ಸಂಸ್ಕೃತಿ ಬೆಳೆಸುವವರು ಕಲಾವಿದರು: ಶಿಲ್ಪಿ ಕಾಳಾಚಾರ್‌


Team Udayavani, Aug 31, 2018, 11:14 AM IST

gul-2.jpg

ಕಲಬುರಗಿ: ಸಂಸ್ಕೃತಿ ಉಳಿಸಿ ಬೆಳೆಸುವವರು ಕಲಾವಿದರಾದರೆ, ಕಲಾಕಾರರಿಗೆ ಅವಕಾಶ ಕೊಡುವವರೇ ಅವರ ಪೋಷಕರು ಎಂದು ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ ಶಿಲ್ಪಿ ರು. ಕಾಳಾಚಾರ ಹೇಳಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಹರಿಹರ ಸಭಾಂಗಣದಲ್ಲಿ ಗುರುವಾರ ನಡೆದ ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ಬೆಂಗಳೂರು ಹಾಗೂ ಕನ್ನಡ ಅಧ್ಯಯನ ಸಂಸ್ಥೆ, ಗುಲಬರ್ಗಾ ವಿಶ್ವವಿದ್ಯಾಲಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ “ಭಾವ ಶಿಲ್ಪ’ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಲಾವಿದನ ಕೈಯಲ್ಲಿ ಅರಳಿದ ಕಲಾಕೃತಿಗಳು ಸಾವಿರಾರು ವರ್ಷಗಳ ಕಾಲ ಉಳಿಯುವಂತದ್ದು. ಪ್ರತಿ ಕಲಾಕೃತಿಯೂ ಒಂದೊಂದು ಕಥೆ ಹೇಳುತ್ತದೆ. ಹೀಗಾಗಿ ಹಂಪಿಯಂತಹ ತಾಣಕ್ಕೆ ಕಲಾವಿದ ಕೆತ್ತಿದ ಕಲಾಕೃತಿಗಳನ್ನು ನೋಡಲು
ಜಗತ್ತಿನಾದ್ಯಂತ ಪ್ರವಾಸಿಗರು ಬರುತ್ತಾರೆ ಎಂದರು.
 
ಎಲ್ಲ ಶಿಬಿರಗಳಿಗಿಂತ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ನಡೆದ ಭಾವ ಶಿಲ್ಪ ಶಿಬಿರ ಅತ್ಯಂತ ಯಶಸ್ವಿಯಾಗಿದೆ. ಇಂತಹ ಶಿಬಿರಗಳನ್ನು ಹಮ್ಮಿಕೊಳ್ಳುವ ಮೂಲಕ ಕಲಾವಿದರಿಗೆ ಹೆಚ್ಚೆಚ್ಚು ಅವಕಾಶಗಳನ್ನು ಮಾಡಿಕೊಡಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಹಿರಿಯ ಕಲಾವಿದ ನಾಡೋಜ ಡಾ| ಜೆ.ಎಸ್‌. ಖಂಡೇರಾವ್‌ ಮಾತನಾಡಿ, ಕಲೆ ಭಾವನೆಗಳ ಅಖಂಡ ಅಭಿವ್ಯಕ್ತಿಯಾಗಿದೆ. ಕಲೆಯು ಮಾನವ ಸಂಸ್ಕೃತಿ ಹಾಗೂ ಜನಾಂಗದ ಸಂಸ್ಕೃತಿ ಪ್ರತಿನಿಧಿಸುತ್ತದೆ ಎಂದರು. 

ವಿಶ್ವವಿದ್ಯಾಲಯದ ಪ್ರಭಾರಿ ಕುಲಪತಿ ಪ್ರೊ| ಎಸ್‌.ಪಿ. ಮೇಲಕೇರಿ, ಶಿಲ್ಪಕಲಾ ಅಕಾಡೆಮಿ ರಿಜಿಸ್ಟ್ರಾರ್‌ ಇಂದ್ರಮ್ಮ ಎಚ್‌.ವಿ ಮಾತನಾಡಿದರು. ಶಿಬಿರದ ನಿರ್ದೇಶಕ ನಾರಾಯಣ ಸೂತ್ರಧಾರ್‌ ಮತ್ತು 20 ಹಿರಿಯ ಮತ್ತು ಸಹಾಯಕ ಶಿಲ್ಪಿಗಳನ್ನು ಸನ್ಮಾನಿಸಲಾಯಿತು. ಇದಕ್ಕೂ ಮುನ್ನ 10 ದಿನಗಳ ಕಾಲ ಕಲಾವಿದರು ರಚಿಸಿದ ಕುವೆಂಪು, ದ.ರಾ.
ಬೇಂದ್ರೆ, ಬುದ್ಧ, ಬಸವ, ಕನಕದಾಸ, ಗಾಂಧಿ, ಅಂಬೇಡ್ಕರ್‌, ಸಾವಿತ್ರಿಬಾಯಿ ಪುಲೆ, ಎಸ್‌. ಎಂ. ಪಂಡಿತ ಸೇರಿದಂತೆ 11 ಸಾಧಕರ ಫೈಬರ್‌ ಕಲಾಕೃತಿಗಳನ್ನು ಡಾ| ಜೆ.ಎಸ್‌. ಖಂಡೇರಾವ್‌ ಲೋಕಾರ್ಪಣೆಗೊಳಿಸಿದರು.

ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ| ಎಚ್‌.ಟಿ.ಪೋತೆ, ಶಿಲ್ಪಕಲಾ ಅಕಾಡೆಮಿಯ ಸದಸ್ಯ ಸಂಚಾಲಕ ನಿಂಗಪ್ಪಾ
ಡಿ.ಕೇರಿ, ಶಿಲ್ಪಿಗಳಾದ ಶಿವಮೊಗ್ಗದ ವಿಶಾಲ್‌ ಕೆ., ಬೆಂಗಳೂರಿನ ವೆಂಕಟೇಶ ಎಂ., ಕಲಬುರಗಿಯ ಜಗನ್ನಾಥ ಜಕ್ಕೇಪಳ್ಳಿ, ಮೈಸೂರಿನ ರಾಘವೇಂದ್ರ ಹಾಜರಿದ್ದರು.

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.