ಬೆಳೆ ಕಿತ್ತು ಬಿಸಾಡಿದ ಅನ್ನದಾತ


Team Udayavani, Aug 9, 2017, 2:28 PM IST

toordal copy.JPG

ವಾಡಿ: ಕೆಂಡಕಾರುವ ಸೂರ್ಯನ ತಾಪಕಂಡು ಕಂಗೆಟ್ಟ ಕೃಷಿಕರು, ಬರ ಎಳೆದ ಬರೆಗೆ ಬಸವಳಿದು ಹೋಗಿದ್ದಾರೆ. ಮಳೆ ಕೊರತೆಯಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ರೈತರು, ಬೆಳೆದ ಬೆಳೆಯನ್ನು ಕಿತ್ತು ಬಿಸಾಡಿ ಕಣ್ಣೀರಿಟ್ಟಿದ್ದಾರೆ. ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣ ಸೇರಿದಂತೆ ವಿವಿಧೆಡೆ ಬೆಳೆಯಲಾಗಿದ್ದ ಮುಂಗಾರು ಬೆಳೆ ಬಾಡಿ ಬೆಂಡಾಗಿವೆ. ಭೂಮಿಯಲ್ಲಿ ತೇವಾಂಶ ಕೊರತೆಯುಂಟಾಗಿ ಪೈರುಗಳು ಕೊಳೆತು ಕಾಯಿ ಕಟ್ಟುವ ಮುಂಚೆಯೇ ನೆಲಕಚ್ಚಿವೆ. ನೆತ್ತಿ ಸುಡುವ ರಣಬಿಸಿಲು ಮುಂಗಾರು ಬೆಳೆಗಳ
ಮಾರಣಹೋಮಕ್ಕೆ ಕಾರಣವಾಗಿದೆ. ಧಾರಾಕರವಾಗಿ ಸುರಿದು ಶುಭಾರಂಭ ನೀಡಿದ್ದ ಮುಂಗಾರು ಮಳೆ ನಂಬಿ ಅ ಧಿಕ ಇಳುವರಿ ನಿರೀಕ್ಷೆಯಲ್ಲಿದ್ದ ರೈತರು ಹೆಸರು, ಉದ್ದು, ಎಳ್ಳು ಬಿತ್ತನೆ ಮಾಡಿದ್ದರು. ಹೇಳ ಹೆಸರಿಲ್ಲದಂತೆ ಮರೆಯಾದ ಮಳೆ ರೈತರ ಕಣ್ಣೀರಿಗೆ ಕಾರಣವಾಗಿದೆ. ತಿಳಿಮೋಡದ ಆಗಸದಲ್ಲಿ ನೇಸರನ ಪ್ರಕೋಪ ಕಂಡ ಈ ಭಾಗದ ರೈತರು, ಮಳೆ ಬೀಳುವ ನಂಬಿಕೆಯನ್ನೇ ಕಳೆದುಕೊಂಡಿದ್ದಾರೆ. ಒಣಬೇಸಾಯವನ್ನೇ ನಂಬಿಕೊಂಡಿರುವ ವಾಡಿ, ರಾವೂರ, ಸನ್ನತಿ, ಮಾಲಗತ್ತಿ, ಲಾಡ್ಲಾಪುರ, ಅಣ್ಣಿಕೇರಾ, ಕುಂದನೂರ, ಇಂಗಳಗಿ, ಚಾಮನೂರ, ಮಾರಡಗಿ, ಬನ್ನೇಟಿ, ಸನ್ನತಿ, ಉಳಂಡಗೇರಾ, ಕೊಲ್ಲೂರ ಗ್ರಾಮಗಳ ಭಾಗದಲ್ಲಿನ ನೂರಾರು ಎಕರೆ ಜಮೀನಿನಲ್ಲಿ ಬಿತ್ತನೆ ಮಾಡಲಾಗಿದ್ದ ಉದ್ದು ಮತ್ತು ಹೆಸರು ಬೆಳೆಗಳನ್ನು ಹರಗುವ ಕಾರ್ಯಕ್ಕೆ ರೈತರು ಚಾಲನೆ ನೀಡಿದ್ದಾರೆ. ಕಾಯಿ ಕಟ್ಟುವ ಹಂತದಲ್ಲಿದ್ದ ಬೆಳೆಗಳು ಒಣಗಿನಿಂತಿದ್ದನ್ನು ಕಂಡು ರೈತರು ಮರುಗುವಂತಾಗಿದ್ದು, ಬರದ ಭೀಕರತೆ
ಅನಾವರಣಗೊಳಿಸಿದೆ.

