ಬಿರುಕು ಬಿಟ್ಟ ಕೆರೆ ಒಡ್ಡು -ದುರಸ್ತಿಗೆ ಸೂಚನೆ
Team Udayavani, Aug 16, 2022, 4:36 PM IST
ಅಫಜಲಪುರ: ಪಟ್ಟಣದ ಹೊರವಲಯದಲ್ಲಿರುವ ಬಿರುಕು ಬಿಟ್ಟ ಕೆರೆ ಒಡ್ಡು ಸರಿಪಡಿಸದಿದ್ದಲ್ಲಿ ಒಡ್ಡು ಒಡೆದು ಜಮೀನುಗಳು ಹಾಳಾಗುವುದಲ್ಲದೇ ಅಂತರ್ಜಲಮಟ್ಟ ಕುಸಿಯುವುದು, ಹೀಗಾಗಿ ಅಧಿಕಾರಿಗಳು ಕೂಡಲೇ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಹೇಳಿದರು.
“ಹರ್ ಘರ್ ತಿರಂಗಾ’ ಅಭಿಯಾನದ ಬಳಿಕ ಪಟ್ಟಣದ ಹೊರ ವಲಯದಲ್ಲಿರುವ ಕೆರೆಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಪಟ್ಟಣದ ಜನರ ಜೀವನಾಡಿಯಾಗಿರುವ ಅಫಜಲಪುರ ಕೆರೆ ಒಡ್ಡು ಪ್ರತಿ ವರ್ಷ ಮಳೆಗಾಲ ಬಂದ ಸಂದರ್ಭದಲ್ಲಿ ಬಿರುಕು ಬಿಟ್ಟು ಒಡೆಯುವ ಹಂತಕ್ಕೆ ಬಂದು ನಿಲ್ಲುತ್ತದೆ. ಈಗಾಗಲೇ ನಮಗೆ ಬಂದ ಮಾಹಿತಿ ಪ್ರಕಾರ ಸುಮಾರು 65ರಿಂದ 80ಲಕ್ಷ ರೂ. ವರೆಗೆ ಕೆರೆ ದುರಸ್ತಿ ಕಾಮಗಾರಿಗಾಗಿ ಖರ್ಚು ಮಾಡಿರುವುದಾಗಿ ತಿಳಿದುಬಂದಿದೆ. ಆದರೂ ತಳಮಟ್ಟದಿಂದ ದುರಸ್ತಿ ಕಾರ್ಯವನ್ನು ಸಮರ್ಪಕವಾಗಿ ಮಾಡದ ಕಾರಣ ಕೆರೆ ಒಡೆಯುವ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ನಾನು ಸಂಬಂಧಪಟ್ಟ ಅಧಿಕಾರಿಗಳಿಗೆ ಕೆರೆ ದುರಸ್ತಿ ಕಾರ್ಯ ಕೈಗೊಳ್ಳಲು ಸೂಚಿಸಿದ್ದೇನೆ. ಈ ಕುರಿತು ಶಾಸಕರೊಂದಿಗೆ ಮಾತನಾಡಿದ್ದೇನೆ. ಹೀಗಾಗಿ ಕೂಡಲೇ ಈ ಕೆರೆ ದುರಸ್ತಿ ಕಾರ್ಯವನ್ನು ಅಧಿಕಾರಿಗಳು ವೈಜ್ಞಾನಿಕವಾಗಿ ಕೈಗೊಳ್ಳಬೇಕು ಎಂದರು.
ಜಿ.ಪಂ ಮಾಜಿ ಅಧ್ಯಕ್ಷ ನಿತೀನ್ ಗುತ್ತೇದಾರ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಶೈಲೇಶ ಗುಣಾರಿ, ಮುಖಂಡರಾದ ಮಳೇಂದ್ರ ಡಾಂಗೆ, ಅಶೋಕ ಬಗಲಿ, ಬೀರಣ್ಣ ಕಲ್ಲೂರ, ಪಾಶಾ ಮಣೂರ, ಮಂಜೂರ್ ಅಹ್ಮದ್ ಅಗರಖೇಡ, ಚಂದ್ರಶೇಖರ ನಿಂಬಾಳ, ಮಲ್ಲಿಕಾರ್ಜುನ ನಿಂಗದಳ್ಳಿ, ದತ್ತಾತ್ರೇಯ ದೇವರನಾದಗಿ, ದೇವಿಂದ್ರ ಜಮಾದಾರ, ಶಂಕರ ಮ್ಯಾಕೇರಿ, ಶ್ರೀಶೈಲ ಬಳೂರ್ಗಿ, ಸುನೀಲ ಶೆಟ್ಟಿ, ಭೀಮರಾಯ ಕಲಶೆಟ್ಟಿ, ಸಿದ್ಧು ಮ್ಯಾಕೇರಿ, ತನ್ವೀರ ಮಣ್ಣೂರ, ಭಾಗೇಶ ಬೋರೆಗಾಂವ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