ಬೆಳೆ ಹಾನಿ ಡಾಟಾ ಎಂಟ್ರಿ ಆರಂಭ ಯಾವಾಗ?


Team Udayavani, Aug 25, 2022, 4:49 PM IST

8-crop

ಆಳಂದ: ಮುಂಗಾರು ಮಳೆ ಅವಾಂತರದಿಂದಾಗಿ ತಾಲೂಕಿನ ಖಜೂರಿ, ಆಳಂದ ಸೇರಿದಂತೆ ಹಲವೆಡೆ ಅಲ್ಪಾವಧಿ ಬೆಳೆಯೊಂದಿಗೆ ದೀರ್ಘಾವಧಿ ಬೆಳೆಯೂ ಕೈಗೆಬಾರದೇ ಹಾನಿಗೀಡಾದರೂ ಸರ್ಕಾರದಿಂದ ಬೆಳೆ ಹಾನಿ ಪರಿಹಾರದ ಡಾಟಾ ಎಂಟ್ರಿ ಲಾಗಿನ್‌ಗೆ ನೋಂದಣಿ ಕಾರ್ಯ ಇನ್ನು ಆರಂಭವಾಗಿಲ್ಲ.

ಮಳೆ ಅವಾಂತರದಿಂದಾಗಿ ತಾಲೂಕಿನ ಖಜೂರಿ, ಆಳಂದ ವಲಯದ ತೋಟಗಾರಿಕೆ ಸೇರಿದಂತೆ ಮುಂಗಾರು ಬೆಳೆಗಳು ಹಾನಿಗೀಡಾಗಿವೆ. ರಸ್ತೆ, ಸೇತುವೆಗಳಿಗೆ ಹಾನಿ ಸಂಭವಿಸಿದೆ. ಅಲ್ಲದೇ 158 ಮನೆಗಳು ಭಾಗಶಃ ಕುಸಿದಿವೆ. ತೊಗರಿ, ಹೆಸರು, ಸೋಯಾಬಿನ್‌ ಬೆಳೆಗಳು ಶೇ. 70ರಷ್ಟು ಹಾನಿಯಾಗಿವೆ. ಆದರೆ ಜಂಟಿ ಸಮೀಕ್ಷೆ ಕಾರ್ಯ ನಡೆದಿದೆ ಎಂದು ಅಧಿಕಾರಿಗಳು ಹಾರಿಕೆ ಉತ್ತರ ನೀಡುತ್ತಿದ್ದಾರೆ. ಕೆಲವು ಭಾಗದಲ್ಲಿ ಬೆಳೆಯಿದ್ದರೂ ಇಳುವರಿ ಬರದಂತಾಗಿದೆ.

ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆಯಿಂದ ನಡೆಯುವ ಹಾನಿಯ ಜಂಟಿ ಸಮೀಕ್ಷೆ ವರದಿ ಪಡೆಯಲು ಸರ್ಕಾರದ ಬೆಳೆ ಹಾನಿ ಡಾಟಾ ಎಂಟ್ರಿಗೆ ಲಾಗಿನ್‌ ಆಗಬೇಕು. ಆದರೂ ಇನ್ನೂ ಈ ಕಾರ್ಯ ಆರಂಭವಾಗಿಲ್ಲ. ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಶಂಕರಗೌಡ ಪಾಟೀಲ ಅವರು, ಕಲ್ಲಂಗಡಿ, ಮೆಣಸಿನಕಾಯಿ, ಟೋಮ್ಯಾಟೋ, ಸವತೆ, ಪಪ್ಪಾಯಿ ಹೀಗೆ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದ್ದು ಸರ್ವೇ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ರಸ್ತೆ ಸೇತುವೆ ಹಾನಿ: ಸತತ ಮಳೆಯಿಂದ ಲಾಡಚಿಂಚೋಳಿ ಮಾರ್ಗದ ಭೂಸನೂರ- ಮಾದನಹಿಪ್ಪರಗಾ ರಸ್ತೆ, ರಾಜ್ಯ ಹೆದ್ದಾರಿ 32ರ ಸುಲೆಪೇಟ್‌ ಉಮರಗಾ ಹೆದ್ದಾರಿಯಲ್ಲಿ ಅಲ್ಲಲ್ಲಿ ರಸ್ತೆ ಹಾನಿಯಾಗಿದೆ. ಇದೇ ಹೆದ್ದಾರಿಯ ಆಳಂದ-ಖಜೂರಿ ವರೆಗಿನ ಹೆದ್ದಾರಿ ತೆಗ್ಗು ದಿನ್ನೆಗಳು ಬಿದ್ದಿದ್ದು, ತಡಕಲ್‌ ಬಳಿ ರಸ್ತೆ ಕೊಚ್ಚಿ ಸಂಚಾರಕ್ಕೆ ಅಡೆತಡೆಯಾಗಿದೆ. ಅವರಾದ-ಸದಾಶಿವಘಡ ಹೆದ್ದಾರಿ ರಸ್ತೆಗೆ ತೆಗ್ಗು ದಿನ್ನೆಗಳು ಬಿದ್ದಿವೆ. ಪಟ್ಟಣದ ಚೆಕ್‌ಪೋಸ್ಟ್‌ನಿಂದ ಎಚ್‌ ಕೆಇ ಡಿಗ್ರಿ ಕಾಲೇಜು ಸಂಪರ್ಕದ ಹೊಸ ರಸ್ತೆ ಸೇತುವೆಯ ಎರಡು ಬದಿಯಲ್ಲಿರುವ ದಿಬ್ಬು ಕೊಚ್ಚಿಹೋಗಿದೆ. ಮಳೆಯ ನೀರಿನ ರಭಸಕ್ಕೆ ಮಟಕಿ ಸೇತುವೆ ಮೇಲೆ ಪ್ರವಾಹ ಹರಿದು ರಸ್ತೆ ಕೊಚ್ಚಿಹೋಗಿ ಸಂಚಾರ ಕಡಿತವಾಗಿದೆ. ಸದ್ಯ ತಾತ್ಕಾಲಿಕವಾಗಿ ಸಂಚಾರದ ವ್ಯವಸ್ಥೆ ಕಲ್ಪಿಸಲಾಗಿದೆ.

ಹಡಲಗಿ, ಯಳಸಂಗಿ, ಕಣಮಸ್‌ ಸೇರಿದಂತೆ ಹಲವೆಡೆ ರಸ್ತೆಗಳ ಸ್ಥಿತಿ ಅಯೋಮಯವಾಗಿದೆ. ಹೊನ್ನಳ್ಳಿ, ದೇವಂತಗಿ, ಮಾಡಿಯಾಳ ನಡುವಿನ ರಸ್ತೆ ಇನ್ನೂ ಡಾಂಬರೀಕರಣ ಕಾಮಗಾರಿ ನಡೆಯಬೇಕಾಗಿದೆ. ಅನೇಕ ಗ್ರಾಮಗಳ ಸಂಪರ್ಕ ರಸ್ತೆಗಳಿಗೆ ಕೈಗೊಂಡ ಸೇತುವೆಗಳಿಗೆ ತಡೆಗೋಡೆಗಳಿಲ್ಲದ್ದಕ್ಕೆ ರಾತ್ರಿ ಸಂಚಾರ ಅಪಾಯಕಾರಿಯಾಗಿ ಪರಿಣಮಿಸಿದೆ. ಈ ಕುರಿತು ಸಂಬಂಧಿತ ಲೋಕೋಪಯೋಗಿ ಇಲಾಖೆ ಕಾರ್ಯಪ್ರವೃತ್ತವಾಗಬೇಕಿದೆ.

ಮಹಾದೇವ ವಡಗಾಂವ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.