ಯುನೈಟೆಡ್‌ ಆಸ್ಪತ್ರೆಯಲ್ಲಿ ಕೋವಿಡ್‌-19 ಪರೀಕ್ಷೆ : ಡಾ| ವಿಕ್ರಮ


Team Udayavani, Jun 9, 2020, 5:39 PM IST

ಯುನೈಟೆಡ್‌ ಆಸ್ಪತ್ರೆಯಲ್ಲಿ ಕೋವಿಡ್‌-19 ಪರೀಕ್ಷೆ : ಡಾ| ವಿಕ್ರಮ

ಕಲಬುರಗಿ: ವೈದ್ಯಕೀಯ ಕ್ಷೇತ್ರದಲ್ಲಿ ಈಗಾಗಲೇ ಮನೆ ಮಾತಾಗಿರುವ ಇಲ್ಲಿನ ಯುನೈಟೆಡ್‌ ಆಸ್ಪತ್ರೆಯಲ್ಲೀಗ ಮತ್ತೂಂದು ಕೊಡುಗೆ ಎನ್ನುವಂತೆ ಕೇಂದ್ರ ಸರ್ಕಾರದ ಐಸಿಎಂಆರ್‌ (ಇಂಡಿಯನ್‌ ಕೌನ್ಸಿಲ್‌ ಫಾರ್‌ ಮೆಡಿಕಲ್‌ ರಿಸರ್ಚ್‌) ಅನುಮೋದಿತ ಆರ್‌ಟಿಪಿಸಿಆರ್‌ ಟೆಸ್ಟ್‌ ಸೌಲಭ್ಯ ಕಾರ್ಯಾರಂಭ ಮಾಡಿದೆ.

ರಾಜ್ಯದ ರಾಜಧಾನಿ ಬೆಂಗಳೂರು ಹೊರತುಪಡಿಸಿದರೆ ಖಾಸಗಿ ಆಸ್ಪತ್ರೆಗಳಲ್ಲಿ ಈ ಸೌಲಭ್ಯ ಹೊಂದಿರುವ ಏಕೈಕ ಆಸ್ಪತ್ರೆ ಎನ್ನುವ ಹೆಗ್ಗಳಿಕೆಗೆ ಯುನೈಟೆಡ್‌ ಪಾತ್ರವಾಗಿದ್ದು, ಇದು ಹೆಮ್ಮೆಯ ವಿಷಯ ಎಂದು ಯುನೈಟೆಡ್‌ ಆಸ್ಪತ್ರೆ ಚೇರ್ಮನ್‌, ವ್ಯವಸ್ಥಾಪಕ ನಿರ್ದೇಶಕ ಡಾ| ವಿಕ್ರಮ ಸಿದ್ದಾರಡ್ಡಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ ವಿಷಯ ಹಂಚಿಕೊಂಡರು.

ಕೋವಿಡ್‌-19ನ ದೇಶದಲ್ಲೇ ಮೊದಲ ಸಾವು ಕಲಬುರಗಿಯಲ್ಲಿ ಸಂಭವಿಸಿದ್ದು, ದಿನೇದಿನೇ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಲೇ ಇದೆ. ಹೀಗಾಗಿ ರೋಗಿಗಳಿಗೆ ಸ್ಪಂದಿಸಲು ಹಾಗೂ ಪರಿಸ್ಥಿತಿ ನಿಭಾಯಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಸರ್ಕಾರದೊಂದಿಗೆ ಕೈಜೋಡಿಸಬೇಕೆಂಬ ಸಾಮಾಜಿಕ ಜವಾಬ್ದಾರಿಯೊಂದಿಗೆ ಆರ್‌ ಟಿಪಿಸಿಆರ್‌ ಟೆಸ್ಟ್‌ ಸೌಲಭ್ಯ (ಅಲ್ಟ್ರಾಮಾಡರ್ನ್ ಮಾಲಿಕ್ಯೂಲರ್‌ ಬಯೋಲಜಿ ಲ್ಯಾಬ್‌) ಪಡೆದು ಮುಂದಿನ ಹೆಜ್ಜೆ ಇಡಲಾಗಿದೆ. ಈ ನಿಟ್ಟಿನಲ್ಲಿ ಪ್ರಥಮ ಪರೀಕ್ಷೆ ಮೂಲಕ ಯಶಸ್ವಿಯಾಗಿದ್ದೇವೆ ಎಂದು ವಿವರಣೆ ನೀಡಿದರು.

ಇಂತಹ ಪರೀಕ್ಷಾ ಸೌಲಭ್ಯವಿರುವ ಕೇಂದ್ರದ ಅಲ್ಟ್ರಾ ಮಾಡೆಲ್‌ ಡೈಗ್ನೊಸ್ಟಿಕ್‌ ಲ್ಯಾಬ್‌ ಆರಂಭಿಸಲು ಜನವರಿಯಲ್ಲೇ ಯೋಜಿಸಿ ಕಾರ್ಯಪ್ರವೃತ್ತರಾಗಿದ್ದೆವು. ಈ ನಡುವೆ ಕೊರೊನಾದಿಂದಾಗಿ ಲೌಕ್‌ ಡೌನ್‌ ಎದುರಾಯಿತು. ಹೀಗಿದ್ದರೂ ಲಾಕ್‌ ಡೌನ್‌ ಅವಧಿಯಲ್ಲೇ ಬಹುತೇಕ ಪ್ರಕ್ರಿಯೆ ಮುಂದುವರಿಸಲಾಯಿತು. ಯಾಂತ್ರಿಕವಾಗಿ ನುರಿತ, ವಿವಿಧ ಆಯಾಮಗಳಲ್ಲಿ ಎನ್‌ಎಬಿಎಲ್‌ ನೋಡಲ್‌ ಏಜೆನ್ಸಿ ಪರಿಶೀಲನೆ ನಡೆಸಿ ಗ್ರೀನ್‌ ಸಿಗ್ನಲ್‌ ನೀಡಿತು. ಇದಾದ ಬಳಿಕ ಐಸಿಎಂಆರ್‌ ನೋಡಲ್‌ ಏಜೆನ್ಸಿ ನೀಡಿದ ಐದು ಪರೀಕ್ಷೆಗಳಲ್ಲಿ ರಿಪೋರ್ಟ್‌ ಪಡೆದು ಅನುಮೋದನೆ ನೀಡಿದೆ ಎಂದರು.

ರಾಜ್ಯದ ಕೆಲ ವೈದ್ಯಕೀಯ ಕಾಲೇಜುಗಳಲ್ಲಿ ರ್ಯಾಪಿಡ್‌ ಟೆಸ್ಟ್‌ ಸೌಲಭ್ಯವಿದೆ. ಆದರೆ ಖಾಸಗಿಯಾಗಿ ಈ ಸೌಲಭ್ಯ ಹೊಂದಿದ ಏಕೈಕ ಖಾಸಗಿ ಆಸ್ಪತ್ರೆ ತಮ್ಮದಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್‌ ಇಲಾಖೆ ಸಹಕಾರ ಮರೆಯಲಾಗದು. ಬೆಂಗಳೂರು ಖಾಸಗಿ ಆಸ್ಪತ್ರೆಯೊಂದರ ಲ್ಯಾಬ್‌ನ ಚೀಫ್ ಆಪರೇಟಿಂಗ್‌ ಆಫೀಸರ್‌ ಆಗಿರುವ ಚಿಂಚೋಳಿಯ ಡಾ| ಶಾಂತಕುಮಾರ ಮುರಡಾ, ಯುನೈಟೆಡ್‌ ಆಸ್ಪತ್ರೆ ಲ್ಯಾಬ್‌ ಮುಖ್ಯಸ್ಥೆ ಡಾ| ಆಯೇಷಾ ಫಾತಿಮಾ ಬಶೀರ್‌ ಅವರ ಶ್ರಮವೂ ಪ್ರಮುಖವಾಗಿ ಅಡಗಿದೆ ಎಂದು ವಿವರಣೆ ನೀಡಿದರು.

