ತಾಲೂಕು ಕೇಂದ್ರಗಳಲ್ಲೂ ಕೋವಿಡ್‌ ಕೇರ್‌ ಸೆಂಟರ್‌


Team Udayavani, Aug 1, 2020, 1:57 PM IST

ತಾಲೂಕು ಕೇಂದ್ರಗಳಲ್ಲೂ  ಕೋವಿಡ್‌ ಕೇರ್‌ ಸೆಂಟರ್‌

ಕಲಬುರಗಿ: ಕೋವಿಡ್ ಲಕ್ಷಣಗಳಿಲ್ಲದ ಸೋಂಕಿತರಿಗೆ ಆಯಾ ತಾಲೂಕು ಕೇಂದ್ರಗಳಲ್ಲೇ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಮುಂದಾಗಿದ್ದು, ವಾರದೊಳಗೆ ಚಿಕಿತ್ಸಾ ಸೌಲಭ್ಯಕ್ಕೆ 100 ಹಾಸಿಗೆಗೆ ವ್ಯವಸ್ಥೆಯಾಗಲಿದೆ.

ವಯಸ್ಸಾದವರಿಗೆ ಹಾಗೂ ವಿವಿಧ ರೋಗಗಳ ಜತೆಗೆ ಕೋವಿಡ್ ಸೋಂಕಿತರಿಗೆ ಐಸಿಯು ವಾರ್ಡ್‌ ನಲ್ಲಿ ಚಿಕಿತ್ಸೆಗೆ ಕ್ರಮ ಕೈಗೊಂಡರೆ ಲಕ್ಷಣಗಳಿಲ್ಲದ ಸೋಂಕಿತರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಜತೆಗೆ ಜಿಮ್ಸ್‌, ಇಎಸ್‌ಐ ಆಸ್ಪತ್ರೆ ಜತೆಗೆ ಟ್ರಾಮಾ ಸೆಂಟರ್‌ನಲ್ಲಿ ತೆರೆಯಲಾಗಿರುವ ಚಿಕಿತ್ಸಾ ವಾರ್ಡ್‌ ಫುಲ್ ಆಗುತ್ತಿರುವುದರಿಂದ ಆಯಾ ತಾಲೂಕು ಕೇಂದ್ರಗಳಲ್ಲೇ ಕೇರ್‌ ಸೆಂಟರ್‌ ತೆರೆಯುವ ಮುಖಾಂತರ ತಕ್ಷಣ ಸ್ಪಂದಿಸಲು ಹೆಜ್ಜೆ ಇಡಲಾಗುತ್ತಿದೆ.

ಕೋವಿಡ್ ಸೋಂಕಿತರಲ್ಲಿ ಅರ್ಧದಷ್ಟು ಜನರಿಗೆ ಕೋವಿಡ್ ಸೋಂಕಿನ ಲಕ್ಷಣಗಳೇ ಕಂಡು ಬರುತ್ತಿಲ್ಲ. ಹೀಗಾಗಿ ಇಂತವರಿಗೆ ಕೋವಿಡ್‌ ಕೇರ್‌ ಸೆಂಟರ್‌ ನಲ್ಲಿಟ್ಟು ಚಿಕಿತ್ಸಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಈಗಾಗಲೇ ತಾಲೂಕು ಕೇಂದ್ರ ಸ್ಥಾನದಲ್ಲಿ ಸೆಂಟರ್ ಗೆ ಸ್ಥಳಾವಕಾಶ ಗುರುತಿಸಲಾಗಿದ್ದು, ಆದರೆ ತಾಲೂಕು ಆಸ್ಪತ್ರೆ ಬಿಟ್ಟು ಬೇರೆಡೆ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶರತ್‌ ಬಿ ತಿಳಿಸಿದ್ದಾರೆ.