ರಕ್ಷಿಸಿದ ಬೆಳೆಯನ್ನೇ ಹರಗುವ ಪ್ರಸಂಗ: ಮುಂಗಾರು ಮಳೆ ಸುರಿದ ಅಬ್ಬರ ಕಂಡು ಉತ್ತಮ ಲಾಭದ ನಿರೀಕ್ಷೆಯಲ್ಲಿ ಹೆಸರು ಮತ್ತು ಉದ್ದು ಬಿತ್ತನೆಗೆ ಆದ್ಯತೆ ನೀಡಿದ್ದೆವು. ಆರಂಭಕ್ಕೆ ಬಂದ ಮುಂಗಾರು ಕೈಕೊಟ್ಟಿತು. ಹೂ
ಬಿಟ್ಟು ಕಾಯಿ ಕಟ್ಟಿದ ಬೆಳೆ ಸಾಲುಗಳು ಕೈಗೆಟುಕದೆ ಬಾಡುವ ಮೂಲಕ ಹೀಗೆ ನಮ್ಮ ಬಾಯಿಗೆ ಮಣ್ಣು ಹಾಕುತ್ತವೆ ಎಂದು ಅಂದುಕೊಂಡಿರಲಿಲ್ಲ. ಸಾಲ ಮಾಡಿ ಬೀಜ, ರಸಗೊಬ್ಬರ ಖರೀದಿಸಿ ರಕ್ಷಣೆ ಮಾಡಿದ ಬೆಳೆಯನ್ನು ನಾವೇ ಹರಗಿ ಹೊರ ಚೆಲ್ಲುವ ಪ್ರಸಂಗ ಬಂದಿದೆ. ಒಟ್ಟು 18 ಎಕರೆ ಹೊಲದಲ್ಲಿನ ಹೆಸರು ಬೆಳೆ ಹರಗಿ ಸುಮಾರು ಎರಡು ಲಕ್ಷ ರೂ. ನಷ್ಟ ಉಂಟಾಗಿದೆ.

 ಮಹೆಬೂಬ ಮಿರ್ಜಾ, ಮಲ್ಲೇಶಿ, ಬೊಮ್ಮನ್‌, ರಾವೂರಿನ, ರೈತರು

ಬರಸಿಡಿಲಂತೆ ಬಂದ ಮುಂಗಾರಿನ ಬರ: ಹೋದ ವರ್ಷದಂತೆ ಈ ವರ್ಷವೂ ಮುಂಗಾರಿನ ಬರ ಬರಸಿಡಿಲಿನಂತೆ ಬಂದೆರಗಿದೆ.
ನೂರಾರು ಎಕರೆಯಲ್ಲಿ ಬೆಳೆಯಲಾಗಿದ್ದ ಹೆಸರು ಮತ್ತು ಉದ್ದು ಸಂಪೂರ್ಣ ಬಾಡಿಹೋಗಿದೆ. ಹಿಂಗಾರಿನ ಬೆಳೆ ಜೋಳ ಬಿತ್ತುವ ಆಸೆಯಿಂದ ಹೆಸರು ಬೆಳೆ ಸಾಲುಗಳನ್ನು ಹರಗಲು ಆರಂಭಿಸಿದ್ದೇವೆ. ಒಂದು ಕಾಳು ಸಹ ಕೈಗೆ ಬರದಂತಾಗಿ ಕಷ್ಟದ
ಪರಿಸ್ಥಿತಿಯಲ್ಲಿದ್ದೇವೆ. ಬೆಳೆದು ನಿಂತ ತೊಗರಿಯೂ ನೀರಿಲ್ಲದೆ ಬಾಡುತ್ತಿವೆ. ಇನ್ನೊಂದು ವಾರದಲ್ಲಿ ಮಳೆ ಬಾರದಿದ್ದರೆ ತೊಗರಿಗೂ ಗಂಡಾಂತರ ತಪ್ಪಿದ್ದಲ್ಲ. ಸಾಲದ ಶೂಲಕ್ಕೆ ಸಿಕ್ಕ ನಮ್ಮನ್ನು ಸರಕಾರವೇ ಕಾಪಾಡಬೇಕು.

 ಇಸ್ಮಾಯಿಲ್‌ ಖಾನ್‌, ರೈತ

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.