ಕೋವಿಡ್‌ಗೆ ಸಂಬಂಧಿಸಿದಂತೆ ಎರಡು ತಿಂಗಳಿಂದ ರ್ಯಾಪಿಡ್‌ ಟೆಸ್ಟ್‌ ಮಾಡಲಾಗುತ್ತಿದ್ದು, 300ಕ್ಕೂ ಹೆಚ್ಚು ಜನ ತಪಾಸಣೆಗೆ ಒಳಗಾಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಪ್ರವೇಶ ಪಡೆಯುವ ಎಲ್ಲರಿಗೂ ಕೋವಿಡ್‌-19 ಟೆಸ್ಟ್‌ ಕಡ್ಡಾಯ ಮಾಡಲಾಗಿದೆ. ಒಳರೋಗಿಗಳ ಹಿತರಕ್ಷಣೆ ದೃಷ್ಟಿಯಿಂದ ಇದನ್ನು ಅಳವಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಎಲ್ಲರಿಗೂ ಪರೀಕ್ಷೆ: ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಜಿಲ್ಲೆಯಲ್ಲಿರುವ ಏಕೈಕ ಇಲ್ಲಿನ ಜಿಮ್ಸ್‌ ಆಸ್ಪತ್ರೆಯಲ್ಲಿ ಒತ್ತಡ ಹೆಚ್ಚಾಗುತ್ತಿದೆ. ಸಾವಿರಾರು ಪ್ರಕರಣಗಳ ಪರೀಕ್ಷೆ ಬಾಕಿ ಉಳಿದಿವೆ. ಜಿಲ್ಲಾಡಳಿತ ಔಟ್‌ಸೋರ್ಸ್‌ ಆಧಾರದ ಮೇಲೆ ಅವಕಾಶ ನೀಡಿದರೆ ಸರ್ಕಾರ ನಿಗದಿಪಡಿಸಿದ ದರದಲ್ಲೇ ತಪಾಸಣೆ ನಡೆಸಲು ಸಿದ್ಧರಿದ್ದೇವೆ. ಜತೆಗೆ ಇತರ ಖಾಸಗಿ ಆಸ್ಪತ್ರೆಗಳು ಬಯಸಿದರೂ ಟೆಸ್ಟ್‌ ಮಾಡಿಕೊಡಲಾಗುವುದು ಎಂದು ತಿಳಿಸಿದರು. ಯುನೈಟೆಡ್‌ ಹಾಸ್ಪಿಟಲ್‌, ಈ ಪ್ರದೇಶದ ಜನರಿಗೆ ನಾವು ಎಲ್ಲರಿಗೂ ಉತ್ತಮ ಆರೋಗ್ಯ ಸೇವೆ ಒದಗಿಸಲು ಬದ್ಧರಾಗಿದ್ದೇವೆ. ಜನರ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಬದ್ಧತೆ ಪೂರೈಸುವ ಹಾದಿಯಲ್ಲಿ ಸವಾಲನ್ನು ಜಯಿಸಲು ನಿರ್ಧರಿಸಿದ್ದೇವೆ ಎಂದು ಭರವಸೆ ನೀಡಿದರು.

ಅಲ್ಟ್ರಾಮಾಡರ್ನ್ ಆಣ್ವಿಕ ಜೀವಶಾಸ್ತ್ರ ಪ್ರಯೋಗಾಲಯ ಮತ್ತು ಅಂತಾರಾಷ್ಟ್ರೀಯ ಗುಣಮಟ್ಟದ ಸುಶಿಕ್ಷಿತ ಮತ್ತು ಅರ್ಹ ಸಿಬ್ಬಂದಿ ಹೊಂದಿರುವ ಅತ್ಯಾಧುನಿಕ ಪ್ರಯೋಗಾಲಯ ಇದಾಗಿದೆ. ಜನರಿಗೆ ಸಮಗ್ರ, ವೇಗದ, ನಿಖರ ಮತ್ತು ಸಮಂಜಸವಾಗಿ ರೋಗನಿರ್ಣಯ ಬಹು ಬೇಗವಾಗಿ ಪ್ರಯೋಗಾಲಯ ಒದಗಿಸಲಿದೆ. ಸಮುದಾಯದ ಸಾಮಾನ್ಯ ಯೋಗಕ್ಷೇಮ ಖಾತ್ರಿಪಡಿಸಿಕೊಳ್ಳಲು ಅತ್ಯುನ್ನತ ಗುಣಮಟ್ಟದ ರೋಗ ನಿರ್ಣಯ ಮತ್ತು ಕ್ಷೇಮ ಸೇವೆಗಳನ್ನು ನೀಡುವ ಗುರಿ ಹೊಂದಲಾಗಿದೆ. -ಡಾ| ವಿಕ್ರಮ ಸಿದ್ದಾರಡ್ಡಿ, ಚೇರ್ಮನ್‌, ವ್ಯವಸ್ಥಾಪಕ ನಿರ್ದೇಶಕ ಯುನೈಟೆಡ್‌ ಆಸ್ಪತ್ರೆ

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.