ಮಾಡುವ ಪ್ರಾರ್ಥನೆಯನ್ನು ಮನೆಯಲ್ಲಿ ಹೇಗೆ ಮಾಡಬೇಕೆಂಬ ಕುರಿತು ವಿಡಿಯೋದಲ್ಲಿ ವಿವರಿಸಲಾಗಿದೆ. ಜತೆಗೆ ಕೋವಿಡ್ ರೋಗದಿಂದ ನಮ್ಮನ್ನು ರಕ್ಷಿಸಿಕೊಳ್ಳುವುದು ಸೇರಿದಂತೆ ಮತ್ತೂಬ್ಬರನ್ನು ರಕ್ಷಣೆ ಮಾಡುವುದು ಮುಖ್ಯವಾಗಿದೆ. ಹೀಗಾಗಿ ಮನೆಯಲ್ಲೇ ಹಬ್ಬದ ಪ್ರಾರ್ಥನೆ ಸಲ್ಲಿಸುವಂತೆ ಡಾ| ಸೈಯದ್‌ ಶಾ ಖುಸ್ರೋ ಹುಸೇನಿ ಸಜ್ಜಾದೆ ನಸೀನ್‌ ಸಂದೇಶ ನೀಡಿದ್ದಾರೆ.

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.