ಕೋವಿಡ್ ವಾರಿಯರ್ಸ್ಗೆ ಕೋವಿಶೀಲ್ಡ್ ಲಸಿಕೆ
Team Udayavani, Jan 17, 2021, 11:49 AM IST
ಚಿಂಚೋಳಿ: ತಾಲೂಕಿನಲ್ಲಿ ಮೊದಲ ಹಂತದ ಕೋವಿಡ್-19 ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಒಟ್ಟು 1704 ಸಿಬ್ಬಂದಿ ಫಲಾನುಭವಿಗಳಾಗಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ದೀಪಕ ಪಾಟೀಲ ತಿಳಿಸಿದರು.
ಪಟ್ಟಣದ ಚಂದಾಪುರ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಮಹಿಳಾ ಮತ್ತು ಮಕ್ಕಳ ಇಲಾಖೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಕೆಪಿಎಂಸಿ ಖಾಸಗಿ ನೋಂದಾಯಿತ ವೈದ್ಯರು ಮತ್ತು ಸಿಬ್ಬಂದಿ ಇವೆರಲ್ಲರೂ ಫಲಾನುಭವಿಗಳಾಗಿದ್ದಾರೆ. ಕೋವಿಡ್ ಲಸಿಕೆ ನೀಡುವುದಕ್ಕಾಗಿ 170 ತಂಡ ರಚನೆ ಮಾಡಲಾಗಿದೆ. ಕೋವಿಡ್ ವ್ಯಾಕ್ಸಿನ್ ಪಡೆದವರಿಗೆ ಆಸ್ಪತ್ರೆಯಲ್ಲಿ ಅರ್ಧ ಗಂಟೆವರೆಗೆ ನಿಗಾ ವಹಿಸಲಾಗುತ್ತದೆ. ಅರ್ಧ ಗಂಟೆಗೊಮ್ಮೆ ಒಬ್ಬರಿಗೆ ಲಸಿಕೆ ನೀಡಲಾಗುವುದು.
ಇದನ್ನೂ ಓದಿ:ಸ್ವತ್ಛತೆ ನಿರ್ವಹಣೆ ಲೋಪ: ನಗರಸಭೆ ಅಧಿಕಾರಿಗಳಿಗೆ ತರಾಟ
ಶನಿವಾರ ಒಟ್ಟು 100 ಜನರಿಗೆ ಲಸಿಕೆ ನೀಡಲಾಗುವುದು ಎಂದು ಹೇಳಿದರು. ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ನಡೆದ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ತಾಪಂ ಇಒ ಅನಿಲಕುಮಾರ ರಾಠೊಡ ಉದ್ಘಾಟಿಸಿದರು. ಸರಕಾರಿ ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿ ಕಾರಿ ಡಾ| ಸಂಜಯ ಗೊಳೆ, ಕೋವಿಡ್ ಜಿಲ್ಲಾ ನೋಡಲ್ ಅಧಿ ಕಾರಿ ಡಾ| ರಾಜಕುಮಾರ ಕುಲಕರ್ಣಿ, ಡಾ| ಜಗದೀಶಚಂದ್ರ ಬುಳ್ಳ, ಡಾ| ಫಾತಿಮಾಬೇಗಂ, ಡಾ| ಸಂತೋಷ ಪಾಟೀಲ, ಡಾ| ಬೀರಪ್ಪ ಪೂಜಾರಿ, ಸಿಡಿಪಿಒ ಗುರುಪ್ರಸಾದ, ಮುಖ್ಯಾಧಿಕಾರಿ ಅಭಯಕುಮಾರ ಹಬೀಬ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…