ಕೋವಿಡ್ ಪತ್ತೆ ಪರೀಕ್ಷೆ ಅರ್ಧದಷ್ಟು ಕಡಿತ!


Team Udayavani, Jun 1, 2021, 6:49 PM IST

zsdfghn zxcvbvcxz

ಕಲಬುರಗಿ: ಜಿಲ್ಲೆಯಲ್ಲಿ ಕೆಲ ಒಂದು ವಾರದಿಂದ ಹೊಸ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ಭಾರೀ ಇಳಿಕೆ ಕಾಣುತ್ತಿದ್ದು, ಇದರ ನಡುವೆಯೇ ಸೋಂಕು ಪತ್ತೆ ಪರೀಕ್ಷೆ ಪ್ರಮಾಣವನ್ನೂ ಕಡಿತಗೊಳಿಸಲಾಗಿದೆ. ಈ ಹಿಂದೆ ಆರು ಸಾವಿರ ಪರೀಕ್ಷೆಗಳು ನಡೆಯುತ್ತಿದ್ದರೆ, ಈಗ ಅರ್ಧದಷ್ಟು ಕಡಿಮೆ ಮಾಡಲಾಗಿದೆ. ಅಂದರೆ ಮೂರು ಸಾವಿರ ಪರೀಕ್ಷೆಗಳು ಮಾತ್ರ ಮಾಡಲಾಗುತ್ತಿದೆ. ಕಳೆದ ವರ್ಷ ಕೊರೊನಾ ಮೊದಲ ಅಲೆಯಲ್ಲಿ ದೇಶದಲ್ಲೇ ಮೊದಲ ಸಾವು ಕಂಡಿದ್ದ ಜಿಲ್ಲೆಯು ತಲ್ಲಣಿಸಿ ಹೋಗಿತ್ತು.

ಈ ವರ್ಷ ಮಾರ್ಚ್‌ನಲ್ಲಿ ಎರಡನೇ ಅಲೆಯಲ್ಲೂ ಜಿಲ್ಲೆ ನಲುಗಿ ಹೋಗಿದೆ. ಮೊದಲ ಅಲೆಗಿಂತ ಎರಡನೇ ಅಲೆ ಜಿಲ್ಲೆಗೆ ಅತ್ಯಂತ ಭೀಕರವಾಗಿ ಪರಿಣಮಿಸಿದೆ. ಕೆಲವೇ ಕೆಲ ದಿನಗಳಲ್ಲಿ ಹೊಸ ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆ ದುಪ್ಪಟ್ಟು ಆಗಿದೆ. ಮೇ ತಿಂಗಳ ಆರಂಭದಲ್ಲೇ 100 ಜನರಿಗೆ ಕೊರೊನಾ ಪರೀಕ್ಷೆ ಮಾಡಿದರೆ ಸರಾಸರಿ 30 ಜನರಿಗೆ ಸೋಂಕು ದೃಢಪಟ್ಟಿತ್ತು.

ಪರೀಕ್ಷೆ-ಪಾಸಿಟಿವ್‌ ಹೆಚ್ಚಿತ್ತೂ: ಜಿಲ್ಲೆಯಲ್ಲಿ ಜಿಮ್ಸ್‌ ಆಸ್ಪತ್ರೆ ಮತ್ತು ಇಎಸ್‌ಐ ಆಸ್ಪತ್ರೆ, ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಕೊರೊನಾ ಸೋಂಕು ಪತ್ತೆ ಪ್ರಯೋಗಾಲಯಗಳು ಇವೆ. ಅಲ್ಲದೇ, ಬಸವೇಶ್ವರ ಆಸ್ಪತ್ರೆ, ಕೆಬಿಎನ್‌ ಆಸ್ಪತ್ರೆ ಮತ್ತು ಯುನಿಟೈಡ್‌ ಆಸ್ಪತ್ರೆ ಸೇರಿ ಆರು ಖಾಸಗಿ ಪ್ರಯೋಗಾಲಯಗಳು ಇವೆ. ಕೇಂದ್ರೀಯ ವಿವಿಯ ಲ್ಯಾಬ್‌ನಲ್ಲಿ ಹೊರ ಜಿಲ್ಲೆಗಳ ಕೊರೊನಾ ಮಾದರಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಉಳಿದಂತೆ ಎಲ್ಲ ಪ್ರಯೋಗಾಲಯಗಳಲ್ಲಿ ಜಿಲ್ಲೆಯ ಮಾದರಿಗಳ ಪರೀಕ್ಷೆ ಮಾಡಬಹುದಾಗಿದೆ. ಮಾರ್ಚ್‌ನಲ್ಲಿ ಅಲೆ ಆರಂಭದ ದಿನದಿಂದಲೂ ನಿತ್ಯ ಆರು ಸಾವಿರ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗುತ್ತಿತ್ತು.

ಅಂತೆಯೇ ಆರಂಭದಲ್ಲಿ 500 ರಿಂದ ಕಳೆದ ಎರಡು ವಾರದವರೆಗೂ 1,500ಕ್ಕೂ ಹೆಚ್ಚು ಪಾಟಿಸಿವ್‌ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಆದರೆ, ಈಗ ಕೊರೊನಾ ಪತ್ತೆ ಪರೀಕ್ಷೆಗಳನ್ನು ಸರಾಸರಿ ಮೂರು ಸಾವಿರಕ್ಕೆ ಇಳಿಸಲಾಗಿದೆ. ಕೆಲವೊಮ್ಮೆ ಕೇವಲ 1,700, 1,800 ಪರೀಕ್ಷೆಗಳನ್ನು ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಕೊರೊನಾ ಪತ್ತೆ ಪರೀಕ್ಷೆಗಳ ಸಂಖ್ಯೆಯೇ ಕಡಿಮೆ ಆಗಿದ್ದರಿಂದ ಸಹಜವಾಗಿ ಹೊಸ ಪಾಸಿಟಿವ್‌ ಪ್ರಕರಣಗಳ ಸಂಖ್ಯೆಯಲ್ಲಿ ಕುಸಿಯುತ್ತಿದೆ. ಅಲ್ಲದೇ, ಏಕಾಏಕಿ ದಿನಕ್ಕೆ ನೂರಾರು ಜನ ಸೋಂಕಿತರನ್ನು ಗುಣಮುಖರಾಗಿದ್ದಾರೆ ಎಂದು ತೋರಿಸಲಾಗಿದೆ.

ಹೀಗಾಗಿ ಮೇ ಮೊದಲು ಮತ್ತು ಎರಡನೇ ವಾರದಲ್ಲಿ ಜಿಲ್ಲೆಯಲ್ಲಿ ಶೇ.30 ರಷ್ಟಿದ್ದ ಪಾಸಿಟಿವಿಟಿ ಪ್ರಮಾಣ ಈಗ ಶೇ.10ಕ್ಕಿಂತ ಕಡಿಮೆ ಇದೆ. ಇದು ಕೊರೊನಾ ಸೋಂಕಿನ ಪ್ರಮಾಣ ಕಡಿಮೆ ಆಗುತ್ತಿದೆ ಎಂದು ಬಿಂಬಿಸುವುದಕ್ಕೆ ಪರೀಕ್ಷೆಗಳನ್ನೇ ಕಡಿತ ಮಾಡಲಾಗುತ್ತಿದೆಯೇ ಎನ್ನುವ ಅನುಮಾನಕ್ಕೂ ಕಾರಣವಾಗಿದೆ.

ಅಧಿಕಾರಿಗಳು ಹೇಳುವುದೇನು?: ಈ ಮೊದಲು ಕೊರೊನಾ ಲಕ್ಷಣಗಳ ಹೊಂದಿದವರೊಂದಿಗೆ ಸಾಮೂಹಿಕವಾಗಿ ಪರೀಕ್ಷೆಗಳನ್ನು ನಡೆಸಲಾಗುತ್ತಿತ್ತು. ಸಾರ್ವಜನಿಕವಾಗಿ ಓಡಾಡುವವರು, ತರಕಾರಿ ಮಾರಾಟಗಾರರು, ಕಾಲೇಜುಗಳ ವಿದ್ಯಾರ್ಥಿಗಳು, ಹೊರ ಊರುಗಳಿಂದ ಬಂದವರ ಗಂಟಲು ಮತ್ತು ಮೂಗಿನ ದ್ರಾವಣ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸುತ್ತಿದ್ದೆವು.

ದಿನವೂ ಸರಾಸರಿ ಐದಾರು ಸಾವಿರ ಮಾದರಿ ಸಂಗ್ರಹವಾಗುತ್ತಿದ್ದವು. ಈಗ ಲಾಕ್‌ಡೌನ್‌ ಕಾರಣ ನಿರ್ದಿಷ್ಟ ಗುರಿ ಮೇಲೆ ಮೂರು ಸಾವಿರದಷ್ಟು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎನ್ನುತ್ತಾರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶರಣಬಸಪ್ಪ ಗಣಜಲಖೇಡ್‌. ಈಗ ಎಲ್ಲರಿಗೂ ಕೊರೊನಾ ಪತ್ತೆ ಪರೀಕ್ಷೆ ಮಾಡಲಾಗುತ್ತಿಲ್ಲ.

ರೋಗ ಲಕ್ಷಣ ಇರುವವರು, ಸೋಂಕಿತರ ಪ್ರಾಥಮಿಕ ಸಂಪರ್ಕಿತರು, ಗ್ರಾಮಗಳಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮನೆ ಸಮೀಕ್ಷೆ ಮಾಡುತ್ತಿದ್ದು, ಅಲ್ಲಿಂದ ಯಾರಾದರೂ ಶಂಕಿತರು ಕಂಡು ಬಂದರೆ, ಮಾದರಿ ಸಂಗ್ರಹಿಸಿ ಕೊರೊನಾ ಪತ್ತೆ ಪರೀಕ್ಷೆ ಮಾಡಲಾಗುತ್ತಿದೆ ಎಂದು ಡಿಎಚ್‌ಒ ಹೇಳಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.