ಈಗಾಗಲೇ ಚಿತ್ತಾಪುರ ತಾಲೂಕು ಕೇಂದ್ರದಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಆರಂಭವಾಗಿದೆ. ವಸತಿ ನಿಲಯಗಳಲ್ಲೇ ಸೆಂಟರ್‌ ಆರಂಭವಾಗುವ ಸಾಧ್ಯತೆಗಳೇ ಹೆಚ್ಚು. ರೋಗಿಗಳೇ ಬಂದು ನೇರವಾಗಿ ಐಸಿಯು ಬೆಡ್‌ ಕೇಳುವಂತಾಗಬಾರದು. ವೈದ್ಯರ ಸಲಹೆ ಹಾಗೂ ಶಿಫಾರಸ್ಸು ಮಾಡಬೇಕು. ತಾಲೂಕು ಆಸ್ಪತ್ರೆಯಲ್ಲೂ ಆಕ್ಸಿಜನ್‌ಗೆ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದು ವಿವರಣೆ ನೀಡಿದರು. ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರು ಮನೆಯಲ್ಲೇ ಇದ್ದು, ಯಾರೊಂದಿಗೆ ಸಂಪರ್ಕಕ್ಕೆ ಬಾರದೇ ವ್ಯವಸ್ಥೆ ಮಾಡಿಕೊಂಡಿದ್ದರೆ ಮನೆಗೆ ಬಂದು ಮಾತ್ರೆಗಳನ್ನು ತಂದು ಕೊಡುವ ನಿಟ್ಟಿನಲ್ಲೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಡಿಸಿಯವರು ಸ್ಪಷ್ಟಪಡಿಸಿದರು.

ಜೀಮ್ಸ್‌ನಲ್ಲಿ ಇನ್ನೊಂದು ಪರೀಕ್ಷಾ ಕೇಂದ್ರ: ಜಿಮ್ಸ್‌ನಲ್ಲಿ ವಾರದೊಳಗೆ ಇನ್ನೊಂದು ಕೋವಿಡ್‌ ಪತ್ತೆ ಪರೀಕ್ಷಾ ಕೇಂದ್ರ ಕಾರ್ಯಾರಂಭವಾಗಲಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈಗಿರುವ ಕೇಂದ್ರವೊಂದರಲ್ಲಿ ದಿನಕ್ಕೆ ಸಾವಿರ ಮಾದರಿಗಳನ್ನು ಪರೀಕ್ಷೆಯ ಫ‌ಲಿತಾಂಶ ನೀಡಬಹುದಾಗಿದ್ದು, ಇನ್ನೊಂದು ಕೇಂದ್ರವಾದಲ್ಲಿ ದಿನಕ್ಕೆ ಎರಡು ಸಾವಿರ ಫ‌ಲಿತಾಂಶಗಳನ್ನು ಪಡೆಯಬಹುದಾಗಿದೆ. ಇಎಸ್‌ಐಯಲ್ಲಿ ಪರೀಕ್ಷಾ ಕೇಂದ್ರ ಸ್ಥಾಪನೆ ನಿಟ್ಟಿನಲ್ಲಿ ಪತ್ರ ಬರೆಯಲಾಗಿದೆ.

ಮೊಬೈಲ್‌ ವಾಹನ: ಆ್ಯಂಟಿಜೆನ್‌ ಪರೀಕ್ಷೆಗಳನ್ನು ನಡೆಸಲು ಕೆಲವು ಕಡೆ ಮೊಬೈಲ್‌ ವಾಹನಗಳೇ ತೆರಳಲಿವೆ. ಭಾರತೀಯ ಜೈನ್‌ ಸಂಘಟನೆ (ಬಿಜೆಎಸ್‌) 9 ವಾಹನಗಳನ್ನು ನೀಡಿದ್ದು, ಈ ವಾಹನಗಳಲ್ಲೇ ತಂಡ ತೆರಳಿ ಜನರ ಮಾದರಿಗಳನ್ನು ಪರೀಕ್ಷಿಸಲಿದೆ. ತಾಲೂಕೊಂದರಂತೆ ವಾಹನ ಸಂಚರಿಸಲಿದೆ. ಪಿಪಿಇ ಕಿಟ್‌ಗಳಿಗೆ ಕೊರತೆಯಿಲ್ಲ. ಮೊದಲು ರಾಜ್ಯ ಸರ್ಕಾರ ಮುಖಾಂತರವೇ ಪಡೆಯಬೇಕಿತ್ತು. ಈಗ ಜಿಲ್ಲಾಡಳಿತವೇ ನೇರವಾಗಿ ಪಡೆಯಬಹುದಾಗಿದೆ ಎಂದು ಡಿಸಿ ಶರತ್‌ ವಿವರಿಸಿದರು.

ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ :  ಬಸವೇಶ್ವರ-ಧನ್ವಂತರಿ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಮೂರ್‍ನಾಲ್ಕು ದಿನದೊಳಗೆ ಯುನೈಟೆಡ್‌, ವಾತ್ಸಲ್ಯ, ಕ್ರಿಸ್ಟಲ್‌ ಆಸ್ಪತ್ರೆಗಳಲ್ಲೂ ಚಿಕಿತ್ಸೆ ದೊರೆಯಲಿದೆ. ಯುನೈಟೆಡ್‌ನ‌ಲ್ಲಿ 9 ಬೆಡ್‌ ಹಾಗೂ ವಾತ್ಸಲ್ಯದಲ್ಲಿ 6 ಬೆಡ್‌ಗಳಲ್ಲಿ ಚಿಕಿತ್ಸೆ ದೊರೆತರೆ ಧನ್ವಂತರಿಯಲ್ಲಿ 10 ಬೆಡ್‌ಗಳಿವೆ. ಖಾಜಾ ಬಂದೇನವಾಜ್‌ ಆಸ್ಪತ್ರೆಯಲ್ಲಿ ಆಗಸ್ಟ್‌ ಎರಡನೇ ವಾರದ ನಂತರ 22 ಎಸಿಯು ಬೆಡ್‌ಗಳಲ್ಲಿ ಚಿಕಿತ್ಸೆ ದೊರಕಲಿದೆ.

ಜೇವರ್ಗಿ ಎರಡು ಕಡೆ ಕೋವಿಡ್‌ ಕೇರ್‌ ಸೆಂಟರ್‌ ಸ್ಥಾಪನೆಗೆ ಧರ್ಮಸಿಂಗ್‌ ಫೌಂಡೇಷನ್‌ ವತಿಯಿಂದ ಅಗತ್ಯ ಸಹಾಯ ನೀಡುವುದಾಗಿ ಜಿಲ್ಲಾಡಳಿತಕ್ಕೆ ತಿಳಿಸಲಾಗಿದೆ. ಬೆಡ್‌ ಹಾಗೂ ಊಟದ ವ್ಯವಸ್ಥೆ ಮಾಡಲು ಮುಂದಾಗಲಾಗುವುದು. ಕಲಬುರಗಿಯಲ್ಲೂ ಒಂದು ಸೆಂಟರ್‌ಗೆ ಸಹಾಯ ಕಲ್ಪಿಸಲು ಬದ್ಧ. ಒಟ್ಟಾರೆ ಕೋವಿಡ್ ಹೊಡೆದೊಡೆಸಲು ಎಲ್ಲರೂ ಶಕ್ತಿಮೀರಿ ಶ್ರಮಿಸುವುದು ಅಗತ್ಯವಿದೆ.  –ಡಾ| ಅಜಯಸಿಂಗ್‌, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಜೇವರ್ಗಿ ಶಾಸಕ

ಜನರು ಸಾಮಾಜಿಕ ಅಂತರ ಹಾಗೂ ಪದೇ-ಪದೇ ಶುಚಿತ್ವ ಕಾಪಾಡಿಕೊಳ್ಳುವಂತೆ ಜಿಲ್ಲಾಡಳಿತ ಜನರಲ್ಲಿ ಮನವಿ ಮಾಡುತ್ತದೆ. ಎಲ್ಲರೂ ಐಸಿಯು ಬೆಡ್‌ ಕೇಳುವುದು ಸೂಕ್ತವಲ್ಲ. ರೋಗಿಯ ಸ್ಥಿತಿಗತಿ ನೋಡಿಕೊಂಡು ವೈದ್ಯರೇ ಶಿಫಾರಸ್ಸು ಮಾಡುತ್ತಾರೆ. ಇನಷ್ಟು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದೊರಕಲು ಮುಂದಾಗಲಾಗುವುದು.  –ಶರತ್‌ ಬಿ., ಜಿಲ್ಲಾಧಿಕಾರಿ ಕಲಬುರಗಿ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.