ಮೀಸಲಾತಿ ಬದಲು ನಿರ್ಧಾರಕ್ಕೆ ದಲಿತ ಸೇನೆ ವಿರೋಧ
Team Udayavani, Nov 22, 2018, 10:38 AM IST
ಆಳಂದ: ಸರ್ಕಾರಿ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಮೀಸಲಾತಿ ಬದಲಾವಣೆಗೆ ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ದಲಿತ ಸೇನೆ ತಾಲೂಕು ಘಟಕ ವಿರೋಧಿಸಿದೆ.
ಈ ಕುರಿತು ಸೇನೆ ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಾರ್ಜುನ ಬೋಳಣಿ ನೇತೃತ್ವದಲ್ಲಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಕಾರ್ಯಕರ್ತರು, ಸರ್ಕಾರಿ ಹುದ್ದೆಯಲ್ಲಿ ಮೊದಲಿನಂತೆ ಮೀಸಲಾತಿ ಮುಂದುವರಿಸಬೇಕು. ಕೋರ್ಟ್ ಆದೇಶದಂತೆ ಪಂಗಡದ ನೌಕರರ ಹಿಂಬಡ್ತಿ, ಮುಂಬಡ್ತಿಗಳನ್ನು ಮುಂದುವರಿಸಬೇಕು ಎಂದು ಆಗ್ರಹಿಸಿದರು.
ನೌಕರರಿಗೆ ಬಡ್ತಿ ಮೀಸಲಾತಿ ನೀಡುವಂತೆ ಈಗಾಗಲೇ ಸುಪ್ರೀಂಕೋರ್ಟ್ ಆದೇಶ ನೀಡದರೂ ಸಹಿತ ಸರ್ಕಾರ ಕ್ರಮಕೈಗೊಂಡಿಲ್ಲ. ಕೂಡಲೇ ಕೋರ್ಟ್ ಆದೇಶ ಜಾರಿಗೆ ತರುವ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿ) ನಿಯಮಿತ ನೌಕರರ ಸಾಮಾನ್ಯ ವರ್ಗದಲ್ಲಿನ ಎಸ್ಸಿ-ಎಸ್ಟಿ ಮೀಸಲಾತಿ ರದ್ದುಗೊಳಿಸಲು ಕೈಗೊಂಡ ಕ್ರಮ ಖಂಡನೀಯವಾಗಿದೆ. ಮೊದಲಿನ ಪದ್ಧತಿಯಂತೆ ಮೀಸಲಾತಿ ಮುಂದುವರಿಸಬೇಕು ಎಂದು ಒತ್ತಾಯಿಸಿ ಗ್ರೇಡ್-2 ತಹಶೀಲ್ದಾರ್ ಬಿ.ಜಿ. ಕುದರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಮುಖಂಡ ಧರ್ಮಾ ಬಂಗರಗಾ, ಶಶಿ ಮುನೋಳಿ, ಮಹೇಶ ಕೋಚಿ ಹಾಗೂ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು