ಸಾಕ್ಷರತೆ ಅಭಿವೃದ್ಧಿಗೆ ಮಾನದಂಡ


Team Udayavani, Aug 20, 2017, 11:04 AM IST

saksharate.jpg

ಕಲಬುರಗಿ: ಸಾಕ್ಷರತೆ, ಆರೋಗ್ಯ ಮತ್ತು ತಲಾ ಆದಾಯ ಆಯಾ ದೇಶದ ಅಭಿವೃದ್ಧಿಯ ಮಾನದಂಡಗಳಾಗಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಾಂತಗೌಡ ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು. ಶನಿವಾರ ನಗರದ ಸಾರ್ವಜನಿಕ ಉದ್ಯಾನವನದ ರೋಟರಿ ಶಾಲೆ ಸಭಾಂಗಣದಲ್ಲಿ ರೋಟರಿ ಕ್ಲಬ್‌ ಹಮ್ಮಿಕೊಂಡಿದ್ದ ಭಾರತ ಸಾಕ್ಷಾರತಾ ಅಭಿಯಾನದಡಿ ಸರಕಾರಿ ಪ್ರೌಢಶಾಲೆ ಶಿಕ್ಷಕರಿಗಾಗಿ ಏರ್ಪಡಿಸಿದ್ದ ಸಮಗ್ರ ರಸಾಯನಶಾಸ್ತ್ರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಭಾರತದ ಸಾಕ್ಷರತಾ ಪ್ರಮಾಣ ಶೇ.75, ಕರ್ನಾಟಕದ್ದು ಶೇ.76 ಮತ್ತು ಕಲಬುರಗಿ ಜಿಲ್ಲೆಯದು ಶೇ 68 ರಷ್ಟು ಇದೆ. ಸಾಕ್ಷರತೆ ಪ್ರಮಾಣವನ್ನು ಶತ ಪ್ರತಿಶತವಾಗಿಸುವ ಪ್ರಯತ್ನವನ್ನು ಶಿಕ್ಷಣ ಇಲಾಖೆ ನಡೆಸುತ್ತಿದೆ. ಈ ಕಾರ್ಯದಲ್ಲಿ ರೋಟರಿ ಕ್ಲಬ್‌ನಂತಹ ಸಂಸ್ಥೆಗಳು ಉದಾತ್ತ ಮನಸ್ಸಿನಿಂದ ಶಿಕ್ಷಣ ಇಲಾಖೆ ಜತೆ ಕೈಜೋಡಿಸುತ್ತಿರುವುದು ಶ್ಲಾಘನೀಯ ಎಂದರು. ರೋಟರಿ ಕ್ಲಬ್‌ ಜಿಲ್ಲಾ ಸಾಕ್ಷಾರತಾ ಸಮಿತಿ ಅಧ್ಯಕ್ಷ ಡಾ| ಬಿ.ಇ. ರಂಗಸ್ವಾಮಿ ಮಾತನಾಡಿ, ಪೋಲಿಯೋ ನಿರ್ಮೂಲನಾ ಅಭಿಯಾನದಲ್ಲಿ ತೊಡಗಿಸಿಕೊಂಡ ರೋಟರಿ ಕ್ಲಬ್‌ ಇದೀಗ ಸಾಕ್ಷಾರತಾ ಆಂದೊಲನ ಕೈಗೆತ್ತಿಕೊಂಡಿದೆ. ಕಳೆದ 3ವರ್ಷದಲ್ಲಿ ಸುಮಾರು 15ಸಾವಿರ ಶಿಕ್ಷಕರಿಗೆ ವಿವಿಧ ವಿಷಯದ ತರಬೇತಿ ನೀಡಲಾಗಿದೆ. ಜಿಲ್ಲೆಯಲ್ಲಿ ವಿವಿಧ ಶಾಲೆಗಳಿಗೆ 200 ಇ ಕಲಿಕಾ ಉಪಕರಣ ವಿತರಿಸಲಾಗಿದೆ. ಶಾಲೆ ಬಿಟ್ಟ 6 ರಿಂದ 13 ವರ್ಷದದೊಳಗಿನ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ಉದ್ದೇಶ ರೋಟರಿ ಸಂಸ್ಥೆ ಹೊಂದಿದ್ದು, ಇದಕ್ಕಾಗಿಯೇ ಕಲಿಕಾಕೇಂದ್ರ ತೆರೆಯಲಾಗುವುದು. ವಿದ್ಯಾರ್ಥಿಗಳ ಅಭಿಪ್ರಾಯವನ್ನು ಆಧರಿಸಿ ಶಿಕ್ಷಕರನ್ನು ಗುರತಿಸಿ ಶಿಕ್ಷಕರ ದಿನಾವಾದ ಸಪ್ಟೆಂಬರ್‌ 5ರಂದು ಗೌರವಿಸಲಾಗುತ್ತಿದೆ ಎಂದರು. ರೋಟರಿ ಕ್ಲಬ್‌ ಅಸಿಸ್ಟಂಟ್‌ ಗೌರ್ನರ್‌ ಲಕ್ಷ್ಮೀಕಾಂತಮೈಲಾಪುರ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿಆಗಮಿಸಿದ ಪದ್ಮಾಪ್ರಭು, ಕರೀಮ ಅಂಜುಮ್‌, ವಲಯ ಕಾರ್ಯದರ್ಶಿ ಚೇತನ ಜೋಶಿ, ರೋಟರಿ ಕ್ಲಬ್‌ ಅಧ್ಯಕ್ಷರಾದ ಚಂದ್ರಶೇಖರ ತಳ್ಳಳ್ಳಿ, ಧನರಾಜ ಭಾಷಗಿ, ಎಂ.ಮುರಳಿಧರ, ಚಂದ್ರಶೇಖರ ಸುತ್ರಾವೆ, ಮಂಜುನಾಥ ಮಂಗಾಣೆ ಹಾಜರಿದ್ದರು. ರೋಟರಿ ಕ್ಲಬ್‌ ಸಾಕ್ಷರತಾ ವಲಯ ಅಧ್ಯಕ್ಷರಾದ ಡಾ| ಕೇಶವ ಬಿರಾದಾರ ಸ್ವಾಗತಿಸಿದರು. ಸುಮಾರು 160ಕ್ಕಿಂತ ಹೆಚ್ಚು ಶಿಕ್ಷಕ ಶಿಕ್ಷಕಿಯರು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.